ಹೊಸಕೋಟೆ : ಐರಾವತ ಬಸ್ ಹರಿದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ನಡೆದಿದೆ.
ಬೆಂಗಳೂರು ಮೂಲದ ನಾಗೇಶ್(23), ತೇಜಸ್(22) ಮೃತ ದುರ್ದೈವಿಗಳು. ಬೈಕ್ ನಿಯಂತ್ರಣ ತಪ್ಪಿ ಬೈಕ್ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಐರಾವತ ಬಸ್ ನಿಯಂತ್ರಿಸಲಾಗದೆ ಸವಾರರ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ನಂದಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.