ETV Bharat / state

'ಮಹಾ'ಮಳೆಗೆ ಜಮಖಂಡಿಯಲ್ಲಿ ಪ್ರವಾಹ ಭೀತಿ: ದೇವರ ಮೊರೆ ಹೋದ ಗ್ರಾಮಸ್ಥರು

author img

By

Published : Aug 6, 2019, 1:18 PM IST

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹ ಭೀತಿಯಲ್ಲಿರುವ ಜನರು, ಕಾಪಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಪ್ರವಾಹ ಭೀತಿಯಿಂದ ಕಾಪಾಡುವಂತೆ ದೇವರ ಮೊರೆ ಹೋದ ಗ್ರಾಮಸ್ಥರು

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಹರಿಯುತ್ತಿರುವ ಕೃಷ್ಣ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪ್ರವಾಹ ಭೀತಿ ಉಂಟಾಗಿದೆ.

ಗ್ರಾಮಸ್ಥರಿಂದ ವಿಶೇಷ ಪೂಜೆ

ನದಿ ತೀರದ ಗ್ರಾಮಗಳ ಜನರು ಮಳೆ ನಿಂತು, ಪ್ರವಾಹದಿಂದ ಕಾಪಾಡುವಂತೆ ದೇವರ ಮೊರೆ ಹೋಗಿದ್ದಾರೆ. ಇಲ್ಲಿನ ಟಕ್ಕೂಡ ಗ್ರಾಮಸ್ಥರು ಹನಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸ್ಥಳೀಯ ಆಂಜನೇಯನಿಗೆ ಕರ್ಪೂರ, ಊದುಬತ್ತಿ ಬೆಳಗಿ ಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

ಜಮಖಂಡಿ ತಾಲೂಕಿನ‌ 15ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಕಬ್ಬು ಬೆಳೆ ನಾಶವಾಗಿದೆ. ಇಲ್ಲಿನ ರಾಜ್ಯ ಹೆದ್ದಾರಿ ಬಂದ್ ಆಗಿದ್ದರಿಂದ ಜನರು ಆತಂಕಗೊಂಡಿದ್ದಾರೆ.

ನಡುಗಡ್ಡೆಯಂತಾದ ಗ್ರಾಮದ ನೂರಾರು ಕುಟುಂಬಗಳು ಜಾನುವಾರುಗಳ ಜೊತೆ ಸುರಕ್ಷಿತ ಸ್ಥಳಕ್ಕೆ ಹೊರಟಿದ್ದಾರೆ. ಕೆಲವು ಕುಟುಂಬಗಳು ಸ್ಥಳಾಂತರಕ್ಕೆ ಒಪ್ಪದ ಹಿನ್ನೆಲೆ ಜಮಖಂಡಿ ತಾಲೂಕು ಆಡಳಿತ ಹರಸಾಹಸ ಪಡುತ್ತಿದೆ.

ಗ್ರಾಮಕ್ಕೆ ತಹಶೀಲ್ದಾರ ಪ್ರಶಾಂತ ಚಿನ್ನಗೊಂಡ, ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಕ್ಷಿತ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸ್ಥಳಾಂತರ ಜಾಗದಲ್ಲಿ ನಿರಾಶ್ರಿತರ ಕೇಂದ್ರ ಸೇರಿದಂತೆ ಮೂಲ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಹರಿಯುತ್ತಿರುವ ಕೃಷ್ಣ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪ್ರವಾಹ ಭೀತಿ ಉಂಟಾಗಿದೆ.

ಗ್ರಾಮಸ್ಥರಿಂದ ವಿಶೇಷ ಪೂಜೆ

ನದಿ ತೀರದ ಗ್ರಾಮಗಳ ಜನರು ಮಳೆ ನಿಂತು, ಪ್ರವಾಹದಿಂದ ಕಾಪಾಡುವಂತೆ ದೇವರ ಮೊರೆ ಹೋಗಿದ್ದಾರೆ. ಇಲ್ಲಿನ ಟಕ್ಕೂಡ ಗ್ರಾಮಸ್ಥರು ಹನಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸ್ಥಳೀಯ ಆಂಜನೇಯನಿಗೆ ಕರ್ಪೂರ, ಊದುಬತ್ತಿ ಬೆಳಗಿ ಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

ಜಮಖಂಡಿ ತಾಲೂಕಿನ‌ 15ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಕಬ್ಬು ಬೆಳೆ ನಾಶವಾಗಿದೆ. ಇಲ್ಲಿನ ರಾಜ್ಯ ಹೆದ್ದಾರಿ ಬಂದ್ ಆಗಿದ್ದರಿಂದ ಜನರು ಆತಂಕಗೊಂಡಿದ್ದಾರೆ.

ನಡುಗಡ್ಡೆಯಂತಾದ ಗ್ರಾಮದ ನೂರಾರು ಕುಟುಂಬಗಳು ಜಾನುವಾರುಗಳ ಜೊತೆ ಸುರಕ್ಷಿತ ಸ್ಥಳಕ್ಕೆ ಹೊರಟಿದ್ದಾರೆ. ಕೆಲವು ಕುಟುಂಬಗಳು ಸ್ಥಳಾಂತರಕ್ಕೆ ಒಪ್ಪದ ಹಿನ್ನೆಲೆ ಜಮಖಂಡಿ ತಾಲೂಕು ಆಡಳಿತ ಹರಸಾಹಸ ಪಡುತ್ತಿದೆ.

