ETV Bharat / state

ಬಾಗಲಕೋಟೆಯಲ್ಲಿ ಶಿವಯೋಗಿ ಸಿದ್ಧರಾಮೇಶ್ವರ್​​ ಜಯಂತಿ..

ನವನಗರದ ಡಾ.ಬಿ.ಆರ್ ಅಂಬೇಡ್ಕರ್​ ಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಹಾಗೆಯೇ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

author img

By

Published : Jan 15, 2020, 10:06 AM IST

Shivayogi Siddarameshwara Jayanthi Program at Bagalkot
ಬಾಗಲಕೋಟೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ

ಬಾಗಲಕೋಟೆ: ಹಠಯೋಗಿಯಾಗಿ ಹುಟ್ಟಿ ಕರ್ಮಯೋಗಿಯಾಗಿ ಬೆಳೆದ ಶಿವಯೋಗಿ ಸಿದ್ದರಾಮೇಶ್ವರರ ತತ್ತ್ವ, ಸಿದ್ಧಾಂತ ಹಾಗೂ ಸಾಮಾಜಿಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ತಿಳಿಸಿದರು.

ನಿನ್ನೆ ನವನಗರದ ಡಾ.ಬಿ.ಆರ್ ಅಂಬೇಡ್ಕರ್​ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಂದೇ ಸಮಾಜಕ್ಕೆ ಸೀಮಿತರಾಗಿರದೇ ಎಲ್ಲೆಡೆ ಸಮಾನತೆ ಸಾರಿದವರು. ಅಂತಹ ಶರಣರು ಜೀವಿಸಿದ ನಾಡಿನಲ್ಲಿ ನಾವು ಕೂಡಾ ಜನಿಸಿದ್ದು, ಅವರು ಹಾಕಿಕೊಟ್ಟ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ ಅವರು ಮಾತನಾಡಿ, ಸಮಾಜದಲ್ಲಿ ಮುಂದೆ ಬರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾಭ್ಯಾಸದ ಮೇಲೆ ಹೆಚ್ಚು ಒತ್ತು ಕೊಡುವ ಮೂಲಕ ತಾಯಂದಿರು ತಮ್ಮ ಮಕ್ಕಳು ಒಳ್ಳೆಯ ಹುದ್ದೆಗಳನ್ನು ಪಡೆಯುವಂತೆ ಮಾಡಬೇಕೆಂದರು.

ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ನಗರದ ಬಸವೇಶ್ವರ ವಿಜ್ಞಾನ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ ಕೆಂಗಲಗುತ್ತಿ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣ, ಅಲ್ಲಮಪ್ರಭುಗಳು ಬಿಂಬಿಸಿದ ಆದರ್ಶ ಸಮಾಜದ ಕನಸು ನನಸಾಗಿಸುವ ನಿಟ್ಟಿನಲ್ಲಿ ಮುನ್ನಡೆದವರಾಗಿದ್ದಾರೆ. ಭಕ್ತಿಗೆ ಬಸವಣ್ಣ, ವೈರಾಗ್ಯಕ್ಕೆ ಅಲ್ಲಮ ಹೇಗೋ ಕಾಯಕಕ್ಕೆ ಸಿದ್ದರಾಮೇಶ್ವರ ಎಂದು ತಿಳಿಸಿದರು.

Shivayogi Siddarameshwara Jayanthi Program at Bagalkot
ಬಾಗಲಕೋಟೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ

ಇನ್ನೂ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ನಿಮಿತ್ತ ಮೆರವಣಿಗೆ ಆಯೋಜಿಸಿದ್ದು, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭವಾಗಿ ನವನಗರದ ಬಸ್ ನಿಲ್ದಾಣ, ಎಲ್.ಐ.ಸಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್ ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳಾದ ಝಾಂಜ್​​ ಪಥಕ್, ಡೊಳ್ಳು ಕುಣಿತದ ಆಕರ್ಷಣೆ ಇತ್ತು. ಪೂರ್ಣ ಕುಂಭ ಹೊತ್ತ ಮಹಿಳೆಯರು ಆಕರ್ಷಣೀಯ ಕೇಂದ್ರ ಬಿಂದು ಆಗಿದ್ದರು. ಇದೇ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಡೊಳ್ಳು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು.

