ETV Bharat / state

ಸಿಎಂ ಬಿಎಸ್​ವೈ ಏನ್ ಹೇಳ್ತಾರೋ ಅದನ್ನೇ ಮಾಡ್ತಾರೆ: ಸಚಿವ ವಿ. ಸೋಮಣ್ಣ

author img

By

Published : Jan 29, 2020, 5:24 PM IST

ಸಿಎಂ ಬಿ.ಎಸ್. ಯಡಿಯೂರಪ್ಪ ಏನ್  ಹೇಳ್ತಾರೋ ಅದನ್ನು ಮಾಡ್ತಾರೆ. ಯಾರಿಗೂ ಅಸಮಾಧಾನವಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

Housing Minister V. Somanna Statement
ವಸತಿ ಸಚಿವ ವಿ. ಸೋಮಣ್ಣ

ದೊಡ್ಡಬಳ್ಳಾಪುರ: ಸಿಎಂ ಬಿ.ಎಸ್. ಯಡಿಯೂರಪ್ಪ ಏನ್ ಹೇಳ್ತಾರೋ ಅದನ್ನು ಮಾಡ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಯಾರಿಗೂ ಅಸಮಾಧಾನವಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ನಗರದಲ್ಲಿ ವೀರಶೈವ ಲಿಂಗಾಯತ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಕುರಿತು ಎಲ್ಲಾ ತೀರ್ಮಾನಗಳನ್ನು ಈಗಾಗಲೇ ಒಂದು ಹಂತಕ್ಕೆ ತರಲಾಗಿದೆ. ಬಿಎಸ್​ವೈ ಎಂದೂ ತಮ್ಮ ಮಾತು ಹಾಗೂ ನಡವಳಿಕೆಯನ್ನು ಬದಲಾಯಿಸಿಕೊಂಡವರಲ್ಲ ಎಂದರು.

ವಸತಿ ಸಚಿವ ವಿ. ಸೋಮಣ್ಣ

ಸಂದರ್ಭ ಸನ್ನಿವೇಶ ಬಂದಾಗ ಕೇಂದ್ರ ನಾಯಕರ ಸಂದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಅವರು ಇತಿಮಿತಿಯಲ್ಲಿ ಒಂದು ಒಳ್ಳೆಯ ತೀರ್ಮಾನ ತೆಗೆದುಕೊಳ್ಳಲಿದ್ದು, ಎಲ್ಲರಿಗೂ ಸಮಾಧಾನವಾಗುವ ತೀರ್ಮಾನವನ್ನೇ ತೆಗೆದುಕೊಳ್ಳುತ್ತಾರೆ ಎಂದರು. ಇನ್ನು ಉಪಚುನಾವಣೆಯಲ್ಲಿ ಗೆದ್ದ 11 ಜನ ಶಾಸಕರಿಗೂ ಸಚಿವ ಸ್ಥಾನ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ: ಸಿಎಂ ಬಿ.ಎಸ್. ಯಡಿಯೂರಪ್ಪ ಏನ್ ಹೇಳ್ತಾರೋ ಅದನ್ನು ಮಾಡ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಯಾರಿಗೂ ಅಸಮಾಧಾನವಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ನಗರದಲ್ಲಿ ವೀರಶೈವ ಲಿಂಗಾಯತ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಕುರಿತು ಎಲ್ಲಾ ತೀರ್ಮಾನಗಳನ್ನು ಈಗಾಗಲೇ ಒಂದು ಹಂತಕ್ಕೆ ತರಲಾಗಿದೆ. ಬಿಎಸ್​ವೈ ಎಂದೂ ತಮ್ಮ ಮಾತು ಹಾಗೂ ನಡವಳಿಕೆಯನ್ನು ಬದಲಾಯಿಸಿಕೊಂಡವರಲ್ಲ ಎಂದರು.

ವಸತಿ ಸಚಿವ ವಿ. ಸೋಮಣ್ಣ

ಸಂದರ್ಭ ಸನ್ನಿವೇಶ ಬಂದಾಗ ಕೇಂದ್ರ ನಾಯಕರ ಸಂದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಅವರು ಇತಿಮಿತಿಯಲ್ಲಿ ಒಂದು ಒಳ್ಳೆಯ ತೀರ್ಮಾನ ತೆಗೆದುಕೊಳ್ಳಲಿದ್ದು, ಎಲ್ಲರಿಗೂ ಸಮಾಧಾನವಾಗುವ ತೀರ್ಮಾನವನ್ನೇ ತೆಗೆದುಕೊಳ್ಳುತ್ತಾರೆ ಎಂದರು. ಇನ್ನು ಉಪಚುನಾವಣೆಯಲ್ಲಿ ಗೆದ್ದ 11 ಜನ ಶಾಸಕರಿಗೂ ಸಚಿವ ಸ್ಥಾನ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.