ETV Bharat / state

ರಾಜ್ಯಸಭಾ ಸದಸ್ಯ ಅಶೋಕ್​ ಗಸ್ತಿ ನಿಧನಕ್ಕೆ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ

author img

By

Published : Sep 18, 2020, 10:24 PM IST

ಬಳ್ಳಾರಿ ವಿಭಾಗ ಪ್ರಭಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಹಾಗೂ ಅನೇಕ ದಶಕಗಳಿಂದ ಸಂಘಟನೆಗಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡು ರಾಜ್ಯಾದ್ಯಂತ ಎಲ್ಲಾ ಕಾರ್ಯಕರ್ತರಿಗೆ ಪ್ರೇರಣೆ ನೀಡುತ್ತಿದ್ದ ದಿ.ಅಶೋಕ್ ಗಸ್ತಿ ಅವರ ಅಕಾಲಿಕ ನಿಧನ ತುಂಬಲಾರದ ನೋವನ್ನುಂಟು ಮಾಡಿದೆ..

Condolence for ashok gasti in bjp office
ಅಶೋಕ್​ ಗಸ್ತಿ ನಿಧನಕ್ಕೆ ಶ್ರದ್ಧಾಂಜಲಿ

ಬೆಂಗಳೂರು : ಅಕಾಲಿಕವಾಗಿ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ, ದಿ. ಅಶೋಕ್ ಗಸ್ತಿ ಅವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.

ಅಶೋಕ್​ ಗಸ್ತಿ ನಿಧನಕ್ಕೆ ಶ್ರದ್ಧಾಂಜಲಿ
ಈ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯಸಭಾ ಸದಸ್ಯರು, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರು, ಬಳ್ಳಾರಿ ವಿಭಾಗ ಪ್ರಭಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಹಾಗೂ ಅನೇಕ ದಶಕಗಳಿಂದ ಸಂಘಟನೆಗಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡು ರಾಜ್ಯಾದ್ಯಂತ ಎಲ್ಲಾ ಕಾರ್ಯಕರ್ತರಿಗೆ ಪ್ರೇರಣೆ ನೀಡುತ್ತಿದ್ದ ದಿ.ಅಶೋಕ್ ಗಸ್ತಿ ಅವರ ಅಕಾಲಿಕ ನಿಧನ ತುಂಬಲಾರದ ನೋವನ್ನುಂಟು ಮಾಡಿದೆ ಎಂದ್ರು. ದಿ. ಅಶೋಕ್ ಗಸ್ತಿ ಅವರು ಕಾರ್ಯಕ್ಷಮತೆ, ಬದ್ಧತೆ, ಸರಳತನದ ಬಗ್ಗೆ ಮಾತನಾಡಿ, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಶ್ರದ್ಧಾಂಜಲಿ ನುಡಿ ನಮನಗಳನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್, ಜಗದೀಶ್ ಹಿರೇಮನಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರು : ಅಕಾಲಿಕವಾಗಿ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ, ದಿ. ಅಶೋಕ್ ಗಸ್ತಿ ಅವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.

ಅಶೋಕ್​ ಗಸ್ತಿ ನಿಧನಕ್ಕೆ ಶ್ರದ್ಧಾಂಜಲಿ
ಈ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯಸಭಾ ಸದಸ್ಯರು, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರು, ಬಳ್ಳಾರಿ ವಿಭಾಗ ಪ್ರಭಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಹಾಗೂ ಅನೇಕ ದಶಕಗಳಿಂದ ಸಂಘಟನೆಗಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡು ರಾಜ್ಯಾದ್ಯಂತ ಎಲ್ಲಾ ಕಾರ್ಯಕರ್ತರಿಗೆ ಪ್ರೇರಣೆ ನೀಡುತ್ತಿದ್ದ ದಿ.ಅಶೋಕ್ ಗಸ್ತಿ ಅವರ ಅಕಾಲಿಕ ನಿಧನ ತುಂಬಲಾರದ ನೋವನ್ನುಂಟು ಮಾಡಿದೆ ಎಂದ್ರು. ದಿ. ಅಶೋಕ್ ಗಸ್ತಿ ಅವರು ಕಾರ್ಯಕ್ಷಮತೆ, ಬದ್ಧತೆ, ಸರಳತನದ ಬಗ್ಗೆ ಮಾತನಾಡಿ, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಶ್ರದ್ಧಾಂಜಲಿ ನುಡಿ ನಮನಗಳನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್, ಜಗದೀಶ್ ಹಿರೇಮನಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.