ETV Bharat / state

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮಕ್ಕೆ 'ಗಾಂಧಿ‌ ಗ್ರಾಮ ಪುರಸ್ಕಾರ'

author img

By

Published : Oct 3, 2019, 12:23 PM IST

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯತ್​ 2018- 19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಗ್ರಾಮದಲ್ಲಿನ ಎಲ್ಲಾ ಮನೆಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ತಮ್ಮ ಗ್ರಾಮಕ್ಕೆ ಈ ಪುರಸ್ಕಾರ ದೊರೆತಿರುವುದು ಜನರಲ್ಲಿ ಸಂತಸ ಮೂಡಿಸಿದೆ.

Devanahalli taluk karahalli village

ಬೆಂಗಳೂರು: ಪ್ರತಿ ವರ್ಷ ಗಾಂಧಿ ಜಯಂತಿ ಪ್ರಯುಕ್ತ ತಾಲೂಕಿನ ಒಂದು ಗ್ರಾಮದ ಸ್ವಚ್ಛತೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ 'ಗಾಂಧಿ ಗ್ರಾಮ ಪುರಸ್ಕಾರ'ವನ್ನು ನೀಡಲಾಗುತ್ತಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮ ಈ ಪುರಸ್ಕಾರಕ್ಕೆ ಪಾತ್ರವಾಗಿದೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮಕ್ಕೆ ಕಾರಹಳ್ಳಿ ಗ್ರಾಮಕ್ಕೆ 'ಗಾಂಧಿ‌ ಗ್ರಾಮ ಪುರಸ್ಕಾರ'

ಕಾರಹಳ್ಳಿ ಗ್ರಾಮ ಪಂಚಾಯತ್​ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಈ ಗ್ರಾಮ ಪಂಚಾಯತ್​ನಲ್ಲಿನ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಪುರಸ್ಕಾರ ಒಲಿದುಬಂದಿದೆ. ಇಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಗ್ರಾಮದಲ್ಲಿನ ಎಲ್ಲಾ ಮನೆಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಸೂಕ್ತ ಅವಧಿಗೆ ಸಭೆ, ಸಂಪೂರ್ಣ ಸಾಕ್ಷರ ಪಂಚಾಯತ್‌, ಪ್ಲಾಸ್ಟಿಕ್‌ ನಿಷೇಧ ಹೀಗೆ ಹಲವು ಕಾರ್ಯಗಳಿಂದ ಗಮನ ಸೆಳೆದಿರುವ ಕಾರಹಳ್ಳಿ ಪಂಚಾಯತ್​ ಜಿಲ್ಲೆಯಲ್ಲೇ ಮಾದರಿಯಾಗಿದೆ.

ಇನ್ನು ತಮ್ಮ ಗ್ರಾಮ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮಗಳ ಪ್ರಕಾರ ತೆರಿಗೆ ಪರಿಷ್ಕರಣೆ ಮಾಡಲಾಗಿದ್ದು, ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳ ಅನುದಾನ ಪೂರ್ಣ ಬಳಕೆಯಾಗಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಅರ್ಹ ಕುಟುಂಬಗಳಿಗೆ ಉದ್ಯೋಗ. ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, 691 ಕುಟುಂಬಗಳಿಗೆ ಕೊಳವೆ ಬಾವಿ ಮೂಲಕ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಸೂಕ್ತ ಬೀದಿ ದೀಪಗಳ ವ್ಯವಸ್ಥೆ, ಪ್ರತಿ ಕುಟುಂಬಗಳು ವೈಯಕ್ತಿಕ ಶೌಚಾಲಯ ಹೊಂದಿದ್ದು, ಬಹಿರ್ದೆಸೆ ಮುಕ್ತ ಗ್ರಾಮವಾಗಿದೆ. ವ್ಯವಸ್ಥಿತ ಚರಂಡಿ ನಿರ್ಮಾಣ, ನಿರ್ವಹಣೆಯಲ್ಲಿ ಶೇ.100 ಸಾಧನೆಯಾಗಿದೆ ಎಂದು ಗ್ರಾ. ಪಂ. ಅಧ್ಯಕ್ಷ ದೇವರಾಜ್ ಸಂತಸ ವ್ಯಕ್ತಪಡಿಸಿದರು.

