ETV Bharat / state

ಬಾಗಲಕೋಟೆಯಲ್ಲಿ ಆಟೋಗೆ ಅಪರಿಚಿತ ವಾಹನ ಡಿಕ್ಕಿ: ಮೂವರ ದುರ್ಮರಣ

author img

By

Published : Nov 6, 2019, 10:22 AM IST

ನಿನ್ನೆ ರಾತ್ರಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ.

ಅಪಘಾತವಾದ ಸ್ಥಳ

ಬಾಗಲಕೋಟೆ: ಜಿಲ್ಲೆಯ ಕಮತಗಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಜರುಗಿದೆ.

ಕಮತಗಿ ಗ್ರಾಮದ ಹೂರ ವಲಯದ ನೇಕಾರ ಕಾಲೋನಿ‌ ಬಳಿ ಈ ದುರ್ಘಟನೆ ಜರುಗಿದ್ದು, ಸ್ಥಳದಲ್ಲಿ ಟಂಟಂ ಆಟೋ ಚಾಲಕ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸಂಗಮೇಶ ಬಸವರಾಜ್ ಕಿತ್ತಲಿ(25), ಬಸು ಚಿನ್ನಪ್ಪ ತೋರಗಲ್ಲ (26) ಸ್ಥಳದಲ್ಲಿಯೇ ಮೃತಪಟ್ಟರೆ, ವಿಠ್ಠಲ ವಗ್ಗಾ (23) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ‌ಪಟ್ಟಿದ್ದಾರೆ ಎನ್ನಲಾಗಿದೆ. ಈ ಮೂವರು ಗುಳೇದಗುಡ್ಡ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಕಮತಗಿಯಿಂದ ಗುಳೇದಗುಡ್ಡಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಮೀನಗಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಕಮತಗಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಜರುಗಿದೆ.

ಕಮತಗಿ ಗ್ರಾಮದ ಹೂರ ವಲಯದ ನೇಕಾರ ಕಾಲೋನಿ‌ ಬಳಿ ಈ ದುರ್ಘಟನೆ ಜರುಗಿದ್ದು, ಸ್ಥಳದಲ್ಲಿ ಟಂಟಂ ಆಟೋ ಚಾಲಕ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸಂಗಮೇಶ ಬಸವರಾಜ್ ಕಿತ್ತಲಿ(25), ಬಸು ಚಿನ್ನಪ್ಪ ತೋರಗಲ್ಲ (26) ಸ್ಥಳದಲ್ಲಿಯೇ ಮೃತಪಟ್ಟರೆ, ವಿಠ್ಠಲ ವಗ್ಗಾ (23) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ‌ಪಟ್ಟಿದ್ದಾರೆ ಎನ್ನಲಾಗಿದೆ. ಈ ಮೂವರು ಗುಳೇದಗುಡ್ಡ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಕಮತಗಿಯಿಂದ ಗುಳೇದಗುಡ್ಡಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಮೀನಗಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Intro:AnchorBody:ಬಾಗಲಕೋಟೆ-- ಜಿಲ್ಲೆಯ ಕಮತಗಿ ಗ್ರಾಮ ಬಳಿ ಅಪರಿಚಿತ ವಾಹನವು ಟಂ ಟಂ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತ ಪಟ್ಟಿರುವ ಘಟನೆ ಕಳೆದ ರಾತ್ರಿ ಜರುಗಿದೆ.
ಕಮತಗಿ ಗ್ರಾಮ ಹೂರ ವಲಯ ನೇಕಾರ ಕಾಲೋನಿ‌ ಬಳಿ ಈ ಘಟನೆ ಜರುಗಿದ್ದು,ಸ್ಥಳದಲ್ಲಿ ಟಂ ಟಂ ಚಾಲಕ ಹಾಗೂ ಇನ್ನೊಬ್ಬ ವ್ಯಕ್ತಿ ಮೃತ ಪಟ್ಟಿದ್ದರೆ,ಮತ್ತೊರ್ವ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃತ ಪಟ್ಟಿದ್ದಾನೆ.
ಮೃತ ಪಟ್ಟವರಲ್ಲಿ ಸಂಗಮೇಶ ಬಸವರಾಜ್ ಕಿತ್ತಲಿ(25) ಬಸು ಚಿನ್ನಪ್ಪ ತೋರಗಲ್ಲ (26) ಸ್ಥಳದಲ್ಲಿಯೇ ಮೃತ ಪಟ್ಟಿದ್ದರೆ,ವಿಠ್ಠಲ ವಗ್ಗಾ (23) ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ‌ ಪಟ್ಟಿದ್ದಾನೆ.
ಗುಳೇದಗುಡ್ಡ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದ್ದು,ಕಮತಗಿ ಯಿಂದ ಗುಳೇದಗುಡ್ಡ ಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ...Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.