ETV Bharat / state

RCEP ಒಪ್ಪಂದಕ್ಕೆ ದೊಡ್ಡಬಳ್ಳಾಪುರ ರೈತ ಸಂಘಟನೆ ವಿರೋಧ - Regional Comprehensive Economic Partnership

ಗೋ ಸಂರಕ್ಷಣೆಯ ಹೆಸರಲ್ಲಿ ಬಂದ ಸರ್ಕಾರ ಹಸು ಸಾಕುವ ರೈತರ ಸಂಹಾರ ನಡೆಸಿದೆ. ಗ್ಯಾಟ್ ಒಪ್ಪಂದದಿಂದಾಗಿ ಇಲ್ಲಿಯ ತನಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. RCEP (Regional Comprehensive Economic Partnership) ಒಪ್ಪಂದಕ್ಕೆ ಸಹಿ ಹಾಕಿದರೆ ಅದರ ಪರಿಣಾಮ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವಂತಾಗುತ್ತದೆ ಎಂದು ರೈತರು ಆರೋಪಿಸಿದ್ದಾರೆ.

RCEP ಒಪ್ಪಂದಕ್ಕೆ ದೊಡ್ಡಬಳ್ಳಾಪುರ ರೈತ ಸಂಘಟನೆ ವಿರೋಧ
author img

By

Published : Oct 26, 2019, 7:28 PM IST

ದೊಡ್ಡಬಳ್ಳಾಪುರ: ಗೋ - ಸಂರಕ್ಷಣೆಯ ಹೆಸರಲ್ಲಿ ಬಂದ ಕೇಂದ್ರ ಸರ್ಕಾರ ಹಸು ಸಾಕಣೆಯಿಂದ ಉದ್ಯೋಗ ನಡೆಸುತ್ತಿರುವ ರೈತರ ಸಂಹಾರ ನಡೆಸುತ್ತಿದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಸಹಿ ಹಾಕಿದ್ದಲ್ಲಿ ಮಹಿಳೆಯರ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತದೆ ಎಂದು ರಾಜ್ಯ ರೈತಸಂಘದ ತಾಲೂಕು ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಆರೋಪಿಸಿದರು.

RCEP ಒಪ್ಪಂದಕ್ಕೆ ದೊಡ್ಡಬಳ್ಳಾಪುರ ರೈತ ಸಂಘಟನೆ ವಿರೋಧ

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ರೈತಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾಟ್ ಒಪ್ಪಂದದಿಂದಾಗಿ ಇಲ್ಲಿಯ ತನಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು RCEP ಒಪ್ಪಂದಕ್ಕೆ ಸಹಿ ಹಾಕಿದರೆ ಅದರ ಪರಿಣಾಮ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವಂತಾಗುತ್ತದೆ. ಬರಗಾಲ ನೆರೆಯಿಂದ ತತ್ತರಿಸುವಾಗಲೂ ರೈತರು ಹೈನುಗಾರಿಕೆಯಿಂದ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದರು. ಈ ಒಪ್ಪಂದದಿಂದ ಹೈನೋದ್ಯಮ ನಾಶವಾಗಲಿದ್ದು ಅದು ಮಹಿಳೆಯರ ಮೇಲೆ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಾಯಿಸಿ ಇದೇ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದು ಕೊಳ್ಳುವ ಮೊದಲು ಅದನ್ನು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು ಆದರೆ ಈ ಒಪ್ಪಂದಕ್ಕೆ ಯಾವುದೇ ರೀತಿಯ ಚರ್ಚೆ ನಡೆಸದೆ ಏಕ ಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿರುವುದು ಸಂವಿಧಾನ ಮತ್ತು ಜನವಿರೋಧಿಯಾಗಿದೆ ಎಂದರು.

