ETV Bharat / state

ಪ್ರೀತಿಸಿ ಮದುವೆಯಾದ ಬಳಿಕ ಸಿಆರ್​ಪಿಎಫ್ ಕಾನ್ಸ್​​ಟೇಬಲ್​​ ಎಸ್ಕೇಪ್​​ ಆರೋಪ​​: ಠಾಣೆ ಮುಂದೆ ಯುವತಿ ಪ್ರತಿಭಟನೆ - Young woman protests in front of station

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಸಿಆರ್​ಪಿಎಫ್​ ಕಾನ್ಸ್​ಟೇಬಲ್​ವೊಬ್ಬ ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಬಳಿಕ ಪರಾರಿಯಾಗಿದ್ದಾನೆ. ಇದೀಗ ಯುವತಿ ನಂದಗುಡಿ ಪೊಲೀಸ್ ಠಾಣೆಯ ಎದುರು ಪತಿ ಸಿಆರ್​ಪಿಎಫ್ ಪೇದೆ ಪ್ರಮೋದ್​ನನ್ನು ಹುಡುಕಿ ಕೊಡುವಂತೆ ಧರಣಿ ನಡೆಸಿದ್ದಾಳೆ.

CRPF constable love and marry a women
ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಎಸ್ಕೇಪ್ ಆದ ಸಿಆರ್​ಪಿಎಫ್ ಪೇದೆ
author img

By

Published : Mar 12, 2021, 9:39 PM IST

Updated : Mar 12, 2021, 10:01 PM IST

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಪ್ರೀತಿಸಿ ಯುವತಿಯನ್ನು ವಿವಾಹವಾಗಿದ್ದ ಸಿಆರ್​ಪಿಎಫ್ ಕಾನ್ಸ್​ಟೇಬಲ್ ಇದೀಗ ಕೈ ಕೊಟ್ಟು ಪರಾರಿಯಾಗಿದ್ದಾನೆ. ವಂಚನೆಗೊಳಗಾಗಿರುವ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಎತ್ತಿನೊಡೆಯಪುರದ ಯುವಕ ಪ್ರಮೋದ್‌ ಮತ್ತು ಯುವತಿ ಒಂದೇ ಗ್ರಾಮದವರಾಗಿದ್ದರು. ಇವರಿಬ್ಬರಿಗೆ ಪ್ರೇಮಾಂಕುರವಾಗಿತ್ತು. ಎರಡು ತಿಂಗಳ ಹಿಂದೆ ಪ್ರಮೋದ್ ಯಲಹಂಕದ CRPF ಕ್ಯಾಂಪ್​ನಲ್ಲಿ ಯುವತಿಯನ್ನು ವಿವಾಹವಾಗಿದ್ದ. ಆದ್ರೆ ವಿವಾಹವಾದ ನಂತರ ಇದೀಗ ಯುವತಿಯನ್ನ ಬಿಟ್ಟು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪ್ರೀತಿಸಿ ಮದುವೆಯಾದ ಬಳಿಕ ಸಿಆರ್​ಪಿಎಫ್ ಕಾನ್ಸ್​​ಟೇಬಲ್​​ ಎಸ್ಕೇಪ್​​ ಆರೋಪ

ವಂಚಿಸಿ ನಾಪತ್ತೆಯಾಗಿರುವ ಪತಿಗಾಗಿ ಕಳೆದ ರಾತ್ರಿ ನಂದಗುಡಿ ಠಾಣೆ ಎದುರು ಪತ್ನಿ ಮತ್ತು ಪೋಷಕರು ಧರಣಿ ನಡೆಸಿದ್ದಾರೆ. ಇನ್ನು ಮದುವೆ ಬಳಿಕ ಪತ್ನಿ ಬಿಟ್ಟು ಬೇರೆ ಯುವತಿ ಜತೆ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾನೆ ಎಂದು ಯುವತಿ ಆರೋಪಸಿದ್ದು, ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದ್ದಾಳೆ. ನ್ಯಾಯಕ್ಕಾಗಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಯುವತಿ ಆರೋಪಿಸಿದ್ದಾಳೆ.

ಓದಿ:ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ದೇಶದಲ್ಲೇ ಮೊದಲ ಪ್ರತ್ಯೇಕ ಎಕ್ಸ್‌ಪ್ರೆಸ್ ಕಾರ್ಗೋ ಟರ್ಮಿನಲ್

ಇದರಿಂದಾಗಿ ಯುವತಿ ಹಾಗೂ ಅವರ ಪೋಷಕರು, ಕಳೆದ ರಾತ್ರಿ ನಂದಗುಡಿ ಪೊಲೀಸ್ ಠಾಣೆಯ ಎದುರು ಪತಿ ಸಿಆರ್​ಪಿಎಫ್ ಕಾನ್ಸ್​ಟೇಬಲ್​​ ಪ್ರಮೋದ್​​ನನ್ನು ಹುಡುಕಿ ಕೊಡುವಂತೆ ಧರಣಿ ನಡೆಸಿದ್ದಾರೆ. ಅಲ್ಲದೇ ನನ್ನನ್ನು ಬಿಟ್ಟು ಪ್ರಮೋದ್ ಬೇರೊಬ್ಬ ಯುವತಿಯೊಂದಿಗೆ ವಿವಾಹ ಆಗೋದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿಯೂ ಪತ್ನಿ ಆರೋಪಿಸಿದ್ದಾಳೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋಗಿದ್ದಾಳೆ.

