ದೊಡ್ಡಬಳ್ಳಾಪುರ: ತಾಲೂಕಿನ ಕಾಮೇನಹಳ್ಳಿ ಗ್ರಾಮದ ಹೊರ ವಲಯದಲ್ಲಿನ ತೋಟದ ಮನೆಯಲ್ಲಿ ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೃಷ್ಣಮೂರ್ತಿ (41) ನೇಣಿಗೆ ಕೊರಳೊಡ್ಡಿದ ವ್ಯಕ್ತಿ. ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದ ಕೃಷ್ಣಮೂರ್ತಿ, ಎರಡು ಎಕರೆ ಜಮೀನನ್ನು ಭೋಗ್ಯಕ್ಕೆ ಪಡೆದು ಹಸು ಮತ್ತು ಕುರಿ ಸಾಕಾಣಿಕೆ ಮಾಡುತ್ತಿದ್ದರು. ಹಸು- ಕುರಿ ಸಾಕಾಣಿಕೆಯಲ್ಲಿ ನಷ್ಟ ಅನುಭವಿಸಿದ್ದು, ಮಾಡಿದ ಸಾಲ ತಿರಿಸಲು ಆಗದೆ ಹೆದರಿ ನೇಣಿಗೆ ಕೊರಳ್ಳೊಡ್ಡಿದ್ದಾರೆ ಎಂದು ಮೃತರ ಸಂಬಂಧಿಕರು ಆಪಾದಿಸಿದ್ದಾರೆ.
ಘಟನೆಯ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.