ETV Bharat / state

2026ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣ: ಮಾಜಿ ಸಿಎಂ ವೀರಪ್ಪ ಮೊಯ್ಲಿ

author img

By ETV Bharat Karnataka Team

Published : Nov 11, 2023, 7:10 PM IST

ಸಾಂಘಿಕವಾಗಿ ಶಾಸಕರ ಅಭಿಪ್ರಾಯ ತೆಗೆದುಕೊಂಡು ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದೆ. ಸದ್ಯ​ ಅವರೇ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.

Etv Bharatformer-cm-veerappa-moily-reaction-on-yettinahole-project
2026ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪ್ರತಿಕ್ರಿಯೆ

ನೆಲಮಂಗಲ(ಬೆಂಗಳೂರು): ಎತ್ತಿನಹೊಳೆ ಯೋಜನೆಗೆ ಎಲ್ಲ ಸಿದ್ಧತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಯೋಜನೆಗೆ ಬಜೆಟ್​ನಲ್ಲಿ ಹಣ ಕೊಟ್ಟಿದ್ದಾರೆ. ಈ ವರ್ಷ ಅದಕ್ಕೆ 3 ಸಾವಿರ ಕೋಟಿ, ಮುಂದಿನ ವರ್ಷ 3 ಸಾವಿರ ಕೋಟಿ ನೀಡಲಾಗುತ್ತದೆ. 2026ರ ವೇಳೆಗೆ ನೂರಕ್ಕೆ ನೂರ ರಷ್ಟು ಎತ್ತಿನಹೊಳೆ ಯೋಜನೆ ಪೂರ್ಣಗೊಂಡು ಈ ಭಾಗದ ಜನರಿಗೆ ಒಳ್ಳೆಯ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪಟ್ಟಣದ ಮಾರುತಿ‌ ಕಾಂಪ್ಲೆಕ್ಸ್​ನಲ್ಲಿ ನಿರ್ಮಿಸುತ್ತಿರುವ ನೂತನ ಕಾಂಗ್ರೆಸ್ ಕಚೇರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಎಐಸಿಸಿನಲ್ಲಿ ಮೋದಿ ಹೇಳಿದ ಹಾಗೆ ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಸಾಂಘಿಕವಾಗಿ ಶಾಸಕರ ಅಭಿಪ್ರಾಯ ತೆಗೆದುಕೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ನಿರ್ಧಾರ ಮಾಡಿದ್ದಾರೆ. ಸದ್ಯ​ ಅವರೇ ಮುಖ್ಯಮಂತ್ರಿ ಎಂದರು. ಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯುವುದು ಗ್ಯಾರಂಟಿ ಇಲ್ಲ ಎಂದು ಪ್ರಧಾನಿ ನೆರೇಂದ್ರ ಮೋದಿ ಹೇಳಿಕೆ ಪ್ರತಿಕ್ರಿಯಿಸಿ, 2024ರ ಮೇಲೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಗ್ಯಾರಂಟಿಯಾ? ಎಂದು ಪ್ರಶ್ನಿಸಿದರು.

ಐದು ಗ್ಯಾರಂಟಿಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೆವು, ಐದರಲ್ಲಿ ನಾಲ್ಕನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ಯುವನಿಧಿ ಯೋಜನೆ ಅಗತ್ಯವಾದ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಜನವರಿಯಿಂದ ಈ ಯೋಜನೆ ಅನುಷ್ಠಾನ ಆಗುತ್ತದೆ ಎಂದರು.

ಇದನ್ನೂ ಓದಿ: ದೇವನಹಳ್ಳಿ- ನಲ್ಲೂರು ಟೋಲ್​ ಸಂಗ್ರಹ ನ. 17ರಿಂದ ಪ್ರಾರಂಭ; ಯಾವ ವಾಹನಕ್ಕೆ ಎಷ್ಟು ಸುಂಕ?

ಮೇಕೆದಾಟು ಯೋಜನೆ ಬಗ್ಗೆ ಡಿಸಿಎಂ ಹೇಳಿದ್ದೇನು?: ಇತ್ತೀಚಿಗೆ, ಮೇಕೆದಾಟು ಅಣೆಕಟ್ಟು ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್​ ಮಾತನಾಡಿ, ಪ್ರಸ್ತುತ ನಮ್ಮ ಕಾಂಗ್ರೆಸ್ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 89ನೇ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು, ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರವಾಗಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಾಧಿಕಾರ, ಸುಪ್ರೀಂ ಕೋರ್ಟ್ ಮುಂದೆ ಮೇಕೆದಾಟು ಯೋಜನೆ ಪ್ರಾರಂಭ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡುತ್ತೇವೆ ಎಂದಿದ್ದರು.

ಸಂಕಷ್ಟದ ಸಂದರ್ಭದಲ್ಲಿ ನೀರು ಹರಿಸಲು ಈ ಯೋಜನೆ ಸಹಕಾರಿಯಾಗುತ್ತದೆ, ಅಲ್ಲದೇ ತಮಿಳುನಾಡಿಗೆ ಈ ಯೋಜನೆಯಿಂದ ಹೆಚ್ಚು ಪ್ರಯೋಜನವಿದೆ. ಕಾವೇರಿ ನೀರು ಎಷ್ಟು ಪ್ರಮಾಣ ಉಳಿದುಕೊಳ್ಳುತ್ತದೆ, ಎಷ್ಟು ಹರಿದು ಹೋಗುತ್ತದೆ, ಎಷ್ಟು ಬಳಕೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಾಧಿಕಾರದ ಮುಂದೆ ಪ್ರಾತ್ಯಕ್ಷಿಕೆ ನೀಡುವ ವೇಳೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದರು.

