ETV Bharat / state

'ಪಕ್ಷಾಂತರ ಮಾಡಿದ ಕಾರಣಕ್ಕೆ ಕಿರುಕುಳ': ದೊಡ್ಡಬಳ್ಳಾಪುರದಲ್ಲಿ ಯುವಕ ಆತ್ಮಹತ್ಯೆ

author img

By

Published : Nov 17, 2022, 11:55 AM IST

ಡೆತ್​ನೋಟ್​ನಲ್ಲಿ ಐದು ಜನರ ಹೆಸರು ಬರೆದಿಟ್ಟ ಯುವಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

A young man committed suicide
ಆತ್ಮಹತ್ಯೆ ಮಾಡಿಕೊಂಡ ಯುವಕ

ದೊಡ್ಡಬಳ್ಳಾಪುರ: ಪಕ್ಷಾಂತರ ಮಾಡಿದ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ತಳವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡಬಳ್ಳಾಪುರ ನಗರದ ಕಚೇರಿ ಪಾಳ್ಯದ ನಿವಾಸಿ ವಿನೋದ್ (29) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಸಾವಿಗೂ ಮುನ್ನ ಡೆತ್​ನೋಟ್ ಬರೆದಿದ್ದು, ಮೂರು ತಿಂಗಳ ಹಿಂದೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗಿದ್ದೆ. ಈ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಐವರ ಹೆಸರು ಬರೆದಿಟ್ಟಿದ್ದಾನೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ: ಪಕ್ಷಾಂತರ ಮಾಡಿದ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ತಳವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡಬಳ್ಳಾಪುರ ನಗರದ ಕಚೇರಿ ಪಾಳ್ಯದ ನಿವಾಸಿ ವಿನೋದ್ (29) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಸಾವಿಗೂ ಮುನ್ನ ಡೆತ್​ನೋಟ್ ಬರೆದಿದ್ದು, ಮೂರು ತಿಂಗಳ ಹಿಂದೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗಿದ್ದೆ. ಈ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಐವರ ಹೆಸರು ಬರೆದಿಟ್ಟಿದ್ದಾನೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೋಲಾರ: ಕೆರೆಯಲ್ಲಿ ಮಗುವಿನ ಶವ ಪತ್ತೆ, ತಂದೆಗಾಗಿ ಪೊಲೀಸರ ಹುಡುಕಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.