ಬೆಂಗಳೂರು/ಆನೇಕಲ್: ಟೆಂಪೋ ಹರಿದು ಒಂದು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಗುಡ್ನಹಳ್ಳಿಯ ಲಕ್ಷ್ಮಿವೆಂಕಟೇಶ್ವರ ಸಿಮೆಂಟ್ ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆಯಲ್ಲಿ ನಡೆದಿದೆ.
ಕಾರ್ಖಾನೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಬಾಲಮಿಕಿ ಮತ್ತು ಶಕ್ತಿ ದಂಪತಿಗಳ ಮೂರನೇ ಮಗ ಸುಂದರ್ (1) ಸಾವನ್ನಪ್ಪಿರುವ ಮಗು. ಚಾಲಕ ಹಿಮ್ಮುಖವಾಗಿ ವೇಗವಾಗಿ ಚಲಿಸುವಾಗ ಮಗುವಿನ ಮೇಲೆ ಹರಿಸಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸ್ ಭೇಟಿ ನೀಡಿದ್ದು, ಪ್ರಕರಣದ ಕುರಿತು ಪರಿಶೀಲಿಸಿ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.