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪ್ರತಿಕ್ರಿಯೆ

ನೆಲಮಂಗಲ(ಬೆಂಗಳೂರು): ಎತ್ತಿನಹೊಳೆ ಯೋಜನೆಗೆ ಎಲ್ಲ ಸಿದ್ಧತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಯೋಜನೆಗೆ ಬಜೆಟ್​ನಲ್ಲಿ ಹಣ ಕೊಟ್ಟಿದ್ದಾರೆ. ಈ ವರ್ಷ ಅದಕ್ಕೆ 3 ಸಾವಿರ ಕೋಟಿ, ಮುಂದಿನ ವರ್ಷ 3 ಸಾವಿರ ಕೋಟಿ ನೀಡಲಾಗುತ್ತದೆ. 2026ರ ವೇಳೆಗೆ ನೂರಕ್ಕೆ ನೂರ ರಷ್ಟು ಎತ್ತಿನಹೊಳೆ ಯೋಜನೆ ಪೂರ್ಣಗೊಂಡು ಈ ಭಾಗದ ಜನರಿಗೆ ಒಳ್ಳೆಯ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪಟ್ಟಣದ ಮಾರುತಿ‌ ಕಾಂಪ್ಲೆಕ್ಸ್​ನಲ್ಲಿ ನಿರ್ಮಿಸುತ್ತಿರುವ ನೂತನ ಕಾಂಗ್ರೆಸ್ ಕಚೇರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಎಐಸಿಸಿನಲ್ಲಿ ಮೋದಿ ಹೇಳಿದ ಹಾಗೆ ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಸಾಂಘಿಕವಾಗಿ ಶಾಸಕರ ಅಭಿಪ್ರಾಯ ತೆಗೆದುಕೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ನಿರ್ಧಾರ ಮಾಡಿದ್ದಾರೆ. ಸದ್ಯ​ ಅವರೇ ಮುಖ್ಯಮಂತ್ರಿ ಎಂದರು. ಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯುವುದು ಗ್ಯಾರಂಟಿ ಇಲ್ಲ ಎಂದು ಪ್ರಧಾನಿ ನೆರೇಂದ್ರ ಮೋದಿ ಹೇಳಿಕೆ ಪ್ರತಿಕ್ರಿಯಿಸಿ, 2024ರ ಮೇಲೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಗ್ಯಾರಂಟಿಯಾ? ಎಂದು ಪ್ರಶ್ನಿಸಿದರು.

ಐದು ಗ್ಯಾರಂಟಿಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೆವು, ಐದರಲ್ಲಿ ನಾಲ್ಕನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ಯುವನಿಧಿ ಯೋಜನೆ ಅಗತ್ಯವಾದ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಜನವರಿಯಿಂದ ಈ ಯೋಜನೆ ಅನುಷ್ಠಾನ ಆಗುತ್ತದೆ ಎಂದರು.

ಇದನ್ನೂ ಓದಿ: ದೇವನಹಳ್ಳಿ- ನಲ್ಲೂರು ಟೋಲ್​ ಸಂಗ್ರಹ ನ. 17ರಿಂದ ಪ್ರಾರಂಭ; ಯಾವ ವಾಹನಕ್ಕೆ ಎಷ್ಟು ಸುಂಕ?

ಮೇಕೆದಾಟು ಯೋಜನೆ ಬಗ್ಗೆ ಡಿಸಿಎಂ ಹೇಳಿದ್ದೇನು?: ಇತ್ತೀಚಿಗೆ, ಮೇಕೆದಾಟು ಅಣೆಕಟ್ಟು ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್​ ಮಾತನಾಡಿ, ಪ್ರಸ್ತುತ ನಮ್ಮ ಕಾಂಗ್ರೆಸ್ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 89ನೇ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು, ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರವಾಗಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಾಧಿಕಾರ, ಸುಪ್ರೀಂ ಕೋರ್ಟ್ ಮುಂದೆ ಮೇಕೆದಾಟು ಯೋಜನೆ ಪ್ರಾರಂಭ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡುತ್ತೇವೆ ಎಂದಿದ್ದರು.

ಸಂಕಷ್ಟದ ಸಂದರ್ಭದಲ್ಲಿ ನೀರು ಹರಿಸಲು ಈ ಯೋಜನೆ ಸಹಕಾರಿಯಾಗುತ್ತದೆ, ಅಲ್ಲದೇ ತಮಿಳುನಾಡಿಗೆ ಈ ಯೋಜನೆಯಿಂದ ಹೆಚ್ಚು ಪ್ರಯೋಜನವಿದೆ. ಕಾವೇರಿ ನೀರು ಎಷ್ಟು ಪ್ರಮಾಣ ಉಳಿದುಕೊಳ್ಳುತ್ತದೆ, ಎಷ್ಟು ಹರಿದು ಹೋಗುತ್ತದೆ, ಎಷ್ಟು ಬಳಕೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಾಧಿಕಾರದ ಮುಂದೆ ಪ್ರಾತ್ಯಕ್ಷಿಕೆ ನೀಡುವ ವೇಳೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.