ETV Bharat / state

ಹೊಸಕೋಟೆ ಮಳೆ ಆರ್ಭಟ : ಮನೆ ಕುಸಿದು ವೃದ್ಧೆ ಸಾವು

author img

By

Published : Nov 19, 2021, 9:34 PM IST

ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್, ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಬಹುದಾಗಿತ್ತು. ಆದರೆ, ಇವರಿಗೆ 70 ವರ್ಷ ಆಗಿರುವುದರಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮನವಿ ಮಾಡಲಾಗುತ್ತದೆ ಎಂದರು..

ಮನೆ ಕುಸಿದು ವೃದ್ಧೆ ಸಾವು
ಮನೆ ಕುಸಿದು ವೃದ್ಧೆ ಸಾವು

ಹೊಸಕೋಟೆ : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮುಗಬಾಳ ಗ್ರಾಮದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಚಿವ ಎಂಟಿಬಿ ನಾಗರಾಜ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮುಗಬಾಳ ಗ್ರಾಮದ ಗ್ರಾಮದ ಲಕ್ಷ್ಮಮ್ಮ(70) ಎಂಬುವರು ಮೃತ ದುರ್ದೈವಿ. ಗಂಡ ಸತ್ತ ನಂತರ ಒಂಟಿಯಾಗಿ ಹೆಂಚಿನ ಮನೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ರಾತ್ರಿ ಮಳೆ ಹೆಚ್ಚಾಗಿ ಮನೆ ಕುಸಿದಿದೆ, ಸ್ಥಳೀಯರು ವೃದ್ಧೆಯನ್ನ ರಕ್ಷಿಸಿ ಆಸ್ವತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಲಕ್ಷ್ಮಮ್ಮ ಸಾವನ್ನಪಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್, ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಬಹುದಾಗಿತ್ತು. ಆದರೆ, ಇವರಿಗೆ 70 ವರ್ಷ ಆಗಿರುವುದರಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮನವಿ ಮಾಡಲಾಗುತ್ತದೆ ಎಂದರು. ಈ ಬಗ್ಗೆ ನಾನು ಮತ್ತು ನಮ್ಮ ಜಿಲ್ಲಾಧಿಕಾರಿಗಳು ಮುಖ್ಯ ಮಂತ್ರಿಗಳ ಗಮನಕ್ಕೆ‌ ತಂದು ಅನುದಾನ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.

ಹೊಸಕೋಟೆ : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮುಗಬಾಳ ಗ್ರಾಮದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಚಿವ ಎಂಟಿಬಿ ನಾಗರಾಜ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮುಗಬಾಳ ಗ್ರಾಮದ ಗ್ರಾಮದ ಲಕ್ಷ್ಮಮ್ಮ(70) ಎಂಬುವರು ಮೃತ ದುರ್ದೈವಿ. ಗಂಡ ಸತ್ತ ನಂತರ ಒಂಟಿಯಾಗಿ ಹೆಂಚಿನ ಮನೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ರಾತ್ರಿ ಮಳೆ ಹೆಚ್ಚಾಗಿ ಮನೆ ಕುಸಿದಿದೆ, ಸ್ಥಳೀಯರು ವೃದ್ಧೆಯನ್ನ ರಕ್ಷಿಸಿ ಆಸ್ವತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಲಕ್ಷ್ಮಮ್ಮ ಸಾವನ್ನಪಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್, ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಬಹುದಾಗಿತ್ತು. ಆದರೆ, ಇವರಿಗೆ 70 ವರ್ಷ ಆಗಿರುವುದರಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮನವಿ ಮಾಡಲಾಗುತ್ತದೆ ಎಂದರು. ಈ ಬಗ್ಗೆ ನಾನು ಮತ್ತು ನಮ್ಮ ಜಿಲ್ಲಾಧಿಕಾರಿಗಳು ಮುಖ್ಯ ಮಂತ್ರಿಗಳ ಗಮನಕ್ಕೆ‌ ತಂದು ಅನುದಾನ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.