ದೇವನಹಳ್ಳಿ (ಬೆಂ.ಗ್ರಾಮಾಂತರ): ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯುವಕನೊಬ್ಬ ಕ್ವಾರಂಟೈನ್ ಕೇಂದ್ರಕ್ಕೆ ಹೋಗಲು ಪೊಲೀಸರೊಂದಿಗೆ ಕಿರಿಕ್ ಮಾಡಿದ್ದಾನೆ. ಟರ್ಮಿನಲ್ ಒಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಹೊರ ಬಂದ ಯುವಕ, ಕ್ವಾರಂಟೈನ್ ಕೇಂದ್ರ ಆಯ್ದುಕೊಂಡು ತನಗಾಗಿ ಕಾಯ್ದಿರಿಸಿದ ಬಸ್ ಹತ್ತಲು ಹೋಗಿದ್ದ.
ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಲು ಯತ್ನಿಸಿದ್ದು, ತಕ್ಷಣವೇ ಪರಾರಿಯಾಗಲು ಯತ್ನಿಸಿದ ಯುವಕನನ್ನು ಪೊಲೀಸರು ಹಿಡಿದು ತಂದಿದ್ದಾರೆ. ಈ ವೇಳೆ ಕ್ವಾರಂಟೈನ್ ಕೇಂದ್ರಕ್ಕೆ ಹೋಗುವುದಿಲ್ಲವೆಂದು ಪೊಲೀಸರೊಂದಿಗೆ ಕಿರಿಕ್ ತೆಗೆದಿದ್ದು, ಆತನನ್ನು ಸಮಾಧಾನ ಮಾಡಿದ ಪೊಲೀಸರು ಕೊನೆಗೊ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.