ಬಾಗಲಕೋಟೆ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳೆರಡನ್ನೂ ಒಂದಾಗಿಸಿದರೆ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನದಿಂದ ಅಭಿವೃದ್ಧಿ ಸಾಧ್ಯ: ಸಚಿವ ಶ್ರೀರಾಮುಲು
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳೆರಡನ್ನೂ ಸೇರಿ ಒಂದೇ ಇಲಾಖೆ ಮಾಡಬೇಕು. ಇದರಿಂದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಅಭಿಪ್ರಾಯಪಟ್ಟರು.
![ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನದಿಂದ ಅಭಿವೃದ್ಧಿ ಸಾಧ್ಯ: ಸಚಿವ ಶ್ರೀರಾಮುಲು](https://etvbharatimages.akamaized.net/etvbharat/prod-images/768-512-4504974-thumbnail-3x2-ramulu.jpg?imwidth=3840)
ಬಾಗಲಕೋಟೆ ನಗರದ ಎಸ್.ನಿಜಲಿಂಗಪ್ಪ ಮೆಡಿಕಲ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ಯಾಪ್ಕಕಾನ್ 2019ರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಸಾಕಷ್ಟಿವೆ. ಇಲ್ಲಿ ಗುಣಮಟ್ಟ ಶಿಕ್ಷಣ ದೊರೆಯುವ ಕಾರಣ ವೈದ್ಯಕೀಯ ಶಿಕ್ಷಣಕ್ಕಾಗಿ ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುತ್ತಾರೆ. ಹೀಗಾಗಿ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಗಳನ್ನು ಒಂದೇ ಇಲಾಖೆ ಮಾಡಬೇಕು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಕಡಿಮೆ ರಕ್ತ ಇರುವ ರೋಗಿಗಳ ಅನುಕೂಲಕ್ಕಾಗಿ ನಮ್ಮ ಸಂಸ್ಥೆಗೆ ನೋಡಲ್ ಕಚೇರಿ ಸರ್ಕಾರದಿಂದ ಪ್ರಾರಂಭಿಸಬೇಕು. ಈಗಾಗಲೇ ಸಹಕಾರಿ ಸಂಘದಿಂದ ₹ 26 ಲಕ್ಷ ಅನುದಾನ ನೀಡಿದ್ದು, ಸರ್ಕಾರವೂ ಅನುದಾನ ಒದಗಿಸಿದಲ್ಲಿ ಮತ್ತಷ್ಟು ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು. ಇದೇ ಸಮಯದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ವೈದ್ಯರನ್ನು ಸನ್ಮಾನಿಸಲಾಯಿತು.
ಬಾಗಲಕೋಟೆ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳೆರಡನ್ನೂ ಒಂದಾಗಿಸಿದರೆ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಅಭಿಪ್ರಾಯಪಟ್ಟಿದ್ದಾರೆ.
ಬಾಗಲಕೋಟೆ ನಗರದ ಎಸ್.ನಿಜಲಿಂಗಪ್ಪ ಮೆಡಿಕಲ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ಯಾಪ್ಕಕಾನ್ 2019ರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಸಾಕಷ್ಟಿವೆ. ಇಲ್ಲಿ ಗುಣಮಟ್ಟ ಶಿಕ್ಷಣ ದೊರೆಯುವ ಕಾರಣ ವೈದ್ಯಕೀಯ ಶಿಕ್ಷಣಕ್ಕಾಗಿ ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುತ್ತಾರೆ. ಹೀಗಾಗಿ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಗಳನ್ನು ಒಂದೇ ಇಲಾಖೆ ಮಾಡಬೇಕು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಕಡಿಮೆ ರಕ್ತ ಇರುವ ರೋಗಿಗಳ ಅನುಕೂಲಕ್ಕಾಗಿ ನಮ್ಮ ಸಂಸ್ಥೆಗೆ ನೋಡಲ್ ಕಚೇರಿ ಸರ್ಕಾರದಿಂದ ಪ್ರಾರಂಭಿಸಬೇಕು. ಈಗಾಗಲೇ ಸಹಕಾರಿ ಸಂಘದಿಂದ ₹ 26 ಲಕ್ಷ ಅನುದಾನ ನೀಡಿದ್ದು, ಸರ್ಕಾರವೂ ಅನುದಾನ ಒದಗಿಸಿದಲ್ಲಿ ಮತ್ತಷ್ಟು ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು. ಇದೇ ಸಮಯದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ವೈದ್ಯರನ್ನು ಸನ್ಮಾನಿಸಲಾಯಿತು.
