ETV Bharat / state

ರಾಂಪುರ ಕೆರೆಯ ಸುತ್ತ ಕೋಳಿ ತ್ಯಾಜ್ಯ: ರಸ್ತೆ ಬದಿ ದುರ್ನಾತ - undefined

ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ, ಕೆರೆಯ ಬೇಲಿ ಒಳಗೆ‌ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮನಸೋ ಇಚ್ಛೆ ಬಿಸಾಡಲಾಗುತ್ತಿದೆ. ಇದರಿಂದ ದುರ್ವಾಸನೆ ಬರುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಕೋಳಿ ತ್ಯಾಜ್ಯ
author img

By

Published : May 1, 2019, 11:48 AM IST

ಬೆಂಗಳೂರು: ಚನ್ನಸಂದ್ರ ಹಾಗೂ ವಾರಾಣಾಸಿ, ಭೈರ್ತಿ, ಕಲ್ಕೆರೆ ಪ್ರದೇಶದಲ್ಲಿ ಸಂಗ್ರಹವಾಗುವ ಕೋಳಿ ತ್ಯಾಜ್ಯವನ್ನು ಹಾಗೂ ಸತ್ತ ಕೋಳಿಯನ್ನು ಕೆಲವು ಕೋಳಿ ಅಂಗಡಿ ಮಾಲೀಕರು ರಾಂಪುರ ಕೆರೆಯ ಒಳಗೆ ಹಾಗೂ ಹೊರವಲಯದ ರಸ್ತೆಗಳ ಅಂಚಿನಲ್ಲಿ ಹಾಕುತ್ತಿದ್ದಾರೆ. ಇದರಿಂದ ದುರ್ವಾಸನೆ ಬರುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಕೋಳಿ ತ್ಯಾಜ್ಯ

ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ, ಕೆರೆಯ ಬೇಲಿ ಒಳಗೆ‌ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮನಸೋ ಇಚ್ಛೆ ಬಿಸಾಡಲಾಗುತ್ತಿದೆ. ನಿರ್ಜನ ಪ್ರದೇಶದಲ್ಲಿ ಗುಂಡಿ ತೆಗೆದು, ಕೋಳಿ ತ್ಯಾಜ್ಯವನ್ನು ಅದರಲ್ಲಿ ಮುಚ್ಚಿ ವಿಲೇವಾರಿ ಮಾಡಬೇಕಾಗಿರುವುದು ನಿಯಮ. ಆದರೆ, ಕೆಲವರು ಈ ಗೋಜಿಗೆ ಹೋಗದೆ ಪ್ಲಾಸ್ಟಿಕ್ ಚೀಲಗಳಲ್ಲಿ ತ್ಯಾಜ್ಯವನ್ನು ತುಂಬಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಆ ಪ್ರದೇಶದ ವಾತಾವರಣ ಕಲುಷಿತವಾಗುವ ಜತೆಗೆ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿದೆ.

ಏನಿದು ಕೋಳಿ ತ್ಯಾಜ್ಯ?:

ಕೋಳಿ ಮಾಂಸ ಸ್ವಚ್ಛ ಮಾಡುವಾಗ ಅದರ ದೇಹದೊಳಗಿನ ಕರುಳು, ಮೇಲ್ಮೈನ ರೆಕ್ಕೆ -ಪುಕ್ಕ, ಕಾಲಿನ ಸ್ವಲ್ಪ ಭಾಗ ತೆಗೆದು ಹಾಕಲಾಗುತ್ತದೆ. ನಂತರ ಅದನ್ನು ಒಂದೆಡೆ ಶೇಖರಿಸಿ ವಿಲೇವಾರಿ ಮಾಡಲಾಗುತ್ತದೆ. ಈ ತ್ಯಾಜ್ಯವನ್ನು ನಿರ್ಜನ ಪ್ರದೇಶಗಳಲ್ಲಿ ಹೂತಿಟ್ಟು ವಿಲೇವಾರಿ ಮಾಡಬೇಕಾಗುತ್ತದೆ. ಕೆಲ ಕೋಳಿ ಅಂಗಡಿ ಮಾಲೀಕರು ಇದನ್ನು ಅನುಸರಿಸಿದರೆ ಇನ್ನೂ ಕೆಲವರು ರಸ್ತೆ ಬದಿಯಲ್ಲಿ, ಗುಂಡಿಗಳಲ್ಲಿ, ಕೆರೆ ಏರಿ ರಸ್ತೆಗಳಲ್ಲಿ ಬಿಸಾಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪ.

