ETV Bharat / state

ಯಾವುದೇ ಖಾತೆ ಕೊಟ್ಟರು ಕೆಲಸ ಮಾಡುತ್ತೇನೆ: ಸಚಿವ ಕೆ ಹೆಚ್​ ಮುನಿಯಪ್ಪ

ನೂತನ ಸಚಿವರಾಗಿ ಆಯ್ಕೆಯಾಗಿರುವ ಕೆ ಹೆಚ್​ ಮುನಿಯಪ್ಪ ಅವರಿಂದು ದೇವನಹಳ್ಳಿಗೆ ಭೇಟಿ ನೀಡಿದರು.

author img

By

Published : May 21, 2023, 8:05 PM IST

i-will-work-on-any-given-kh-muniappa
ಯಾವುದೇ ಖಾತೆ ಕೊಟ್ಟರು ಕೆಲಸ ಮಾಡುತ್ತೇನೆ: ಸಚಿವ ಕೆ ಹೆಚ್​ ಮುನಿಯಪ್ಪ
ಯಾವುದೇ ಖಾತೆ ಕೊಟ್ಟರು ಕೆಲಸ ಮಾಡುತ್ತೇನೆ: ಸಚಿವ ಕೆ ಹೆಚ್​ ಮುನಿಯಪ್ಪ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಕೆ ಹೆಚ್​ ಮುನಿಯಪ್ಪ ಅವರು ಇಂದು ದೇವನಹಳ್ಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚುನಾವಣೆ ನಂತರ ಮೊದಲ ಬಾರಿಗೆ ಭೇಟಿ ನೀಡಿದ ಮುನಿಯಪ್ಪ ಅವರನ್ನು ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್​​ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಕೆ ಹೆಚ್​ ಮುನಿಯಪ್ಪ ಅವರು ತಾಲೂಕು ಕಚೇರಿ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವನಹಳ್ಳಿ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅವರಿಗೆ ಕೃತಜ್ಞತೆಯನ್ನು ತಿಳಿಸುತ್ತೇನೆ. ಕಾಂಗ್ರೆಸ್​​ ಪಕ್ಷ ಮೊದಲನೇ ಹಂತದಲ್ಲೇ ರಾಜ್ಯದಲ್ಲಿ ನನ್ನನ್ನು ಮಂತ್ರಿಯಾಗಿ ತೆಗೆದುಕೊಂಡಿದೆ. ಸಚಿವರಾಗಿ ಮಾಡಿದಕ್ಕೆ ಹೈಕಮಾಂಡ್​​ ಮತ್ತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್​ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಇನ್ನೂ, ಮುಖಂಡರುಗಳ ಜೊತೆ ಮಾತನಾಡಿ, ದೇವನಹಳ್ಳಿಯ ಅಭಿವೃದ್ಧಿಯ ಕೆಲಸಗಳ ಬಗ್ಗೆ ಹೆಚ್ಚು ಒತ್ತು ನೀಡುತ್ತೇವೆ. ಕಾಂಗ್ರೆಸ್​​ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ಐದು ಗ್ಯಾರಂಟಿಗಳಿಗೆ ಬಗ್ಗೆ ಮೊದಲ ಕ್ಯಾಬಿನೆಟ್​ನಲ್ಲೇ ತಾತ್ವಿಕ ಒಪ್ಪಿಗೆ ನೀಡಿದ್ದೇವೆ ಎಂದು ಹೇಳಿದರು. ಸಚಿವ ಸಂಪುಟದಲ್ಲಿ ಯಾವ ಸ್ಥಾನದ ನಿರೀಕ್ಷೆ ಇದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವ ನಿರೀಕ್ಷೆಯೂ ಇಲ್ಲ. ಯಾವ ಸ್ಥಾನ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು. ಸಚಿವ ಸಂಪುಟದಲ್ಲಿ ಕೆ ಹೆಚ್​​ ಮುನಿಯಪ್ಪ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮೊದಲನೇ ಬಾರಿಗೆ ದೇವನಹಳ್ಳಿಗೆ ಸಚಿವ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿರುವುದೇಕೆ? ಮಳೆ ಬಂದರೆ ಜನರು ಸಾಯಲೇಬೇಕೆ? : ಹೆಚ್​ಡಿಕೆ ಕಿಡಿ