ದೊಡ್ಡಬಳ್ಳಾಪುರ: ಗೋ - ಸಂರಕ್ಷಣೆಯ ಹೆಸರಲ್ಲಿ ಬಂದ ಕೇಂದ್ರ ಸರ್ಕಾರ ಹಸು ಸಾಕಣೆಯಿಂದ ಉದ್ಯೋಗ ನಡೆಸುತ್ತಿರುವ ರೈತರ ಸಂಹಾರ ನಡೆಸುತ್ತಿದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಸಹಿ ಹಾಕಿದ್ದಲ್ಲಿ ಮಹಿಳೆಯರ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತದೆ ಎಂದು ರಾಜ್ಯ ರೈತಸಂಘದ ತಾಲೂಕು ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಆರೋಪಿಸಿದರು.

RCEP ಒಪ್ಪಂದಕ್ಕೆ ದೊಡ್ಡಬಳ್ಳಾಪುರ ರೈತ ಸಂಘಟನೆ ವಿರೋಧ

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ರೈತಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾಟ್ ಒಪ್ಪಂದದಿಂದಾಗಿ ಇಲ್ಲಿಯ ತನಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು RCEP ಒಪ್ಪಂದಕ್ಕೆ ಸಹಿ ಹಾಕಿದರೆ ಅದರ ಪರಿಣಾಮ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವಂತಾಗುತ್ತದೆ. ಬರಗಾಲ ನೆರೆಯಿಂದ ತತ್ತರಿಸುವಾಗಲೂ ರೈತರು ಹೈನುಗಾರಿಕೆಯಿಂದ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದರು. ಈ ಒಪ್ಪಂದದಿಂದ ಹೈನೋದ್ಯಮ ನಾಶವಾಗಲಿದ್ದು ಅದು ಮಹಿಳೆಯರ ಮೇಲೆ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಾಯಿಸಿ ಇದೇ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದು ಕೊಳ್ಳುವ ಮೊದಲು ಅದನ್ನು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು ಆದರೆ ಈ ಒಪ್ಪಂದಕ್ಕೆ ಯಾವುದೇ ರೀತಿಯ ಚರ್ಚೆ ನಡೆಸದೆ ಏಕ ಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿರುವುದು ಸಂವಿಧಾನ ಮತ್ತು ಜನವಿರೋಧಿಯಾಗಿದೆ ಎಂದರು.

