ETV Bharat / state

ನಿಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆ ತೋರ್ಸಿ: ಬಿಜೆಪಿ ಅಭ್ಯರ್ಥಿಗೆ ವೀಣಾ ಕಾಶಪ್ಪನವರ ಸವಾಲು - undefined

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ವೀಣಾ ಕಾಶಪ್ಪನವರ. ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ವಿರುದ್ಧ ವೀಣಾ ಟಾಂಗ್. ಏಪ್ರಿಲ್ 1 ರಂದು ಕಾಂಗ್ರೆಸ್​ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ.

ವೀಣಾ ಕಾಶಪ್ಪನವರ
author img

By

Published : Mar 28, 2019, 8:12 PM IST

ಬಾಗಲಕೋಟೆ: ಮೂರು ಬಾರಿ ಆಯ್ಕೆ ಆಗಿರುವ ಸಂಸದರು ತಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆಂದು ತೋರಿಸಲಿ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ಅವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ಅವಧಿಯಲ್ಲಿ ಹಿಂದಿನ ಸಂಸದರು ಯಾವ ರೀತಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಈ ಬಾರಿ ಮೋದಿ ಅಲೆ ನಡೆಯುವುದಿಲ್ಲ. ರಾಜ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗುತ್ತಿದ್ದು, ಮಹಿಳಾ ಪರ ಒಲವು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೀಣಾ ಕಾಶಪ್ಪನವರ

ಇಂದು ಒಳ್ಳೆಯ ದಿನ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏಪ್ರಿಲ್ 1 ರಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಕಾಂಗ್ರೆಸ್​ ಮುಖಂಡರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಂಡು ನಾಮಪತ್ರ ಸಲ್ಲಿಸಲಾಗುವುದು ಎಂದು ವೀಣಾ ಕಾಶಪ್ಪನವರ ತಿಳಿಸಿದರು.

ಬಾಗಲಕೋಟೆ: ಮೂರು ಬಾರಿ ಆಯ್ಕೆ ಆಗಿರುವ ಸಂಸದರು ತಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆಂದು ತೋರಿಸಲಿ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ಅವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ಅವಧಿಯಲ್ಲಿ ಹಿಂದಿನ ಸಂಸದರು ಯಾವ ರೀತಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಈ ಬಾರಿ ಮೋದಿ ಅಲೆ ನಡೆಯುವುದಿಲ್ಲ. ರಾಜ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗುತ್ತಿದ್ದು, ಮಹಿಳಾ ಪರ ಒಲವು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೀಣಾ ಕಾಶಪ್ಪನವರ

ಇಂದು ಒಳ್ಳೆಯ ದಿನ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏಪ್ರಿಲ್ 1 ರಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಕಾಂಗ್ರೆಸ್​ ಮುಖಂಡರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಂಡು ನಾಮಪತ್ರ ಸಲ್ಲಿಸಲಾಗುವುದು ಎಂದು ವೀಣಾ ಕಾಶಪ್ಪನವರ ತಿಳಿಸಿದರು.

Intro:Anchor


Body:ಮೂರು ಭಾರಿ ಅಲೆಯಿಂದ ಆಯ್ಕೆ ಆಗಿರುವ ಸಂಸದರು ತಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆ ಎಂದು ತೋರಿಸಲಿ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ಅವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಟಾಂಗ್ ನೀಡಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕ ವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ,ರಾಜ್ಯದಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು,ಬಾಗಲಕೋಟೆ ಗೆ ಮಾತ್ರ ಈ ಹಿನ್ನಲೆ ಎಲ್ಲಾ ಮಹಿಳೆಯರು ತಾವೇ ಸ್ಪರ್ಧೆ ಮಾಡುತ್ತೇನೆ ಎಂದು ಬೆಂಬಲ ನೀಡುತ್ತಾರೆ.ಕಳೆದ ಮೂರು ಅವಧಿಯಲ್ಲಿ ಹಿಂದಿನ ಸಂಸದರ ಯಾವ ರೀತಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ ಎಂದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ ಎಂದು ಹೇಳುವ ಮೂಲಕ ಈ ಭಾರಿ ಮೋದಿ ಅಲೆ ನಡೆಯುವುದಿಲ್ಲ. ಮಹಿಳಾ ಪರ ಒಲವು ಹೆಚ್ಚಾಗಲಿದೆ ಎಂದು ತಿಳಿಸಿದರು. ಇಂದು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಲಾಗಿದೆ.ಏಪ್ರಿಲ್ 1 ರಂದ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ದಿನೇಶ ಗುಂಡೂರಾವ್,ಜಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಂಡು ನಾಮ ಪತ್ರ ಸಲ್ಲಿಸಲಾಗುವದು ಎಂದು ತಿಳಿಸಿದ ವೀಣಾ ಜಿಲ್ಲೆಯ ಮುಖಂಡರ ಎಲ್ಲರೂ ಒಗ್ಗಟಾಗಿ ಈ ಭಾರಿ ಕಾಂಗ್ರೆಸ್ ಪಕ್ಷ ಗೆಲ್ಲುವಂತೆ ಶ್ರಮಿಸಲಿದ್ದಾರೆ.ಇದರಿಂದ ಮೂರು ಭಾರಿ ಅಲೆಯಿಂದ ಆಯ್ಕೆಯಾದ ಸಂಸದರು ಈ ಭಾರಿ ಮೋದಿ ಅಲೆ ಯಾವುದೇ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.


Conclusion:Etv,News,Bagalkote

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.