ಗ್ರಾಮಕ್ಕೆ ತಹಶೀಲ್ದಾರ ಪ್ರಶಾಂತ ಚಿನ್ನಗೊಂಡ, ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಕ್ಷಿತ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸ್ಥಳಾಂತರ ಜಾಗದಲ್ಲಿ ನಿರಾಶ್ರಿತರ ಕೇಂದ್ರ ಸೇರಿದಂತೆ ಮೂಲ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Intro:AnchorBody:ಮಹಾರಾಷ್ಟ್ರದಲ್ಲಿ ಬೋರ್ಗರೆಯುತ್ತಿರುವ ಮಳೆ ಹಿನ್ನೆಲೆ,ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಹರಿಯುತ್ತಿರುವ ಕೃಷ್ಣ ನದಿಗೆ ಪ್ರವಾಹ ಉಂಟಾಗಿದೆ.
ಮಳೆ ನಿಂತು,ಪ್ರವಾಹ ದಿಂದ ಕಾಪಾಡುವಂತೆ ಸ್ಥಳೀಯರು ದೇವರಿಗೆ ಮೊರೆ ಹೋಗಿದ್ದಾರೆ.
ಮಹಾರಾಷ್ಟರದಲ್ಲಿ‌ ಮಳೆ‌ ನಿಲ್ಲಲಿ ಎಂದು ಹನಮಂತ ದೇವರಿಗೆ ಟಕ್ಕೂಡ ಗ್ರಾಮಸ್ಥರು ಮೊರೆ ಹೋಗಿದ್ದಾರೆ.


ಮಹಾ ಮಳೆ ನಿಲ್ಲಲಿ, ಕೃಷ್ಣಾ ಪ್ರವಾಹ ತಗ್ಗಲಿ ಎಂದು ದೇವರಿಗೆ ವಿಶೇಷ ಪೂಜೆ,ಪುನಸ್ಕಾರ ಸಲ್ಲಿಸಿದ್ದಾರೆ.
ಸ್ಥಳೀಯ ಆಂಜನೇಯನಿಗೆ ಕರ್ಪೂರ, ಊದು ಬತ್ತಿ ಬೆಳಗಿ ಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

ಜಮಖಂಡಿ ತಾಲೂಕಿನ‌ ೧೫ಕ್ಕೂ ಹೆಚ್ವು ಹಳ್ಳಿಗಳು ಜಲಾವೃತವಾಗಿ, ಅಪಾರ ಪ್ರಮಾಣದ ಕಬ್ಬು ಬೆಳೆ ನಾಶವಾಗಿದೆ.

ಜಮಖಂಡಿ ಜತ್ತ ರಾಜ್ಯ ಹೆದ್ದಾರಿ ಬಂದ್ ಆಗಿದ್ರಿಂದ ಜನರು ಆತಂಕಗೊಂಡಿದ್ದಾರೆ.

ಈ ಮಧ ಜಬಂಗಿ ಕೆ.ಡಿ.ಗ್ರಾಮವು ಜಲಾವೃತಗೊಂಡ ನಡುಗಡ್ಡಯಾಗಿದೆ.

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳು ಜಲಾವೃತಗೊಂಡಿದ.
ನಡು ನೀರಲ್ಲಿ ಉಳಿದ ಗ್ರಾಮಸ್ಥರು.

ನೂರಾರು ಕುಟುಂಬಗಳು ಹಾಗೂ ಜಾನುವಾರುಗಳು ನಡುಗಡ್ಡೆಯಲ್ಲಿಯೇ ಇದ್ದು,ತೊಂದರೆ ಅನುಭವಿಸುತ್ತಿದ್ದಾರೆ.

ಅಂದಾಜು ನಾಲ್ಕು ನೂರು ಕುಟುಂಬಗಳು ಗ್ರಾಮವು ಸ್ಥಳಾಂತರ ಆಗಲು ನಿರಾಕರಣೆ ಮಾಡುತ್ತಿದ್ದಾರೆ.ನಿರಾಶ್ರಿತರ ನ್ನು ಮನವೊಲಿಸುತ್ತಿರುವ ಜಮಖಂಡಿ ತಾಲೂಕು ಆಡಳಿತ ಹರಸಾಹಸ ಮಾಡುತ್ತಿದ್ದಾರೆ.

ಗ್ರಾಮಕ್ಕೆ ತಹಸೀಲ್ದಾರ ಪ್ರಶಾಂತ ಚಿನ್ನಗೊಂಡ ,ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಾ,ಎಲ್ಲಾ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಸ್ಥಳಾಂತರ ಜಾಗದಲ್ಲಿ ಗಂಜಿಕೇಂದ್ರ ಸೇರಿ ಎಲ್ಲ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ಅಧಿಕಾರಿಗಳು ನೀಡಿದ್ದಾರೆ.

ದನಕರುಗಳನ್ನು ಬೋಟ್ ಮೂಲಕ ಕರೆದೊಯ್ಯುತ್ತಿದ್ದಾರೆ.

ನೂರಾರು ಜನರು ಜಾನುವಾರುಗಳ ಸಮೇತ ಬೋಟ್ ಮೂಲಕ ಸ್ಥಳಾಂತರ ಮಾಡುವ ಕಾರ್ಯ ಭರದಿಂದ ನಡೆದಿದೆ.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.