ETV Bharat / state

ಪ್ರವಾಹಕ್ಕೆ ಐತಿಹಾಸಿಕ ಕೂಡಲಸಂಗಮ ದೇಗುಲ ಜಲಾವೃತ

author img

By

Published : Jul 30, 2021, 10:59 AM IST

Updated : Jul 30, 2021, 11:58 AM IST

ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ತ್ರಿವೇಣಿ ಸಂಗಮವಾಗುವ ಪವಿತ್ರ ಸ್ಥಳವಾದ ಹುನಗುಂದ ತಾಲೂಕಿನ ಕೂಡಲಸಂಗಮದ ಸಂಗಮನಾಥೇಶ್ವರ ದೇಗುಲದ ಆವರಣಕ್ಕೆ ಪ್ರವಾಹದ ನೀರು ನುಗ್ಗಿದ್ದು, ಭಕ್ತರಿಗೆ ನಿಷೇಧ ಹೇರಲಾಗಿದೆ.

Kudalasangama Temple
ಕೂಡಲಸಂಗಮ ದೇಗುಲ ಜಲಾವೃತ

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಧಾರ್ಮಿಕ ಕ್ಷೇತ್ರ ಅಣ್ಣ ಬಸವಣ್ಣ ಐಕ್ಯ ಸ್ಥಳವಾಗಿರುವ ಕೂಡಲಸಂಗಮ ಸಂಪೂರ್ಣ ಜಲಾವೃತವಾಗಿದೆ.

ಕೂಡಲಸಂಗಮ ದೇಗುಲ ಜಲಾವೃತ

ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ತ್ರಿವೇಣಿ ಸಂಗಮವಾಗುವ ಪವಿತ್ರ ಸ್ಥಳವಾದ ಹುನಗುಂದ ತಾಲೂಕಿನ ಕೂಡಲಸಂಗಮದ ಸಂಗಮನಾಥೇಶ್ವರ ದೇಗುಲದ ಆವರಣಕ್ಕೆ ಪ್ರವಾಹದ ನೀರು ನುಗ್ಗಿದ್ದು, ಭಕ್ತರಿಗೆ ನಿಷೇಧ ಹೇರಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯವರು ಪಂಪ್​ಸೆಟ್​ ಮೂಲಕ ನೀರು ಹೊರಹಾಕುತ್ತಿದ್ದಾರೆ. ಕೂಡಲಸಂಗಮಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಬರುತ್ತಾರೆ. ಇದೀಗ ಪ್ರವಾಹದ ನೀರು ದೇಗುಲಕ್ಕೆ ನುಗ್ಗಿದ್ದರಿಂದ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ದೇಗುಲ ಪ್ರವೇಶ ನಿಷೇಧಿಸಿ ಆದೇಶಿಸಿದೆ.

ಕೃಷ್ಣಾ ನದಿಗೆ 4 ಲಕ್ಷದ 10 ಸಾವಿರ ಕ್ಯೂಸೆಕ್​ ನೀರು ಬಿಟ್ಟ ಹಿನ್ನೆಲೆಯಲ್ಲಿ ಪ್ರವಾಹದ ಹೊಡೆತದಿಂದ ನೀರು ದೇಗುಲ ಪ್ರವೇಶಿಸಿದೆ. ಪ್ರತಿವರ್ಷ ಸಂಗಮೇಶ್ವರ ದೇವಸ್ಥಾನ ಹಾಗೂ ಬಸವಣ್ಣನ ಐಕ್ಯ ಮಂಟಪ ಜಲಾವೃತವಾಗುತ್ತಿದೆ. ಕಳೆದ ಬಾರಿ ದೇಗುಲದ ಅಕ್ಕಪಕ್ಕದ ಅಂಗಡಿಗಳಿಗೆ ನೀರು ನುಗ್ಗಿ, ಸಾಮಾಗ್ರಿಗಳು ಕೊಚ್ಚಿ ಹೋಗಿದ್ದವು. ಈ ಬಾರಿಯೂ ಅಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಪ್ರವಾಹ ಭೀತಿ: ನಾರಾಯಣಪುರ ಜಲಾಶಯದಿಂದ 4.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಧಾರ್ಮಿಕ ಕ್ಷೇತ್ರ ಅಣ್ಣ ಬಸವಣ್ಣ ಐಕ್ಯ ಸ್ಥಳವಾಗಿರುವ ಕೂಡಲಸಂಗಮ ಸಂಪೂರ್ಣ ಜಲಾವೃತವಾಗಿದೆ.

ಕೂಡಲಸಂಗಮ ದೇಗುಲ ಜಲಾವೃತ

ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ತ್ರಿವೇಣಿ ಸಂಗಮವಾಗುವ ಪವಿತ್ರ ಸ್ಥಳವಾದ ಹುನಗುಂದ ತಾಲೂಕಿನ ಕೂಡಲಸಂಗಮದ ಸಂಗಮನಾಥೇಶ್ವರ ದೇಗುಲದ ಆವರಣಕ್ಕೆ ಪ್ರವಾಹದ ನೀರು ನುಗ್ಗಿದ್ದು, ಭಕ್ತರಿಗೆ ನಿಷೇಧ ಹೇರಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯವರು ಪಂಪ್​ಸೆಟ್​ ಮೂಲಕ ನೀರು ಹೊರಹಾಕುತ್ತಿದ್ದಾರೆ. ಕೂಡಲಸಂಗಮಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಬರುತ್ತಾರೆ. ಇದೀಗ ಪ್ರವಾಹದ ನೀರು ದೇಗುಲಕ್ಕೆ ನುಗ್ಗಿದ್ದರಿಂದ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ದೇಗುಲ ಪ್ರವೇಶ ನಿಷೇಧಿಸಿ ಆದೇಶಿಸಿದೆ.

ಕೃಷ್ಣಾ ನದಿಗೆ 4 ಲಕ್ಷದ 10 ಸಾವಿರ ಕ್ಯೂಸೆಕ್​ ನೀರು ಬಿಟ್ಟ ಹಿನ್ನೆಲೆಯಲ್ಲಿ ಪ್ರವಾಹದ ಹೊಡೆತದಿಂದ ನೀರು ದೇಗುಲ ಪ್ರವೇಶಿಸಿದೆ. ಪ್ರತಿವರ್ಷ ಸಂಗಮೇಶ್ವರ ದೇವಸ್ಥಾನ ಹಾಗೂ ಬಸವಣ್ಣನ ಐಕ್ಯ ಮಂಟಪ ಜಲಾವೃತವಾಗುತ್ತಿದೆ. ಕಳೆದ ಬಾರಿ ದೇಗುಲದ ಅಕ್ಕಪಕ್ಕದ ಅಂಗಡಿಗಳಿಗೆ ನೀರು ನುಗ್ಗಿ, ಸಾಮಾಗ್ರಿಗಳು ಕೊಚ್ಚಿ ಹೋಗಿದ್ದವು. ಈ ಬಾರಿಯೂ ಅಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಪ್ರವಾಹ ಭೀತಿ: ನಾರಾಯಣಪುರ ಜಲಾಶಯದಿಂದ 4.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Last Updated : Jul 30, 2021, 11:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.