ಬೆಂಗಳೂರು: ಪ್ರತಿ ವರ್ಷ ಗಾಂಧಿ ಜಯಂತಿ ಪ್ರಯುಕ್ತ ತಾಲೂಕಿನ ಒಂದು ಗ್ರಾಮದ ಸ್ವಚ್ಛತೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ 'ಗಾಂಧಿ ಗ್ರಾಮ ಪುರಸ್ಕಾರ'ವನ್ನು ನೀಡಲಾಗುತ್ತಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮ ಈ ಪುರಸ್ಕಾರಕ್ಕೆ ಪಾತ್ರವಾಗಿದೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮಕ್ಕೆ ಕಾರಹಳ್ಳಿ ಗ್ರಾಮಕ್ಕೆ 'ಗಾಂಧಿ‌ ಗ್ರಾಮ ಪುರಸ್ಕಾರ'

ಕಾರಹಳ್ಳಿ ಗ್ರಾಮ ಪಂಚಾಯತ್​ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಈ ಗ್ರಾಮ ಪಂಚಾಯತ್​ನಲ್ಲಿನ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಪುರಸ್ಕಾರ ಒಲಿದುಬಂದಿದೆ. ಇಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಗ್ರಾಮದಲ್ಲಿನ ಎಲ್ಲಾ ಮನೆಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಸೂಕ್ತ ಅವಧಿಗೆ ಸಭೆ, ಸಂಪೂರ್ಣ ಸಾಕ್ಷರ ಪಂಚಾಯತ್‌, ಪ್ಲಾಸ್ಟಿಕ್‌ ನಿಷೇಧ ಹೀಗೆ ಹಲವು ಕಾರ್ಯಗಳಿಂದ ಗಮನ ಸೆಳೆದಿರುವ ಕಾರಹಳ್ಳಿ ಪಂಚಾಯತ್​ ಜಿಲ್ಲೆಯಲ್ಲೇ ಮಾದರಿಯಾಗಿದೆ.

ಇನ್ನು ತಮ್ಮ ಗ್ರಾಮ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮಗಳ ಪ್ರಕಾರ ತೆರಿಗೆ ಪರಿಷ್ಕರಣೆ ಮಾಡಲಾಗಿದ್ದು, ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳ ಅನುದಾನ ಪೂರ್ಣ ಬಳಕೆಯಾಗಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಅರ್ಹ ಕುಟುಂಬಗಳಿಗೆ ಉದ್ಯೋಗ. ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, 691 ಕುಟುಂಬಗಳಿಗೆ ಕೊಳವೆ ಬಾವಿ ಮೂಲಕ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಸೂಕ್ತ ಬೀದಿ ದೀಪಗಳ ವ್ಯವಸ್ಥೆ, ಪ್ರತಿ ಕುಟುಂಬಗಳು ವೈಯಕ್ತಿಕ ಶೌಚಾಲಯ ಹೊಂದಿದ್ದು, ಬಹಿರ್ದೆಸೆ ಮುಕ್ತ ಗ್ರಾಮವಾಗಿದೆ. ವ್ಯವಸ್ಥಿತ ಚರಂಡಿ ನಿರ್ಮಾಣ, ನಿರ್ವಹಣೆಯಲ್ಲಿ ಶೇ.100 ಸಾಧನೆಯಾಗಿದೆ ಎಂದು ಗ್ರಾ. ಪಂ. ಅಧ್ಯಕ್ಷ ದೇವರಾಜ್ ಸಂತಸ ವ್ಯಕ್ತಪಡಿಸಿದರು.

Intro:KN_BNG_01_02_Gandhi_grama_Ambarish_7103301
Slug: ಕಾರಹಳ್ಳಿ ಗ್ರಾಮಕ್ಕೆ ಗಾಂಧಿ‌ ಗ್ರಾಮ ಪುರಸ್ಕಾರ

ಬೆಂಗಳೂರು: ಪ್ರತಿ ವರ್ಷ ಗಾಂಧಿ ಜಯಂತಿ ಪ್ರಯುಕ್ತ ಪ್ರತಿ ತಾಲೂಕಿನಲ್ಲಿ ಒಂದು ಗ್ರಾಮವನ್ನು ಸ್ವಚ್ಚತೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಲಾಗುತ್ತಿದೆ.. ಈ ವರ್ಷ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಒಂದು ಗ್ರಾಮ ಪಂಚಾಯತಿ ಈ ಪುರಸ್ಕಾರಕ್ಕೆ ಪಾತ್ರವಾಗಿದೆ ಆ ಗ್ರಾಮ ಯಾವುದು ಅನ್ನೋದರ ಡೀಟೆಲ್ಸ್ ಇಲ್ಲಿದೆ..

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ 2018- 19ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ ಗ್ರಾ.ಪಂ.ಗಳ ಪೈಕಿ ಕಾರಹಳ್ಳಿ ಗ್ರಾ.ಪಂ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಆ ಗ್ರಾಮ ಪಂಚಾಯಿತಿಯಲ್ಲಿನ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಈ ಪುರಸ್ಕಾರವನ್ನು ನೀಡಲಾಗುತ್ತದೆ.. ನಮ್ಮ‌ ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯತಿ ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಖುಷಿಯಾಗುತ್ತದೆ ಎಂದು ದೇವನಹಳ್ಳಿ ತಾಲೂಕು ಪಂಚಾಯತಿ ಕಾರ್ಯ ನಿರ್ವಹಕ ಅಧಿಕಾರಿ ‌ಮುರುಡಯ್ಯ ಸಂತೋಷ ವ್ಯಕ್ತಪಡಿಸಿದರು..

