ನೆಲಮಂಗಲ: ಭಾರಿ ಗಾಳಿ ಮಳೆಗೆ ಮನೆ ಮೇಲೆ ತೆಂಗಿನಮರ ಬಿದ್ದು ಮೇಲ್ಛಾವಣಿ ಹಾನಿಯಾಗಿ ಸುಮಾರು 40 ಸಾವಿರ ನಷ್ಟವಾಗಿರುವ ಘಟನೆ ನೆಲಮಂಗಲ ಸಮೀಪದ ಕುದೂರು ಹೋಬಳಿಯ ಬೆಟ್ಟಹಳ್ಳಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ನಿನ್ನೆ ಭಾರಿ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಯ ಸಿಮೆಂಟ್ ಶೀಟ್ಗಳು ಜಖಂಗೊಂಡಿವೆ. ಮರಿಸ್ವಾಮಯ್ಯ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮೇಲ್ಛಾವಣಿ ಸಂಪೂರ್ಣ ನಾಶವಾಗಿದೆ.
ಸುಮಾರು 40 ಸಾವಿರದಷ್ಟು ನಷ್ಟವಾಗಿದೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲು ತೋಡಿಕೊಂಡಿದ್ದು, ಘಟನೆಗೆ ಸೂಕ್ತ ಪರಿಹಾರ ನೀಡಬೇಕೆಂಬುದು ಕುಟುಂಬಸ್ಥರ ಆಗ್ರಹವಾಗಿದೆ.