ಅವರು ಬಾಗಲಕೋಟೆ ನಗರದ ಎಸ್ ನಿಜಲಿಂಗಪ್ಪ ಮೆಡಿಕಲ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕ್ಯಾಪ್ಕಕಾನ್ 2019 ರ ಸಮಾವೇಶ ವನ್ನು ಚಾಲನೆ ನೀಡಿ ಮಾತನಾಡಿದ ಅವರು,ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಸಾಕಷ್ಟು ಇದ್ದು,ದೇಶದ ಮಹಾರಾಷ್ಟ್ರ,ಆಂಧ್ರ ಪ್ರದೇಶದಂತೆ ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಬರುತ್ತಾರೆ.ಏಕೆಂದರೆ ಇಲ್ಲಿ ಗುಣಮಟ್ಟದ ಶಿಕ್ಷಣ ದೂರಯಲಿದೆ ಎಂದು ತಿಳಿಸಿದ ಅವರು,ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ವೈಧ್ಯಕೀಯ ಇಲಾಖೆ ಬೇರೆ ಬೇರೆ ಆಗದೆ ಒಂದೇ ಜೋಡಣೆ ಆಗಬೇಕು ಇದರಿಂದ,ಆರೋಗ್ಯ ಇಲಾಖೆಯಲ್ಲಿ ವೈಧ್ಯರ ಸಂಖ್ಯೆ ಕಡಿಮೆ ಇದ್ದಾಗ ಉಪಯೋಗವಾಗಲಿದೆ.ಅದೇ ರೀತಿಯಾಗಿ ವೈಧ್ಯಕೀಯ ಅಗತ್ಯವಿರುವ ಕ್ರಮವನ್ನು ಆರೋಗ್ಯ ಇಲಾಖೆಯಿಂದ ತೆಗೆದುಕೊಳ್ಳುವ ಮೂಲಕ ಅಭಿವೃದ್ದಿ ಹೂಂದುವಂತಾಗಬೇಕು ಈ ಬಗ್ಗೆ ಸರ್ಕಾರದ ಮುಂದೆ ಗಮನ ಹರಿಸುವ ಪ್ರಯತ್ನ ಮಾಡವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ವೀರಣ್ಣ ಚರಂತಿಮಠ ಮಾತನಾಡಿ,ತಲ್ಸೋಮಿಯಾ ಎಂಬ ರಕ್ತ ಕಡಿಮೆ ಇರುವ ರೋಗಿಗಳ ಅನುಕೂಲಕ್ಕಾಗಿ ನಮ್ಮ ಸಂಸ್ಥೆಗೆ ನೋಡಲ್ ಕಚೇರಿ ಸರ್ಕಾರ ದಿಂದ ಪ್ರಾರಂಭ ಮಾಡಬೇಕು,ಇದರಿಂದ ಈ ಭಾಗದ ರೋಗಿಗಳಿಗೆ ಅನುಕೂಲವಾಗಲಿದೆ.ಈಗಾಗಲೇ ಸಹಕಾರಿ ಸಂಘದಿಂದ 26 ಲಕ್ಷ ಅನುದಾನ ನೀಡಲಿದ್ದು,ಸರ್ಕಾರ ದಿಂದ ಅನುದಾನ ಸಿಕ್ಕದಲ್ಲಿ ಮತ್ತಷ್ಟು ಅನುಕೂಲವಾಗಲಿದೆ ಎಂದು ನೋಡಲ್ ಕಚೇರಿ ನೀಡುವಂತೆ ಮನವಿ ಮಾಡಿಕೊಂಡರು.ಇದೇ ಸಮಯದಲ್ಲಿ ವೈಧ್ಯಕೀಯದಲ್ಲಿ ಸೇವೆ ಸಲ್ಲಿಸಿ,ನಿವೃತ್ತರಾಗಿರುವ ವೈಧ್ಯರನ್ನು ಸನ್ಮಾನಿಸಲಾಯಿತು.
ಬೈಟ್--ಬಿ.ಶ್ರೀರಾಮಲು(ಆರೋಗ್ಯ ಸಚಿವರು)
Conclusion:ETV-Bharat-Bagalkote