ETV Bharat / state

56 ಇಂಚಿನ ಎದೆ ಇದ್ದರೆ ಪ್ರಯೋಜನವಿಲ್ಲ.. ಆ ಎದೆಯಲ್ಲಿ ಮಾತೃ ಹೃದಯವಿರಬೇಕು : ಕುಟುಕಿದ ಸಿದ್ದರಾಮಯ್ಯ

author img

By

Published : Jul 18, 2021, 10:00 PM IST

ಕೊರೊನಾ ಇಡೀ ವಿಶ್ವವನ್ನೇ ಕಾಡಿದೆ. ಹೀಗಾಗಿ, ತೀವ್ರ ಸಂಕಷ್ಟಕ್ಕೆ‌ ಸಿಲುಕಿರುವ ಚಾಲಕರು, ಕಾರ್ಮಿಕರು, ರೈತರೂ ಸೇರಿ ಎಲ್ಲರಿಗೂ 10 ಸಾವಿರ ಹಣ, 10 ಕೆಜಿ ಅಕ್ಕಿ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಸಲಹೆ ನೀಡಿದೆ. ಆದರೆ, ಅವರು ಕೇಳಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಜನರ ಕಷ್ಟ ಅರಿವಾಗುತ್ತಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆ ಯಾರ ಕಾಲದಲ್ಲೂ ಇಷ್ಟು ಏರೆಕೆ ಕಂಡಿರಲ್ಲಿಲ್ಲ..

former-cm-siddaramaiah
ಸಿದ್ದರಾಮಯ್ಯ

ದೊಡ್ಡಬಳ್ಳಾಪುರ (ಬೆಂ.ಗ್ರಾ): ಕೊರೊನಾ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿಯವರಿಗೆ 56 ಇಂಚಿನ ಎದೆ ಇದ್ದರೆ ಪ್ರಯೋಜನವಿಲ್ಲ. ಆ ಎದೆಯಲ್ಲಿ ಮಾತೃ ಹೃದಯವಂತಿಕೆ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್ 2ನೇ ಅಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಜನಪರ ಕಾಳಜಿ ಉಳ್ಳ ವ್ಯಕ್ತಿ ವೆಂಕಟರಮಣಯ್ಯ ಶಾಸಕರಾಗಿ ದೊಡ್ಡಬಳ್ಳಾಪುರಕ್ಕೆ ದೊರೆತಿದ್ದಾರೆ. ಕಷ್ಟ ಕಾಲದಲ್ಲಿ ಎಲ್ಲರಿಗೂ ನೆರವು ನೀಡುವ ಮನಸ್ಸು ಇರುವುದಿಲ್ಲ. ಆದರೆ, ವೆಂಕಟರಮಣಯ್ಯ ತಾಲೂಕಿನ‌ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ ಸಿದ್ದರಾಮಯ್ಯ

ಕೊರೊನಾ ಇಡೀ ವಿಶ್ವವನ್ನೇ ಕಾಡಿದ ಮಾರಿಯಾಗಿದೆ. ಹೀಗಾಗಿ, ತೀವ್ರ ಸಂಕಷ್ಟಕ್ಕೆ‌ ಸಿಲುಕಿರುವ ಚಾಲಕರು, ಕಾರ್ಮಿಕರು, ರೈತರೂ ಸೇರಿದಂತೆ ಎಲ್ಲರಿಗೂ 10 ಸಾವಿರ ಹಣ, 10 ಕೆಜಿ ಅಕ್ಕಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಸಲಹೆ ನೀಡಿದೆ. ಆದರೆ, ಅವರು ಕೇಳಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಜನರ ಕಷ್ಟ ಅರಿವಾಗುತ್ತಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆ ಯಾರ ಕಾಲದಲ್ಲೂ ಇಷ್ಟು ಏರೆಕೆ ಕಂಡಿರಲ್ಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೋದಿ ಅಚ್ಚೇದಿನ್ ಅಂತಾ ಹೇಳಿ ಬಡವರು, ಕೂಲಿ ಕಾರ್ಮಿಕರನ್ನು ಬೀದಿಗೆ ತಂದಿದ್ದಾರೆ. ಕೊರೊನಾಗೆ ವ್ಯಾಕ್ಸಿನ್ ಒಂದೇ ಮದ್ದು, ಆಗಸ್ಟ್ ಅಂತ್ಯಕ್ಕೆ 3ನೇ ಅಲೆ ಬರುವ ಬಗ್ಗೆ ತಜ್ಞರು ತಿಳಿಸಿದ್ದಾರೆ. ಕೂಡಲೇ ಪ್ರತಿಯೊಬ್ಬರು ಎರಡು ವ್ಯಾಕ್ಸಿನ್‌ಗಳನ್ನು ಪಡೆದುಕೊಳ್ಳಿ. ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಎಚ್ಚರಿಸಿದರು.