ಬಾಗಲಕೋಟೆ: ಹಠಯೋಗಿಯಾಗಿ ಹುಟ್ಟಿ ಕರ್ಮಯೋಗಿಯಾಗಿ ಬೆಳೆದ ಶಿವಯೋಗಿ ಸಿದ್ದರಾಮೇಶ್ವರರ ತತ್ತ್ವ, ಸಿದ್ಧಾಂತ ಹಾಗೂ ಸಾಮಾಜಿಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ತಿಳಿಸಿದರು.

ನಿನ್ನೆ ನವನಗರದ ಡಾ.ಬಿ.ಆರ್ ಅಂಬೇಡ್ಕರ್​ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಂದೇ ಸಮಾಜಕ್ಕೆ ಸೀಮಿತರಾಗಿರದೇ ಎಲ್ಲೆಡೆ ಸಮಾನತೆ ಸಾರಿದವರು. ಅಂತಹ ಶರಣರು ಜೀವಿಸಿದ ನಾಡಿನಲ್ಲಿ ನಾವು ಕೂಡಾ ಜನಿಸಿದ್ದು, ಅವರು ಹಾಕಿಕೊಟ್ಟ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ ಅವರು ಮಾತನಾಡಿ, ಸಮಾಜದಲ್ಲಿ ಮುಂದೆ ಬರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾಭ್ಯಾಸದ ಮೇಲೆ ಹೆಚ್ಚು ಒತ್ತು ಕೊಡುವ ಮೂಲಕ ತಾಯಂದಿರು ತಮ್ಮ ಮಕ್ಕಳು ಒಳ್ಳೆಯ ಹುದ್ದೆಗಳನ್ನು ಪಡೆಯುವಂತೆ ಮಾಡಬೇಕೆಂದರು.

ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ನಗರದ ಬಸವೇಶ್ವರ ವಿಜ್ಞಾನ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ ಕೆಂಗಲಗುತ್ತಿ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣ, ಅಲ್ಲಮಪ್ರಭುಗಳು ಬಿಂಬಿಸಿದ ಆದರ್ಶ ಸಮಾಜದ ಕನಸು ನನಸಾಗಿಸುವ ನಿಟ್ಟಿನಲ್ಲಿ ಮುನ್ನಡೆದವರಾಗಿದ್ದಾರೆ. ಭಕ್ತಿಗೆ ಬಸವಣ್ಣ, ವೈರಾಗ್ಯಕ್ಕೆ ಅಲ್ಲಮ ಹೇಗೋ ಕಾಯಕಕ್ಕೆ ಸಿದ್ದರಾಮೇಶ್ವರ ಎಂದು ತಿಳಿಸಿದರು.

Shivayogi Siddarameshwara Jayanthi Program at Bagalkot
ಬಾಗಲಕೋಟೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ

ಇನ್ನೂ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ನಿಮಿತ್ತ ಮೆರವಣಿಗೆ ಆಯೋಜಿಸಿದ್ದು, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭವಾಗಿ ನವನಗರದ ಬಸ್ ನಿಲ್ದಾಣ, ಎಲ್.ಐ.ಸಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್ ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳಾದ ಝಾಂಜ್​​ ಪಥಕ್, ಡೊಳ್ಳು ಕುಣಿತದ ಆಕರ್ಷಣೆ ಇತ್ತು. ಪೂರ್ಣ ಕುಂಭ ಹೊತ್ತ ಮಹಿಳೆಯರು ಆಕರ್ಷಣೀಯ ಕೇಂದ್ರ ಬಿಂದು ಆಗಿದ್ದರು. ಇದೇ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಡೊಳ್ಳು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು.

