ETV Bharat / state

ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ : ಬಾಗಲಕೋಟೆ ಡಿಸಿ

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆ. 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ತಿಳಿಸಿದರು.

author img

By

Published : Aug 12, 2020, 9:19 PM IST

Meeting
Meeting

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆ. 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬೆಳೆ ಸಮೀಕ್ಷೆ ಕಾರ್ಯ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳೆ ಸಮೀಕ್ಷೆ ಯೋಜನೆಯನ್ವಯ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೇ ನಂಬರ್ ಪ್ರಕಾರ, ತಾವು ಬೆಳೆದ ಕೃಷಿ ಬೆಳೆ ಹಾಗು ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆ ಕುರಿತು ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು.

ಈ ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೇ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಬೆಳೆ ಸಮೀಕ್ಷೆ ಅನುಕೂಲವಾಗಲಿದೆ ಎಂದರು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ ಹಾಗು ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಇದನ್ನು ಬಳಸಬಹುದಾಗಿದೆ.

ಹಾಗಾಗಿ ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿಯನ್ನು ದಾಖಲಿಸಲು ಸಹಕರಿಸಬೇಕು ಎಂದು ತಿಳಿಸಿದರು.

ಈ ಸಮೀಕ್ಷೆ ಕಾರ್ಯವನ್ನು ಆ. 24 ರೊಳಗಾಗಿ ಅಪ್‍ಲೋಡ್ ಮಾಡಲು ಕಾಲಮಿತಿ ನಿಗಧಿಪಡಿಸಲಾಗಿದೆ. ರೈತರು ನಿಗಧಿತ ಸಮಯದೊಳಗೆ ತಾವು ಬೆಳೆದ ಬೆಳೆ ಮಾಹಿತಿಯನ್ನು ಅಪ್‍ಲೋಡ್ ಮಾಡದೆ ಇದ್ದ ಪಕ್ಷದಲ್ಲಿ ಆಗಸ್ಟ್ 24 ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆ ಕುರಿತು ಆ್ಯಪ್‍ನಲ್ಲಿ ನಮೂದಿಸಿದನ್ನು ನೋಡಲ್ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳತಕ್ಕದ್ದು. ಪ್ರತಿ ಮೂರು ದಿನಗಳಿಗೊಮ್ಮೆ ಬೆಳೆ ನೋಂದಣಿಯಾದ ಪ್ರತಿಶತ ವಿವರಗಳನ್ನು ನೀಡಲು ತಿಳಿಸಿದರು. ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ತಹಶೀಲ್ದಾರರದ್ದಾಗಿದೆ. ತಾಂತ್ರಿಕ ಸಮಸ್ಯೆ ಏನೇ ಬಂದರೂ ಸಹ ಪ್ರತಿ ತಾಲೂಕಿಗೊಬ್ಬರಂದತೆ ಟೆಕ್ನಿಶಿನರ್‍ ಗಳನ್ನು ನೀಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ ಮಾತನಾಡಿ, ಮಿಶ್ರ ಬೆಳೆಯನ್ನು ಸರಿಯಾಗಿ ನಮೂದು ಮಾಡಬೇಕು. ನಮೂದಾದ ಬಗ್ಗೆ ರೂಟ್ ಲೆವೆಲ್ ಮಾನಿಟರ್ ಆಗುವ ಅಗತ್ಯವಿದೆ ಎಂದು ತಿಳಿಸಿದರು.

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆ. 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬೆಳೆ ಸಮೀಕ್ಷೆ ಕಾರ್ಯ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳೆ ಸಮೀಕ್ಷೆ ಯೋಜನೆಯನ್ವಯ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೇ ನಂಬರ್ ಪ್ರಕಾರ, ತಾವು ಬೆಳೆದ ಕೃಷಿ ಬೆಳೆ ಹಾಗು ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆ ಕುರಿತು ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು.

ಈ ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೇ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಬೆಳೆ ಸಮೀಕ್ಷೆ ಅನುಕೂಲವಾಗಲಿದೆ ಎಂದರು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ ಹಾಗು ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಇದನ್ನು ಬಳಸಬಹುದಾಗಿದೆ.

ಹಾಗಾಗಿ ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿಯನ್ನು ದಾಖಲಿಸಲು ಸಹಕರಿಸಬೇಕು ಎಂದು ತಿಳಿಸಿದರು.

ಈ ಸಮೀಕ್ಷೆ ಕಾರ್ಯವನ್ನು ಆ. 24 ರೊಳಗಾಗಿ ಅಪ್‍ಲೋಡ್ ಮಾಡಲು ಕಾಲಮಿತಿ ನಿಗಧಿಪಡಿಸಲಾಗಿದೆ. ರೈತರು ನಿಗಧಿತ ಸಮಯದೊಳಗೆ ತಾವು ಬೆಳೆದ ಬೆಳೆ ಮಾಹಿತಿಯನ್ನು ಅಪ್‍ಲೋಡ್ ಮಾಡದೆ ಇದ್ದ ಪಕ್ಷದಲ್ಲಿ ಆಗಸ್ಟ್ 24 ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆ ಕುರಿತು ಆ್ಯಪ್‍ನಲ್ಲಿ ನಮೂದಿಸಿದನ್ನು ನೋಡಲ್ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳತಕ್ಕದ್ದು. ಪ್ರತಿ ಮೂರು ದಿನಗಳಿಗೊಮ್ಮೆ ಬೆಳೆ ನೋಂದಣಿಯಾದ ಪ್ರತಿಶತ ವಿವರಗಳನ್ನು ನೀಡಲು ತಿಳಿಸಿದರು. ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ತಹಶೀಲ್ದಾರರದ್ದಾಗಿದೆ. ತಾಂತ್ರಿಕ ಸಮಸ್ಯೆ ಏನೇ ಬಂದರೂ ಸಹ ಪ್ರತಿ ತಾಲೂಕಿಗೊಬ್ಬರಂದತೆ ಟೆಕ್ನಿಶಿನರ್‍ ಗಳನ್ನು ನೀಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ ಮಾತನಾಡಿ, ಮಿಶ್ರ ಬೆಳೆಯನ್ನು ಸರಿಯಾಗಿ ನಮೂದು ಮಾಡಬೇಕು. ನಮೂದಾದ ಬಗ್ಗೆ ರೂಟ್ ಲೆವೆಲ್ ಮಾನಿಟರ್ ಆಗುವ ಅಗತ್ಯವಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.