ETV Bharat / state

ದೊಡ್ಡಬಳ್ಳಾಪುರದಲ್ಲಿ ಅಪಘಾತಕ್ಕೊಳಗಾದ ಹೆಚ್​ಡಿಕೆ ಬೆಂಗಾವಲು ವಾಹನ: ಪೊಲೀಸರಿಗೆ ಗಾಯ

author img

By

Published : Mar 20, 2022, 9:37 PM IST

ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಮುಂಭಾಗದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಾಹನದಲ್ಲಿದ್ದ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Accident to HDK escort vehicle
ಅಪಘಾತಕ್ಕೆ ಒಳಗಾದ ಹೆಚ್​ಡಿಕೆ ಬೆಂಗಾವಲು ವಾಹನ

ದೊಡ್ಡಬಳ್ಳಾಪುರ: ಪಾವಗಡ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮತ್ತು ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು ಮಾಜಿ ಸಿಎಂ ಕುಮಾರಸ್ವಾಮಿ ಹೋಗುತ್ತಿದ್ದಾಗ, ಅವರ ಬೆಂಗಾವಲು ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಜಖಂಗೊಂಡಿದೆ.

ಭಾನುವಾರ ಬೆಳಗ್ಗೆ 10:30ಕ್ಕೆ ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬೆಂಗಾವಲು ವಾಹನ ಸಂಪೂರ್ಣ ಜಖಂಗೊಂಡಿದ್ದು, ಬೆಂಗಾವಲು ವಾಹನದಲ್ಲಿದ್ದ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಡೈರಿ ಸರ್ಕಲ್ ಮುಂಭಾಗ ಬರುವಾಗ ಹೆಚ್​​ಡಿಕೆ ಕಾರಿನ ಹಿಂದೆ ಬೆಂಗಾವಲು ವಾಹನ ಬರುತ್ತಿತ್ತು. ಈ ವೇಳೆ ಎದುರುಗಡೆಯಿಂದ ವಾಹನವೊಂದು ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಬೆಂಗಾವಲು ವಾಹನ ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾರೆ. ಪರಿಣಾಮ ರಸ್ತೆ ಬದಿ ಇರುವ ಎರಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಾಹನದಲ್ಲಿದ್ದ ಬೆಂಗಾವಲು ಸೇವೆಯ ಐವರು ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಉಳಿದಂತೆ ಹೆಚ್ಚಿನ ಅನಾಹುತ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಲೇಬೇಕು: ಕಲ್ಲಡ್ಕ ಪ್ರಭಾಕರ್​​ ಭಟ್

ಘಟನೆಯಿಂದ ಸಿಎಂ ಹೆಚ್​​ಡಿಕೆ ಕೂಡ ಶಾಕ್​​ಗೆ ಒಳಗಾಗಿದ್ದು, ಬಳಿಕ ಹೆಚ್ಚಿನ ಅವಘಡ ಸಂಭವಿಸದೆ ಇದ್ದ ಕಾರಣ ತುಮಕೂರಿಗೆ ಪ್ರಯಾಣ ಬೆಳೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲ ಗಂಟೆಗಳ ಕಾಲ ವಿದ್ಯುತ್ ಸಂಪರ್ಕವೇ ಸ್ಥಗಿತಗೊಂಡಿತ್ತು.

ದೊಡ್ಡಬಳ್ಳಾಪುರ: ಪಾವಗಡ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮತ್ತು ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು ಮಾಜಿ ಸಿಎಂ ಕುಮಾರಸ್ವಾಮಿ ಹೋಗುತ್ತಿದ್ದಾಗ, ಅವರ ಬೆಂಗಾವಲು ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಜಖಂಗೊಂಡಿದೆ.

ಭಾನುವಾರ ಬೆಳಗ್ಗೆ 10:30ಕ್ಕೆ ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬೆಂಗಾವಲು ವಾಹನ ಸಂಪೂರ್ಣ ಜಖಂಗೊಂಡಿದ್ದು, ಬೆಂಗಾವಲು ವಾಹನದಲ್ಲಿದ್ದ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಡೈರಿ ಸರ್ಕಲ್ ಮುಂಭಾಗ ಬರುವಾಗ ಹೆಚ್​​ಡಿಕೆ ಕಾರಿನ ಹಿಂದೆ ಬೆಂಗಾವಲು ವಾಹನ ಬರುತ್ತಿತ್ತು. ಈ ವೇಳೆ ಎದುರುಗಡೆಯಿಂದ ವಾಹನವೊಂದು ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಬೆಂಗಾವಲು ವಾಹನ ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾರೆ. ಪರಿಣಾಮ ರಸ್ತೆ ಬದಿ ಇರುವ ಎರಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಾಹನದಲ್ಲಿದ್ದ ಬೆಂಗಾವಲು ಸೇವೆಯ ಐವರು ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಉಳಿದಂತೆ ಹೆಚ್ಚಿನ ಅನಾಹುತ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಲೇಬೇಕು: ಕಲ್ಲಡ್ಕ ಪ್ರಭಾಕರ್​​ ಭಟ್

ಘಟನೆಯಿಂದ ಸಿಎಂ ಹೆಚ್​​ಡಿಕೆ ಕೂಡ ಶಾಕ್​​ಗೆ ಒಳಗಾಗಿದ್ದು, ಬಳಿಕ ಹೆಚ್ಚಿನ ಅವಘಡ ಸಂಭವಿಸದೆ ಇದ್ದ ಕಾರಣ ತುಮಕೂರಿಗೆ ಪ್ರಯಾಣ ಬೆಳೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲ ಗಂಟೆಗಳ ಕಾಲ ವಿದ್ಯುತ್ ಸಂಪರ್ಕವೇ ಸ್ಥಗಿತಗೊಂಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.