ETV Bharat / state

ಅಕ್ರಮ ಮರಳು ಕೇಂದ್ರದಲ್ಲಿ ಕೊರೊನಾ ಸೋಂಕಿತರ ಕೆಲಸ: ವರದಿಗೆ ತೆರಳಿದ ಮಾಧ್ಯಮದವರಿಗೆ ನಿಂದನೆ - ಬಾಗಲಕೋಟೆಯಲ್ಲಿ ಮಾಧ್ಯಮ ಮತ್ತು ಗ್ರಾಮಸ್ಥರ ನಡುವೆ ಗಲಾಟೆ,

ಅಕ್ರಮ ಮರಳು ಕೇಂದ್ರದಲ್ಲಿ ಕೊರೊನಾ ಸೋಂಕಿತರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕರೊಂದಿಗೆ ವರದಿಗೆ ತೆರಳಿದ್ದ ಮಾಧ್ಯಮದವರನ್ನು ಸ್ಥಳೀಯರು ನಿಂದಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

Clash between media and villagers, Clash between media and villagers in Bagalkot, Bagalkot news, ಮಾಧ್ಯಮ ಮತ್ತು ಗ್ರಾಮಸ್ಥರ ನಡುವೆ ಗಲಾಟೆ, ಬಾಗಲಕೋಟೆಯಲ್ಲಿ ಮಾಧ್ಯಮ ಮತ್ತು ಗ್ರಾಮಸ್ಥರ ನಡುವೆ ಗಲಾಟೆ, ಬಾಗಲಕೋಟೆ ಸುದ್ದಿ,
ವರದಿಗೆ ತೆರಳಿದ್ದ ಮಾಧ್ಯಮದವರನ್ನು ನಿಂದಿಸಿದ ಸ್ಥಳೀಯರು
author img

By

Published : May 13, 2021, 7:27 AM IST

ಬಾಗಲಕೋಟೆ: ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕೇಂದ್ರದಲ್ಲಿ ಕೊರೊನಾ ಸೋಂಕಿತರು ಕೆಲಸ ಮಾಡುವ ಬಗ್ಗೆ ಮಾಹಿತಿ ಪಡೆದು ಸುದ್ದಿ ಮಾಡಲು ಸ್ಥಳಕ್ಕೆ ತೆರಳಿದ ಮಾಧ್ಯಮದವರನ್ನು ಸ್ಥಳೀಯರು ಅವಾಚ್ಯ ಶಬ್ದದಿಂದ ನಿಂದಿಸಿ, ಹಲ್ಲೆ ಯತ್ನ ನಡೆಸಿದ್ದಾರೆ. ಈ ಘಟನೆ ಇಲಕಲ್ಲ ತಾಲೂಕಿನ ತುಂಬ ಗ್ರಾಮದ ಬಳಿ ಜರುಗಿದೆ.

ವರದಿಗೆ ತೆರಳಿದ್ದ ಮಾಧ್ಯಮದವರಿಗೆ ಸ್ಥಳೀಯರ ನಿಂದನೆ

ಶಾಸಕ ದೊಡ್ಡನಗೌಡ ಪಾಟೀಲ ಕುಮ್ಮಕ್ಕಿನಿಂದಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಿ ಕೊರೊನಾ ಸೋಂಕಿತರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮವರನ್ನು ಘಟನಾ ಸ್ಥಳಕ್ಕೆ ಕರೆಸಿದ್ದರು. ಈ ಸಂದರ್ಭದಲ್ಲಿ ಜಮೀನಿಗೆ ಸಂಬಂಧಪಟ್ಟವರು ಹಾಗೂ ಸ್ಥಳೀಯರು ಮಾಧ್ಯಮದವರನ್ನು ತಡೆದಿದ್ದಾರೆ. ಖಾಸಗಿ ಜಮೀನಿಗೆ ಬರಲು ಯಾರಿಂದ ಅನುಮತಿ ಪಡೆದುಕೊಂಡಿರಿ? ಎಂದು ಪ್ರಶ್ನಿಸಿದರು.

ಇಷ್ಟಕ್ಕೆ ಸುಮ್ಮನಾಗದ ಸ್ಥಳೀಯರು ಮಾಧ್ಯಮದವರು ತೆಗದುಕೊಂಡು ಹೋಗಿದ್ದ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದದಿಂದ ನಿಂದಿಸಿದರು. ಈ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪನವರ ಹಾಗೂ ಸ್ಥಳೀಯ ಯುವಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಬಾಗಲಕೋಟೆ: ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕೇಂದ್ರದಲ್ಲಿ ಕೊರೊನಾ ಸೋಂಕಿತರು ಕೆಲಸ ಮಾಡುವ ಬಗ್ಗೆ ಮಾಹಿತಿ ಪಡೆದು ಸುದ್ದಿ ಮಾಡಲು ಸ್ಥಳಕ್ಕೆ ತೆರಳಿದ ಮಾಧ್ಯಮದವರನ್ನು ಸ್ಥಳೀಯರು ಅವಾಚ್ಯ ಶಬ್ದದಿಂದ ನಿಂದಿಸಿ, ಹಲ್ಲೆ ಯತ್ನ ನಡೆಸಿದ್ದಾರೆ. ಈ ಘಟನೆ ಇಲಕಲ್ಲ ತಾಲೂಕಿನ ತುಂಬ ಗ್ರಾಮದ ಬಳಿ ಜರುಗಿದೆ.

ವರದಿಗೆ ತೆರಳಿದ್ದ ಮಾಧ್ಯಮದವರಿಗೆ ಸ್ಥಳೀಯರ ನಿಂದನೆ

ಶಾಸಕ ದೊಡ್ಡನಗೌಡ ಪಾಟೀಲ ಕುಮ್ಮಕ್ಕಿನಿಂದಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಿ ಕೊರೊನಾ ಸೋಂಕಿತರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮವರನ್ನು ಘಟನಾ ಸ್ಥಳಕ್ಕೆ ಕರೆಸಿದ್ದರು. ಈ ಸಂದರ್ಭದಲ್ಲಿ ಜಮೀನಿಗೆ ಸಂಬಂಧಪಟ್ಟವರು ಹಾಗೂ ಸ್ಥಳೀಯರು ಮಾಧ್ಯಮದವರನ್ನು ತಡೆದಿದ್ದಾರೆ. ಖಾಸಗಿ ಜಮೀನಿಗೆ ಬರಲು ಯಾರಿಂದ ಅನುಮತಿ ಪಡೆದುಕೊಂಡಿರಿ? ಎಂದು ಪ್ರಶ್ನಿಸಿದರು.

ಇಷ್ಟಕ್ಕೆ ಸುಮ್ಮನಾಗದ ಸ್ಥಳೀಯರು ಮಾಧ್ಯಮದವರು ತೆಗದುಕೊಂಡು ಹೋಗಿದ್ದ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದದಿಂದ ನಿಂದಿಸಿದರು. ಈ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪನವರ ಹಾಗೂ ಸ್ಥಳೀಯ ಯುವಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.