ಬೀದಿ ನಾಯಿಗಳ ಹಾವಳಿ:

ಎಲ್ಲೆಂದರಲ್ಲಿ ಬಿಸಾಡುತ್ತಿರುವ ಈ ಕೋಳಿ ತ್ಯಾಜ್ಯದಿಂದಾಗಿ ಬೀದಿ ನಾಯಿಗಳಿಗೆ ಪ್ರತಿದಿನ ಮೃಷ್ಟಾನ್ನ ಸಿಕ್ಕಂತಾಗುತ್ತಿದೆ. ಇದನ್ನು ತಿಂದು ದಷ್ಟಪುಷ್ಟವಾಗಿ ಕೊಬ್ಬಿರುವ ಬೀದಿ ನಾಯಿಗಳು ಮಾಂಸದ ಆಸೆಗೆ ಕೆರೆಯಂಗಳದಲ್ಲಿ ಒಂಟಿಯಾಗಿ ಮೇಯುವ ಕುರಿ, ಮೇಕೆ, ಕರುಗಳ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ. ಇದರ ಜತೆಗೆ ರಸ್ತೆಬದಿಯಲ್ಲಿ ಸಂಚರಿಸುವ ಸಾರ್ವಜನಿಕರ ಮೇಲೂ ದಾಳಿ ನಡೆಸುತ್ತಿವೆ.

ಬೆಂಗಳೂರು: ಚನ್ನಸಂದ್ರ ಹಾಗೂ ವಾರಾಣಾಸಿ, ಭೈರ್ತಿ, ಕಲ್ಕೆರೆ ಪ್ರದೇಶದಲ್ಲಿ ಸಂಗ್ರಹವಾಗುವ ಕೋಳಿ ತ್ಯಾಜ್ಯವನ್ನು ಹಾಗೂ ಸತ್ತ ಕೋಳಿಯನ್ನು ಕೆಲವು ಕೋಳಿ ಅಂಗಡಿ ಮಾಲೀಕರು ರಾಂಪುರ ಕೆರೆಯ ಒಳಗೆ ಹಾಗೂ ಹೊರವಲಯದ ರಸ್ತೆಗಳ ಅಂಚಿನಲ್ಲಿ ಹಾಕುತ್ತಿದ್ದಾರೆ. ಇದರಿಂದ ದುರ್ವಾಸನೆ ಬರುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಕೋಳಿ ತ್ಯಾಜ್ಯ

ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ, ಕೆರೆಯ ಬೇಲಿ ಒಳಗೆ‌ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮನಸೋ ಇಚ್ಛೆ ಬಿಸಾಡಲಾಗುತ್ತಿದೆ. ನಿರ್ಜನ ಪ್ರದೇಶದಲ್ಲಿ ಗುಂಡಿ ತೆಗೆದು, ಕೋಳಿ ತ್ಯಾಜ್ಯವನ್ನು ಅದರಲ್ಲಿ ಮುಚ್ಚಿ ವಿಲೇವಾರಿ ಮಾಡಬೇಕಾಗಿರುವುದು ನಿಯಮ. ಆದರೆ, ಕೆಲವರು ಈ ಗೋಜಿಗೆ ಹೋಗದೆ ಪ್ಲಾಸ್ಟಿಕ್ ಚೀಲಗಳಲ್ಲಿ ತ್ಯಾಜ್ಯವನ್ನು ತುಂಬಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಆ ಪ್ರದೇಶದ ವಾತಾವರಣ ಕಲುಷಿತವಾಗುವ ಜತೆಗೆ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿದೆ.

ಏನಿದು ಕೋಳಿ ತ್ಯಾಜ್ಯ?:

ಕೋಳಿ ಮಾಂಸ ಸ್ವಚ್ಛ ಮಾಡುವಾಗ ಅದರ ದೇಹದೊಳಗಿನ ಕರುಳು, ಮೇಲ್ಮೈನ ರೆಕ್ಕೆ -ಪುಕ್ಕ, ಕಾಲಿನ ಸ್ವಲ್ಪ ಭಾಗ ತೆಗೆದು ಹಾಕಲಾಗುತ್ತದೆ. ನಂತರ ಅದನ್ನು ಒಂದೆಡೆ ಶೇಖರಿಸಿ ವಿಲೇವಾರಿ ಮಾಡಲಾಗುತ್ತದೆ. ಈ ತ್ಯಾಜ್ಯವನ್ನು ನಿರ್ಜನ ಪ್ರದೇಶಗಳಲ್ಲಿ ಹೂತಿಟ್ಟು ವಿಲೇವಾರಿ ಮಾಡಬೇಕಾಗುತ್ತದೆ. ಕೆಲ ಕೋಳಿ ಅಂಗಡಿ ಮಾಲೀಕರು ಇದನ್ನು ಅನುಸರಿಸಿದರೆ ಇನ್ನೂ ಕೆಲವರು ರಸ್ತೆ ಬದಿಯಲ್ಲಿ, ಗುಂಡಿಗಳಲ್ಲಿ, ಕೆರೆ ಏರಿ ರಸ್ತೆಗಳಲ್ಲಿ ಬಿಸಾಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪ.