Intro:AnchorBody:ಸಿದ್ದರಾಮೇಶ್ವರರ ತತ್ವಾದರ್ಶ ಒಳವಡಿಸಿಕೊಳ್ಳಿ : ಮುತ್ತಪ್ಪ ಕೋಮಾರ

ಬಾಗಲಕೋಟೆ---ಹಠಯೋಗಿಯಾಗಿ ಹುಟ್ಟಿ ಕರ್ಮಯೋಗಿಯಾಗಿ ಬೆಳೆದ ಶಿವಯೋಗಿ ಸಿದ್ದರಾಮೇಶ್ವರರ ತತ್ವ, ಸಿದ್ದಾಂತ ಹಾಗೂ ಸಾಮಾಜಿಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ತಿಳಿಸಿದರು.
         ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದೇ ಸಮಾಜಕ್ಕೆ ಸೀಮಿತರಾಗಿರದೇ ಎಲ್ಲೆಡೆ ಸಮಾನತೆ ಸಾರಿದವರು. ಅಂತಹ ಶರಣರು ಜೀವಿಸಿದ ನಾಡಿನಲ್ಲಿ ನಾವು ಕೂಡಾ ಜನಿಸಿದ್ದು, ಅವರು ಹಾಕಿಕೊಟ್ಟ ಆದರ್ಶಗಳನ್ನು ಜೀವನದಲ್ಲಿ ಒಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಸಮಾಜ ಸುಧಾರಣೆಗೆ ಕೇವಲ ಜಯಂತಿ ಆಚರಿಸಿದರೆ ಸಾಲದು ಸಮಾಜ ಸಂಘಟನೆ ಮುಖ್ಯವಾಗಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಮಹಿಳೆಯರು ಕೂಡಾ ಸಂಘಟನೆಗಳನ್ನು ಕಟ್ಟುವ ಮೂಲಕ ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಸಮುದಾಯದ ಮಕ್ಕಳು ಶಿಕ್ಷಣವಂತರನ್ನಾಗಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಮಾತನಾಡಿ ಸಮಾಜದಲ್ಲಿ ಮುಂದೆ ಬರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾಬ್ಯಾಸದ ಮೇಲೆ ಹೆಚ್ಚು ಒತ್ತು ಕೊಡುವ ಮೂಲಕ ತಾಯಂದಿರು ತಮ್ಮ ಮಕ್ಕಳು ಒಳ್ಳೆಯ ಹುದ್ದೆಗಳನ್ನು ಪಡೆಯುವಂತೆ ಮಾಡಬೇಕು.
         ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ನಗರದ ಬಸವೇಶ್ವರ ವಿಜ್ಞಾನ ಕಾಲೇಜಿನ ಕನ್ನಡ ಪ್ರಾದ್ಯಾಪಕ ಡಾ.ಎಸ್.ಡಿ.ಕೆಂಗಲಗುತ್ತಿ ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣ, ಅಲ್ಲಮಪ್ರಭುಗಳು ಬಿಂಬಿಸಿದ ಆದರ್ಶ ಸಮಾಜದ ಕನಸು ನನಸಾಗಿಸುವ ನಿಟ್ಟಿನಲ್ಲಿ ಮುನ್ನಡೆದವರಾಗಿದ್ದಾರೆ. ಭಕ್ತಿಗೆ ಬಸವಣ್ಣ, ವೈರಾಗ್ಯಕ್ಕೆ ಅಲ್ಲಮ ಹೇಗೋ ಕಾಯಕಕ್ಕೆ ಸಿದ್ದರಾಮೇಶ್ವರ ಎಂದು ತಿಳಿಸಿದರು. ಲೋಕದಲ್ಲಿ ಯಾರು ತಮಗಾಗಿ ಬದುಕುತ್ತಾರೋ ಅಂತವರನ್ನು ಮರೆಯುತ್ತೇವೆ. ಆದರೆ ಇನ್ನೊಬ್ಬರಿಗಾಗಿ ಬದುಕುವರನ್ನು ಎಂದು ಮರೆಯಲು ಸಾಧ್ಯವಾಗುವದಿಲ್ಲವೆಂದರು.         
ಚಿಕ್ಕಂದಿನಿಂದಲೂ ಆಧಾತ್ಮದಲ್ಲಿ ಅಚಲ ನಂಬಿಕೆ, ಹಿರಿಯ ಶರಣರ ವಚನಗಳನ್ನು ತ್ರಿಪದಿಗಳ ಗುಂಗಿನಲ್ಲಿ ತಾವು ಅವುಗಳತ್ತ ಒಲವು ಗಳಿಸಿಕೊಂಡಿದ್ದರು. ಕಾಯಕದಲ್ಲೇ ಕೈಲಾಸವನ್ನು ಕಂಡವರು. ಲೋಕ ಕಲ್ಯಾಣಾರ್ಥ 1990 ವಚನಗಳನ್ನು ರಚಿಸಿದ್ದಾರೆ. ಸಮಾಜ ಸುಧಾರಣೆಗೆ ಬೆಂಬಲವಾಗಿ ನಿಂತು ಕಾಯಕ ಮಾಡಿದ್ದಾರೆ. ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದಾರೆ. ಹೋಳಾಗಿರುವ ಸಮುದಾಯವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಮಾನವೀಯ ಮೌಲ್ಯದ ಮೇಲೆ ಸಮಾಜವನ್ನು ಕಟ್ಟಲು ಮುಂದಾದವರು ಸಿದ್ದರಾಮೇಶ್ವರರು ಎಂದರು.
         ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತ ಅಧ್ಯಕ್ಷ ಚನ್ನನಗೌಡರ ಪರನಗೌಡರ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ಸಮಾಜದ ಮುಖಂಡರಾದ ಅಶೋಕ ಲಿಂಬಾವಳಿ, ಸಿದ್ದರಾಮ ಪಾತ್ರೋಟ, ತಿಮ್ಮಣ್ಣ ಬಂಡಿವಡ್ಡರ, ಲಕ್ಷ್ಮಣ ವಡ್ಡರ, ಮಲ್ಲಪ್ಪ ಪಾತ್ರೋಟ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ ಸ್ವಾಗತಿಸಿ ವಂದಿಸಿದರು. ಶಿಕ್ಷಣ ಇಲಾಖೆಯ ಜಾಸ್ಮಿನ್ ಕಿಲ್ಲೆದಾರ ನಿರೂಪಿಸಿದರು.
ಛಾಯಾಚಿತ್ರ ಲಗತ್ತಿಸಿದೆ. 1 ಮತ್ತು 2

