ETV Bharat / state

ಹೊಸಕೋಟೆಯಲ್ಲಿ ಗುರು-ಶಿಷ್ಯರ ಸಮಾಗಮ : ಒಂದೇ ಟೇಬಲ್​ನಲ್ಲಿ ಸಿದ್ದು-ಎಂಟಿಬಿ ಬಾಡೂಟ

author img

By

Published : Aug 13, 2021, 8:18 PM IST

ಊಟಕ್ಕೆ ಸಿದ್ದರಾಮಯ್ಯ, ಎಂಟಿಬಿ ನಾಗರಾಜ್​ ಮತ್ತು ಬೈರತಿ ಸುರೇಶ್​ರನ್ನು ಮಾತ್ರ ಆಹ್ವಾನಿಸಲಾಗಿತ್ತು. ಶರತ್ ಬಚ್ಚೇಗೌಡರನ್ನು ಆಹ್ವಾನಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎರಡು ವರ್ಷಗಳ ಹಿಂದೆ ಎಂಟಿಬಿ ನಾಗರಾಜ್​ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು..

ಒಂದೇ ವೇದಿಕೆಯಲ್ಲಿ ಗುರು-ಶಿಷ್ಯರ ಸಮಾಗಮ
ಒಂದೇ ವೇದಿಕೆಯಲ್ಲಿ ಗುರು-ಶಿಷ್ಯರ ಸಮಾಗಮ

ಹೊಸಕೋಟೆ : ಒಂದು ಕಾಲದಲ್ಲಿ ಗುರು-ಶಿಷ್ಯರಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಎಂಟಿಬಿ ನಾಗರಾಜ್ ರಾಜಕಾರಣದ ಚದುರಂಗ ಆಟದಿಂದ ದೂರವಾಗಿದ್ದರು. ಇದೀಗ ಎರಡು ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಹಲವು ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.

ಒಂದೇ ವೇದಿಕೆಯಲ್ಲಿ ಗುರು-ಶಿಷ್ಯರ ಸಮಾಗಮ..

ಹೊಸಕೋಟೆಯಲ್ಲಿ ಇಂದು ಕುರುಬ ಸಮುದಾಯದ ಕನಕ ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು‌. ಇದಕ್ಕೂ ಮುನ್ನ ಎಂಟಿಬಿ ಹಾಗೂ ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಒಂದೇ ಟೇಬಲ್​ನಲ್ಲಿ ಅಕ್ಕಪಕ್ಕ ಕುಳಿತು ಒಟ್ಟಿಗೆ ರಾಗಿಮುದ್ದೆ-ನಾಟಿಕೋಳಿ ಸವಿದರು.

ಊಟಕ್ಕೆ ಸಿದ್ದರಾಮಯ್ಯ, ಎಂಟಿಬಿ ನಾಗರಾಜ್​ ಮತ್ತು ಬೈರತಿ ಸುರೇಶ್​ರನ್ನು ಮಾತ್ರ ಆಹ್ವಾನಿಸಲಾಗಿತ್ತು. ಶರತ್ ಬಚ್ಚೇಗೌಡರನ್ನು ಆಹ್ವಾನಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎರಡು ವರ್ಷಗಳ ಹಿಂದೆ ಎಂಟಿಬಿ ನಾಗರಾಜ್​ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಇದನ್ನೂ ಓದಿ: ನಾನು ಸಚಿವನಾಗಿದ್ದಾಗ ಅತೀ ಹೆಚ್ಚು ಅನುದಾನ ಮೂಡಿಗೆರೆಗೆ ಹೋಗದಿದ್ರೆ ರಾಜೀನಾಮೆ ಕೊಡ್ತೀನಿ: ಸಿ.ಟಿ.ರವಿ ಸವಾಲ್

ಹೊಸಕೋಟೆ : ಒಂದು ಕಾಲದಲ್ಲಿ ಗುರು-ಶಿಷ್ಯರಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಎಂಟಿಬಿ ನಾಗರಾಜ್ ರಾಜಕಾರಣದ ಚದುರಂಗ ಆಟದಿಂದ ದೂರವಾಗಿದ್ದರು. ಇದೀಗ ಎರಡು ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಹಲವು ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.

ಒಂದೇ ವೇದಿಕೆಯಲ್ಲಿ ಗುರು-ಶಿಷ್ಯರ ಸಮಾಗಮ..

ಹೊಸಕೋಟೆಯಲ್ಲಿ ಇಂದು ಕುರುಬ ಸಮುದಾಯದ ಕನಕ ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು‌. ಇದಕ್ಕೂ ಮುನ್ನ ಎಂಟಿಬಿ ಹಾಗೂ ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಒಂದೇ ಟೇಬಲ್​ನಲ್ಲಿ ಅಕ್ಕಪಕ್ಕ ಕುಳಿತು ಒಟ್ಟಿಗೆ ರಾಗಿಮುದ್ದೆ-ನಾಟಿಕೋಳಿ ಸವಿದರು.

ಊಟಕ್ಕೆ ಸಿದ್ದರಾಮಯ್ಯ, ಎಂಟಿಬಿ ನಾಗರಾಜ್​ ಮತ್ತು ಬೈರತಿ ಸುರೇಶ್​ರನ್ನು ಮಾತ್ರ ಆಹ್ವಾನಿಸಲಾಗಿತ್ತು. ಶರತ್ ಬಚ್ಚೇಗೌಡರನ್ನು ಆಹ್ವಾನಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎರಡು ವರ್ಷಗಳ ಹಿಂದೆ ಎಂಟಿಬಿ ನಾಗರಾಜ್​ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಇದನ್ನೂ ಓದಿ: ನಾನು ಸಚಿವನಾಗಿದ್ದಾಗ ಅತೀ ಹೆಚ್ಚು ಅನುದಾನ ಮೂಡಿಗೆರೆಗೆ ಹೋಗದಿದ್ರೆ ರಾಜೀನಾಮೆ ಕೊಡ್ತೀನಿ: ಸಿ.ಟಿ.ರವಿ ಸವಾಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.