ಬೀದಿ ನಾಯಿಗಳ ಹಾವಳಿ:

ಎಲ್ಲೆಂದರಲ್ಲಿ ಬಿಸಾಡುತ್ತಿರುವ ಈ ಕೋಳಿ ತ್ಯಾಜ್ಯದಿಂದಾಗಿ ಬೀದಿ ನಾಯಿಗಳಿಗೆ ಪ್ರತಿದಿನ ಮೃಷ್ಟಾನ್ನ ಸಿಕ್ಕಂತಾಗುತ್ತಿದೆ. ಇದನ್ನು ತಿಂದು ದಷ್ಟಪುಷ್ಟವಾಗಿ ಕೊಬ್ಬಿರುವ ಬೀದಿ ನಾಯಿಗಳು ಮಾಂಸದ ಆಸೆಗೆ ಕೆರೆಯಂಗಳದಲ್ಲಿ ಒಂಟಿಯಾಗಿ ಮೇಯುವ ಕುರಿ, ಮೇಕೆ, ಕರುಗಳ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ. ಇದರ ಜತೆಗೆ ರಸ್ತೆಬದಿಯಲ್ಲಿ ಸಂಚರಿಸುವ ಸಾರ್ವಜನಿಕರ ಮೇಲೂ ದಾಳಿ ನಡೆಸುತ್ತಿವೆ.

Intro:ರಾಂಪುರ ಕೆರೆಯಲ್ಲಿ ಸತ್ತ ಕೋಳಿ ಹಾಗೂ ತ್ಯಾಜ್ಯ: ರಸ್ತೆ ಬದಿ ದುರ್ನಾತ!

ಚನ್ನಸಂದ್ರ ಹಾಗೂ ವಾರಾಣಾಸಿ, ಭೈರ್ತಿ, ಕಲ್ಕೆರೆ ಪ್ರದೇಶದಲ್ಲಿ ಸಂಗ್ರಹವಾಗುವ ಕೋಳಿ ತ್ಯಾಜ್ಯವನ್ನು ಹಾಗೂ ಸತ್ತ ಕೋಳಿ ಯನ್ನು
ಕೆಲವು ಕೋಳಿ ಅಂಗಡಿ ಮಾಲೀಕರು ರಾಂಪುರ ಕೆರೆಯ ಒಳಗೆ ಹಾಗೂ ಹೊರವಲಯದ ರಸ್ತೆಗಳ ಅಂಚಿನಲ್ಲಿ ಹಾಕುತ್ತಿದ್ದಾರೆ. ದುರ್ವಾಸನೆ ಬೀರುವ ಈ ತ್ಯಾಜ್ಯದಿಂದಾಗಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.ಹಾಗೂ ಮೂಗು ಮುಚ್ಚಿಕೊಂಡು ಒಡಾಡುವ ಪರಿಸ್ಥಿತಿ ಆಗಿದೆ.

ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ, ಕೆರೆಯ ಬೇಲಿ ಒಳಗೆ‌ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮನಸೋಇಚ್ಛೆ ಬಿಸಾಡಲಾಗುತ್ತಿದೆ. ನಿರ್ಜನ ಪ್ರದೇಶದಲ್ಲಿ ಗುಂಡಿ ತೆಗೆದು, ಕೋಳಿ ತ್ಯಾಜ್ಯವನ್ನು ಅದರಲ್ಲಿ ಮುಚ್ಚಿ ವಿಲೇವಾರಿ ಮಾಡಬೇಕಾಗಿರುವುದು ನಿಯಮ. ಆದರೆ, ಕೆಲವರು ಈ ಗೋಜಿಗೆ ಹೋಗದೆ ಪ್ಲಾಸ್ಟಿಕ್ ಚೀಲಗಳಲ್ಲಿ ತ್ಯಾಜ್ಯವನ್ನು ತುಂಬಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಆ ಪ್ರದೇಶದ ವಾತಾವರಣ ಕಲುಷಿತವಾಗುವ ಜತೆಗೆ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿದೆ

ಚನ್ನಸಂದ್ರದಿಂದ ರಂಪುರ,ಭೈರ್ತಿ ಕಡೆ ಹೊಗುವ ರಸ್ತೆ ಬದಿಯಲ್ಲಿ ಹಾಗೂ ಕೆರೆಯ ಒಳಗೆ ಕೋಳಿ ತ್ಯಾಜ್ಯವನ್ನು ಬಿಸಾಡಿ ಹೋಗುತ್ತಿರುವುದರಿಂದ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ,ಜನರ ಆರೋಗ್ಯದ ಮೇಲೆ ಪ್ರಭಾವ ಬೀರುತ್ತಿದೆ.