ಕುರಿ ಗಿಫ್ಟ್ ಕೊಟ್ಟ ಅಭಿಮಾನಿಗಳು

ಮಾಜಿ ಸಿಎಂ ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ, ಬೃಹತ್ ಹಾರಗಳನ್ನು ಹಾಕಿ ಸ್ವಾಗತಿಸಿದರು. ಕಾಂಗ್ರೆಸ್ ಪದಾಧಿಕಾರಿಗಳು ಕುರಿಯನ್ನು ಗಿಫ್ಟ್ ಕೊಟ್ಟು ಸಂತಸ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸುಮಾರು 600 ಕಿಟ್ ವಿತರಿಸಲಾಯಿತು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ತೊರೆದು ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.

ದೊಡ್ಡಬಳ್ಳಾಪುರ (ಬೆಂ.ಗ್ರಾ): ಕೊರೊನಾ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿಯವರಿಗೆ 56 ಇಂಚಿನ ಎದೆ ಇದ್ದರೆ ಪ್ರಯೋಜನವಿಲ್ಲ. ಆ ಎದೆಯಲ್ಲಿ ಮಾತೃ ಹೃದಯವಂತಿಕೆ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್ 2ನೇ ಅಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಜನಪರ ಕಾಳಜಿ ಉಳ್ಳ ವ್ಯಕ್ತಿ ವೆಂಕಟರಮಣಯ್ಯ ಶಾಸಕರಾಗಿ ದೊಡ್ಡಬಳ್ಳಾಪುರಕ್ಕೆ ದೊರೆತಿದ್ದಾರೆ. ಕಷ್ಟ ಕಾಲದಲ್ಲಿ ಎಲ್ಲರಿಗೂ ನೆರವು ನೀಡುವ ಮನಸ್ಸು ಇರುವುದಿಲ್ಲ. ಆದರೆ, ವೆಂಕಟರಮಣಯ್ಯ ತಾಲೂಕಿನ‌ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ ಸಿದ್ದರಾಮಯ್ಯ

ಕೊರೊನಾ ಇಡೀ ವಿಶ್ವವನ್ನೇ ಕಾಡಿದ ಮಾರಿಯಾಗಿದೆ. ಹೀಗಾಗಿ, ತೀವ್ರ ಸಂಕಷ್ಟಕ್ಕೆ‌ ಸಿಲುಕಿರುವ ಚಾಲಕರು, ಕಾರ್ಮಿಕರು, ರೈತರೂ ಸೇರಿದಂತೆ ಎಲ್ಲರಿಗೂ 10 ಸಾವಿರ ಹಣ, 10 ಕೆಜಿ ಅಕ್ಕಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಸಲಹೆ ನೀಡಿದೆ. ಆದರೆ, ಅವರು ಕೇಳಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಜನರ ಕಷ್ಟ ಅರಿವಾಗುತ್ತಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆ ಯಾರ ಕಾಲದಲ್ಲೂ ಇಷ್ಟು ಏರೆಕೆ ಕಂಡಿರಲ್ಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೋದಿ ಅಚ್ಚೇದಿನ್ ಅಂತಾ ಹೇಳಿ ಬಡವರು, ಕೂಲಿ ಕಾರ್ಮಿಕರನ್ನು ಬೀದಿಗೆ ತಂದಿದ್ದಾರೆ. ಕೊರೊನಾಗೆ ವ್ಯಾಕ್ಸಿನ್ ಒಂದೇ ಮದ್ದು, ಆಗಸ್ಟ್ ಅಂತ್ಯಕ್ಕೆ 3ನೇ ಅಲೆ ಬರುವ ಬಗ್ಗೆ ತಜ್ಞರು ತಿಳಿಸಿದ್ದಾರೆ. ಕೂಡಲೇ ಪ್ರತಿಯೊಬ್ಬರು ಎರಡು ವ್ಯಾಕ್ಸಿನ್‌ಗಳನ್ನು ಪಡೆದುಕೊಳ್ಳಿ. ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಎಚ್ಚರಿಸಿದರು.

ಕುರಿ ಗಿಫ್ಟ್ ಕೊಟ್ಟ ಅಭಿಮಾನಿಗಳು

ಮಾಜಿ ಸಿಎಂ ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ, ಬೃಹತ್ ಹಾರಗಳನ್ನು ಹಾಕಿ ಸ್ವಾಗತಿಸಿದರು. ಕಾಂಗ್ರೆಸ್ ಪದಾಧಿಕಾರಿಗಳು ಕುರಿಯನ್ನು ಗಿಫ್ಟ್ ಕೊಟ್ಟು ಸಂತಸ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸುಮಾರು 600 ಕಿಟ್ ವಿತರಿಸಲಾಯಿತು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ತೊರೆದು ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.