Intro:ಗೋ ಸಂರಕ್ಷಣೆಯ ಹೆಸರಲ್ಲಿ ಬಂದ ಸರ್ಕಾರ ಹಸು ಸಾಕುವ ರೈತರ ಸಂಹಾರ ನಡೆಸಿದೆ

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತವ್ಯಾಪಾರ ಒಪ್ಪಂದಕ್ಕೆ ರೈತ ಸಂಘಟನೆ ವಿರೋಧ
Body:ದೊಡ್ಡಬಳ್ಳಾಪುರ : ಗೋ ಸಂರಕ್ಷಣೆಯ ಹೆಸರಲ್ಲಿ ಬಂದ ಕೇಂದ್ರ ಸರ್ಕಾರ ಹಸು ಸಾಕಣಿಕೆಯಿಂದ ಉದ್ಯೋಗ ನಡೆಸುತ್ತಿರುವ ರೈತರ ಸಂಹಾರ ನಡೆಸುತ್ತಿದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಸಹಿ ಹಾಕಿದ್ದಲ್ಲಿ ಮಹಿಳೆಯರ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತದೆ
ಎಂದು ರಾಜ್ಯ ರೈತಸಂಘದ ತಾಲ್ಲೂಕು ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಆರೋಪಿಸಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ರೈತಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾಟ್ ಒಪ್ಪಂದದಿಂದಾಗಿ ಇಲ್ಲಿಯ ತನಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು RCEP ಒಪ್ಪಂದಕ್ಕೆ ಸಹಿ ಹಾಕಿದರೆ ಅದರ ಪರಿಣಾಮ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವಂತಾಗುತ್ತದೆ. ಬರಗಾಲ ನೆರೆಯಿಂದ ತತ್ತರಿಸುವಾಗಲೂ ರೈತರು ಹೈನುಗಾರಿಕೆಯಿಂದ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದರು ಈ ಒಪ್ಪಂದದಿಂದ ಹೈನೋದ್ಯಮ ನಾಶವಾಗಲಿದ್ದು ಅದು ಮಹಿಳೆಯರ ಮೇಲೆ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಾಯಿಸಿ ಇದೇ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದರು
ರೈತಸಂಘದ ರಾಜ್ಯ ಉಪಾದ್ಯಕ್ಷರಾದ ವೆಂಕಟನಾರಾಯಣ ಅವರು ಮಾತನಾಡಿ 2014 ರಲ್ಲಿ ನರೇಂದ್ರ ಮೋದಿಯವರು 2022 ಕ್ಕೆ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದರು ಆದರೆ ರೈತರ ಆದಾಯ ದ್ವಿಗುಣ ಆಗುವ ಬದಲು RCEP ಒಪ್ಪಂದಕ್ಕೆ ಸಹಿ ಹಾಕಲು ತಯಾರಿ ಮಾಡುವ ಮೂಲಕ ರೈತರಿಗೆ ಮರಣ ಶಾಸನ ಬರೆಯಲು ಹೊರಟಿದ್ದಾರೆ ಎಂದರು. ರೈತ ಮುಖಂಡರಾದ ಸುಲೋಚನಮ್ಮ ಅವರು ಮಾತನಾಡಿ ಸ್ವಾಮಿನಾಥನ್ ವರದಿ ಜಾರಿಗೊಳಿಸುವ ಬಗ್ಗೆ ಭರವಸೆ ನೀಡಿದ್ದ ಮೋದಿಯವರು ಅದನ್ನು ಮೂಲೆಗುಂಪು ಮಾಡಿ ಈಗ RCEP ಒಪ್ಪಂದ ಮಾಡಿಕೊಳ್ಳಲು ಮುಂದಾಗಿರುವುದು ಸರಿಯಲ್ಲ ಇದರಿಂದ ರೈತರ ಆದಾಯ ಯಾವ ರೀತಿ ದ್ವಿಗುಣವಾಗುತ್ತದೆ ಎಂದು ಅವರು ಹೇಳಬೇಕು, ಈ ಒಪ್ಪಂದವು WTO ಒಪ್ಪಂದಕ್ಕಿಂತಲೂ ಮಾರಕವಾಗಿದ್ದು ರೈತರ ಬದುಕು ನಾಶವಾಗಲಿದೆ ಎಂದರು. ರೈತ ಮುಖಂಡರು ವಕೀಲರೂ ಆದ ಸಿದ್ಧಾರ್ಥ ಅವರು ಮಾತನಾಡಿ ಗೋ ರಕ್ಷಣೆಯ ಹೆಸರಲ್ಲಿ ಅಧಿಕಾರ ಹಿಡಿದವರು ಇಂದು ಗೋ ಸಂತತಿಯನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದು ಕೊಳ್ಳವ ಮೊದಲು ಅದನ್ನು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು ಆದರೆ ಈ ಒಪ್ಪಂದಕ್ಕೆ ಯಾವುದೇ ರೀತಿಯ ಚರ್ಚೆ ನಡೆಸದೆ ಏಕ ಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿರುವುದು ಸಂವಿಧಾನ ಮತ್ತು ಜನವಿರೋಧಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಪ್ರಸನ್ನ, ವಸಂತ ಜಿಂಕೆ ಬಚ್ಚಹಳ್ಳಿಯ ಸತೀಶ್ RCEP ಕಾಯ್ದೆ ವಿರುದ್ಧ ಅಕ್ರೋಶ್ರ ವ್ಯಕ್ತಪಡಿಸಿದರು.

ಬೈಟ್ : ಸಿದ್ದಾರ್ಥ, ರೈತ ಮುಖಂಡರು.

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.