ತ್ಯಾಜ್ಯ ದುರ್ವಾಸನೆ ಬೀರುವುದರ ಜತೆಗೆ ಇದನ್ನು ತಿನ್ನಲು ಬರುವ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಇನ್ನಷ್ಟು ತೊಂದರೆ ಎದುರಾಗಿದೆ. ಬೀದಿಬದಿಯಲ್ಲೇ ಕೋಳಿ ಮಾಂಸ ಆಸ್ವಾದಿಸುತ್ತಾ, ರಸ್ತೆ ಬದಿಯಲ್ಲಿ ಹೋಗುವ ದಾರಿಹೋಕರ ಮೇಲೆ ನಾಯಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ

Body:ಏನಿದು ಕೋಳಿ ತ್ಯಾಜ್ಯ?:


ಕೋಳಿಯಲ್ಲಿನ ನಿರುಪಯುಕ್ತ ಭಾಗಗಳೇ ಕೋಳಿ ತ್ಯಾಜ್ಯ. ಸ್ವಚ್ಛ ಮಾಡುವಾಗ ಅದರ ದೇಹದೊಳಗಿನ ಕರುಳು, ಮೇಲ್ಮೈನ ರೆಕ್ಕೆ -ಪುಕ್ಕ, ಕಾಲಿನ ಸ್ವಲ್ಪ ಭಾಗ ತೆಗೆದು ಹಾಕಲಾಗುತ್ತದೆ. ನಂತರ ಅದನ್ನು ಒಂದೆಡೆ ಶೇಖರಿಸಿ ವಿಲೇವಾರಿ ಮಾಡಲಾಗುತ್ತದೆ.

ಈ ತ್ಯಾಜ್ಯವನ್ನು ನಿರ್ಜನ ಪ್ರದೇಶಗಳಲ್ಲಿ ಹೂತಿಟ್ಟು ವಿಲೇವಾರಿ ಮಾಡಬೇಕಾಗುತ್ತದೆ. ಕೆಲ ಕೋಳಿ ಅಂಗಡಿ ಮಾಲೀಕರು ಇದನ್ನು ಅನುಸರಿಸಿದರೆ ಇನ್ನೂ ಕೆಲವರು ರಸ್ತೆ ಬದಿಯಲ್ಲಿ, ಗುಂಡಿಗಳಲ್ಲಿ, ಕೆರೆ ಏರಿ ರಸ್ತೆಗಳಲ್ಲಿ ಬಿಸಾಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪ.

ಬೀದಿ ನಾಯಿಗಳ ಹಾವಳಿ:


ಎಲ್ಲೆಂದರಲ್ಲಿ ಬಿಸಾಡುತ್ತಿರುವ ಈ ಕೋಳಿ ತ್ಯಾಜ್ಯದಿಂದಾಗಿ ಬೀದಿ ನಾಯಿಗಳಿಗೆ ಪ್ರತಿದಿನ ಮೃಷ್ಟಾನ್ನ ಸಿಕ್ಕಂತಾಗುತ್ತಿದೆ. ಇದನ್ನು ತಿಂದು ದಷ್ಟಪುಷ್ಟವಾಗಿ ಕೊಬ್ಬಿರುವ ಬೀದಿ ನಾಯಿಗಳು ಮಾಂಸದ ಆಸೆಗೆ ಕೆರೆಯಂಗಳದಲ್ಲಿ ಒಂಟಿಯಾಗಿ ಮೇಯುವ ಕುರಿ, ಮೇಕೆ, ಕರುಗಳ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ. ಇದರ ಜತೆಗೆ ರಸ್ತೆಬದಿಯಲ್ಲಿ ಸಂಚರಿಸುವ ಸಾರ್ವಜನಿಕರ ಮೇಲೂ ದಾಳಿ ನಡೆಸುತ್ತಿವೆ.Conclusion:ಧರ್ಮರಾಜು ಎಮ್ ಕೆಆರ್ ಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.