ಸಿದ್ದರಾಮೇಶ್ವರ ಭಾವಚಿತ್ರದ ಅದ್ದೂರಿ ಮೆರವಣಿಗೆ
--------------------------------
ಬಾಗಲಕೋಟೆ: ಜನವರಿ 14 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ ಭವನದ ಆವರಣದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮೆರವಣಿಗೆಗೆ ಚಾಲನೆ ನೀಡಿದರು.
         ಮೆರವಣಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭವಾಗಿ ನವನಗರದ ಬಸ್ ನಿಲ್ದಾಣ, ಎಲ್.ಐ.ಸಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳಾದ ಝಾಂಜ ಪಥಕ್, ಡೊಳ್ಳು ಕುಣಿತ ಭಾಗವಹಿಸಿದ್ದವು. ಪೂರ್ಣ ಕುಂಬ ಹೊತ್ತ ಮಹಿಳೆಯರು ಆಕರ್ಷಣೀಯ ಕೇಂದ್ರ ಬಿಂದು ಆಗಿದ್ದರು. ಇದೇ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಡೊಳ್ಳು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು.
         ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರಾದ ದುರಗಪ್ಪ ವಡ್ಡರ, ಅಶೋಕ ಲಿಂಬಾವಳಿ, ತಿಮ್ಮಣ್ಣ ವಡ್ಡರ, ದಶರಥ ಪೂಜಾರ, ಲಕ್ಷ್ಮಣ ವಡ್ಡರ, ಸಿದ್ರಾಮಪ್ಪ ಪಾತ್ರೋಟಿ, ಮಲ್ಲಪ್ಪ ಪಾತರೋಟ, ಬ್ರಹ್ಮಋಷಿ ಪಾತ್ರೋಟ, ಯಲ್ಲಪ್ಪ ಕೋಟಿಕಲ್, ಆರ್.ಎಫ್,ಮುಧೋಳಮ ಗಿಡ್ಡಪ್ಪ ಹೊಸೂರ ಸೇರಿದಂತ ಇತರರು ಪಾಲ್ಗೊಂಡಿದ್ದರು.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.