ಬೈಟ್: ಮುರುಡಯ್ಯ, ದೇವನಹಳ್ಳಿ ತಾಲೂಕು ಪಂಚಾಯತಿ ಕಾರ್ಯ ನಿರ್ವಹಕ ಅಧಿಕಾರಿ

ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಸೂಕ್ತ ವ್ಯವಸ್ಥೆ, ಗ್ರಾ.ಪಂ. ಸಭೆಗಳು. ನಲ್ಲಿ ನೀರು ಸರಬರಾಜು ಸೌಕರ್ಯ ಪಡೆದ ಎಲ್ಲ ಮನೆಗಳಿಗೂ ಮೀಟರ್‌ ಅಳವಡಿಕೆ, ವಿದ್ಯುತ್ ಉಳಿತಾಯಕ್ಕೆ ಸೋಲಾರ್ ಅಳವಡಿಕೆ.. ಸಂಪೂರ್ಣ ಸಾಕ್ಷರ ಪಂಚಾಯತ್‌, ಪ್ಲಾಸ್ಟಿಕ್‌ ನಿಷೇಧ ಜಾರಿಗೊಳಿಸಿ ಗಮನ ಸೆಳೆದ ಕಾರಹಳ್ಳಿ ಪಂಚಾಯಿತಿ ಜಿಲ್ಲೆಯಲ್ಲೇ ಮಾದರಿಯಾಗಿ ಗಾಂಧಿ ಪುರಸ್ಕಾರ ಪಡೆದಿರುವುದು ಗಮನಾರ್ಹ. ಒಣಕಸವನ್ನು ಸಂಗ್ರಹಿಸಲಾಗುತ್ತಿದೆ. ಬೀದಿಗಳಿಂದ ಹಸಿ ಕಸದ ನಿರ್ವಹಣೆ ನಡೆಸಲಾಗುತ್ತಿದೆ..

ಬೈಟ್: ದೇವರಾಜ್, ಕಾರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ

ಕರ್ನಾಟಕ ಗ್ರಾಮಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮಗಳ ಪ್ರಕಾರ ತೆರಿಗೆ ಪರಿಷ್ಕರಣೆ ಮಾಡಲಾಗಿದೆ. 14ನೇ ಹಣಕಾಸು ಆಯೋಗದ ಅನುದಾನ ಪೂರ್ಣ ಬಳಕೆಯಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿ ಯೋಜನೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಅರ್ಹ ಕುಟುಂಬಗಳಿಗೆ ಉದ್ಯೋಗ. ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 691 ಕುಟುಂಬಗಳಿಗೆ ಕೊಳವೆ ಬಾವಿ ಮೂಲಕ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಬೀದಿ ದೀಪಗಳು.. ಇಂದಿರಾ ಆವಾಸ್‌, ಅಂಬೇಡ್ಕರ್‌ ಗ್ರಾಮೀಣ ನಿವಾಸ್‌ ಯೋಜನೆಗಳಲ್ಲಿ ನೂರು ಶೇಕಡ ಪ್ರಗತಿ ಸಾಧಿಸಿರುವುದು ವಿಶೇಷ. ಪ್ರತಿ ಕುಟುಂಬಗಳು ವೈಯಕ್ತಿಕ ಶೌಚಾಲಯ ಹೊಂದಿದ್ದು, ಬಹಿರ್ದೆಶೆ ಮುಕ್ತ ಗ್ರಾಮ ಪಂಚಾಯಿತಿಯಾಗಿದೆ.. ಚರಂಡಿ ನಿರ್ಮಾಣ, ನಿರ್ವಹಣೆಯಲ್ಲಿ ಶೇ.100 ಸಾಧನೆಯಾಗಿದೆ ಎಂದು ಅಧ್ಯಕ್ಷರು ಹೇಳುತ್ತಾರೆ..

ಬೈಟ್: ದೇವರಾಜ್, ಕಾರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ

ಒಟ್ಟಾರೆ, ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿಯಲ್ಲಿ ಮುಂದಿದ್ದು, ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ.. ಇದೆ ರೀತಿ ಎಲ್ಲಾ ಗ್ರಾಮಗಳು ಅಭಿವೃದ್ಧಿ ಸಾಧಿಸಿ ಗಾಂಧಿ ಗ್ರಾಮಕ್ಕೆ ಪುರಸ್ಕೃತವಾಗುವತ್ತ ಹೆಜ್ಜೆ ಇಡಬೇಕಿದೆ..

ಅಂಬರೀಶ್, ಈ ಟಿವಿ ಭಾರತ ಬೆಂಗಳೂರು

Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.