ಈ ಸಂಬಂಧ ನಂದಗುಡಿ ಠಾಣೆಯ ಪೊಲೀಸರು, ಯುವತಿ ಹಾಗೂ ಪೋಷಕರೊಂದಿಗೆ ಮಾತುಕತೆ ನಡೆಸಿ, ಪ್ರಮೋದ್​ನನ್ನು ಹುಡುಕಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಹೇಳಿದ ಹಿನ್ನೆಲೆ ಯುವತಿ ಮತ್ತು ಪೋಷಕರು ಮನೆಗೆ ಮರಳಿದ್ದಾರೆ.

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಪ್ರೀತಿಸಿ ಯುವತಿಯನ್ನು ವಿವಾಹವಾಗಿದ್ದ ಸಿಆರ್​ಪಿಎಫ್ ಕಾನ್ಸ್​ಟೇಬಲ್ ಇದೀಗ ಕೈ ಕೊಟ್ಟು ಪರಾರಿಯಾಗಿದ್ದಾನೆ. ವಂಚನೆಗೊಳಗಾಗಿರುವ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಎತ್ತಿನೊಡೆಯಪುರದ ಯುವಕ ಪ್ರಮೋದ್‌ ಮತ್ತು ಯುವತಿ ಒಂದೇ ಗ್ರಾಮದವರಾಗಿದ್ದರು. ಇವರಿಬ್ಬರಿಗೆ ಪ್ರೇಮಾಂಕುರವಾಗಿತ್ತು. ಎರಡು ತಿಂಗಳ ಹಿಂದೆ ಪ್ರಮೋದ್ ಯಲಹಂಕದ CRPF ಕ್ಯಾಂಪ್​ನಲ್ಲಿ ಯುವತಿಯನ್ನು ವಿವಾಹವಾಗಿದ್ದ. ಆದ್ರೆ ವಿವಾಹವಾದ ನಂತರ ಇದೀಗ ಯುವತಿಯನ್ನ ಬಿಟ್ಟು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪ್ರೀತಿಸಿ ಮದುವೆಯಾದ ಬಳಿಕ ಸಿಆರ್​ಪಿಎಫ್ ಕಾನ್ಸ್​​ಟೇಬಲ್​​ ಎಸ್ಕೇಪ್​​ ಆರೋಪ

ವಂಚಿಸಿ ನಾಪತ್ತೆಯಾಗಿರುವ ಪತಿಗಾಗಿ ಕಳೆದ ರಾತ್ರಿ ನಂದಗುಡಿ ಠಾಣೆ ಎದುರು ಪತ್ನಿ ಮತ್ತು ಪೋಷಕರು ಧರಣಿ ನಡೆಸಿದ್ದಾರೆ. ಇನ್ನು ಮದುವೆ ಬಳಿಕ ಪತ್ನಿ ಬಿಟ್ಟು ಬೇರೆ ಯುವತಿ ಜತೆ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾನೆ ಎಂದು ಯುವತಿ ಆರೋಪಸಿದ್ದು, ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದ್ದಾಳೆ. ನ್ಯಾಯಕ್ಕಾಗಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಯುವತಿ ಆರೋಪಿಸಿದ್ದಾಳೆ.

ಓದಿ:ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ದೇಶದಲ್ಲೇ ಮೊದಲ ಪ್ರತ್ಯೇಕ ಎಕ್ಸ್‌ಪ್ರೆಸ್ ಕಾರ್ಗೋ ಟರ್ಮಿನಲ್

ಇದರಿಂದಾಗಿ ಯುವತಿ ಹಾಗೂ ಅವರ ಪೋಷಕರು, ಕಳೆದ ರಾತ್ರಿ ನಂದಗುಡಿ ಪೊಲೀಸ್ ಠಾಣೆಯ ಎದುರು ಪತಿ ಸಿಆರ್​ಪಿಎಫ್ ಕಾನ್ಸ್​ಟೇಬಲ್​​ ಪ್ರಮೋದ್​​ನನ್ನು ಹುಡುಕಿ ಕೊಡುವಂತೆ ಧರಣಿ ನಡೆಸಿದ್ದಾರೆ. ಅಲ್ಲದೇ ನನ್ನನ್ನು ಬಿಟ್ಟು ಪ್ರಮೋದ್ ಬೇರೊಬ್ಬ ಯುವತಿಯೊಂದಿಗೆ ವಿವಾಹ ಆಗೋದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿಯೂ ಪತ್ನಿ ಆರೋಪಿಸಿದ್ದಾಳೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋಗಿದ್ದಾಳೆ.

ಈ ಸಂಬಂಧ ನಂದಗುಡಿ ಠಾಣೆಯ ಪೊಲೀಸರು, ಯುವತಿ ಹಾಗೂ ಪೋಷಕರೊಂದಿಗೆ ಮಾತುಕತೆ ನಡೆಸಿ, ಪ್ರಮೋದ್​ನನ್ನು ಹುಡುಕಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಹೇಳಿದ ಹಿನ್ನೆಲೆ ಯುವತಿ ಮತ್ತು ಪೋಷಕರು ಮನೆಗೆ ಮರಳಿದ್ದಾರೆ.

Last Updated : Mar 12, 2021, 10:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.