ನೂತನ ಶಾಸಕರ ಪ್ರಮಾಣವಚನ: ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರ ಸಮ್ಮುಖದಲ್ಲಿ ಎಲ್ಲ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೂತನ ಸದಸ್ಯರಿಗೆ ಸಂವಿಧಾನ, ವಿಧಾನಸಭೆಯ ನಿಯಮಾವಳಿಗಳ ಪುಸ್ತಕ ಇರುವ ಬ್ಯಾಗ್​ಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ: ಹಾವೇರಿಯ ಕಾಂಗ್ರೆಸ್​ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ

ನಾಳೆಯಿಂದ ಮೂರು ದಿನಗಳ ವಿಧಾನಸಭೆ ಅಧಿವೇಶನ ಕರೆಯುವ ಕುರಿತು ಅಧಿಕೃತ ಆದೇಶ ಈಗಾಗಲೇ ಹೊರಡಿಸಲಾಗಿದೆ. ಮೇ 24 ರಂದು ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ. ಎರಡು ದಿನ ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಕಲಾಪ ನಡೆಯಲಿದೆ. ಶಾಸಕರ ಪ್ರಮಾಣವಚನ ಕಲಾಪದ ಬಗ್ಗೆ 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲ ಸದಸ್ಯರಿಗೂ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯ.. ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಆರಗ ಜ್ಞಾನೇಂದ್ರ

ಯಾವುದೇ ಖಾತೆ ಕೊಟ್ಟರು ಕೆಲಸ ಮಾಡುತ್ತೇನೆ: ಸಚಿವ ಕೆ ಹೆಚ್​ ಮುನಿಯಪ್ಪ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಕೆ ಹೆಚ್​ ಮುನಿಯಪ್ಪ ಅವರು ಇಂದು ದೇವನಹಳ್ಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚುನಾವಣೆ ನಂತರ ಮೊದಲ ಬಾರಿಗೆ ಭೇಟಿ ನೀಡಿದ ಮುನಿಯಪ್ಪ ಅವರನ್ನು ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್​​ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಕೆ ಹೆಚ್​ ಮುನಿಯಪ್ಪ ಅವರು ತಾಲೂಕು ಕಚೇರಿ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವನಹಳ್ಳಿ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅವರಿಗೆ ಕೃತಜ್ಞತೆಯನ್ನು ತಿಳಿಸುತ್ತೇನೆ. ಕಾಂಗ್ರೆಸ್​​ ಪಕ್ಷ ಮೊದಲನೇ ಹಂತದಲ್ಲೇ ರಾಜ್ಯದಲ್ಲಿ ನನ್ನನ್ನು ಮಂತ್ರಿಯಾಗಿ ತೆಗೆದುಕೊಂಡಿದೆ. ಸಚಿವರಾಗಿ ಮಾಡಿದಕ್ಕೆ ಹೈಕಮಾಂಡ್​​ ಮತ್ತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್​ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಇನ್ನೂ, ಮುಖಂಡರುಗಳ ಜೊತೆ ಮಾತನಾಡಿ, ದೇವನಹಳ್ಳಿಯ ಅಭಿವೃದ್ಧಿಯ ಕೆಲಸಗಳ ಬಗ್ಗೆ ಹೆಚ್ಚು ಒತ್ತು ನೀಡುತ್ತೇವೆ. ಕಾಂಗ್ರೆಸ್​​ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ಐದು ಗ್ಯಾರಂಟಿಗಳಿಗೆ ಬಗ್ಗೆ ಮೊದಲ ಕ್ಯಾಬಿನೆಟ್​ನಲ್ಲೇ ತಾತ್ವಿಕ ಒಪ್ಪಿಗೆ ನೀಡಿದ್ದೇವೆ ಎಂದು ಹೇಳಿದರು. ಸಚಿವ ಸಂಪುಟದಲ್ಲಿ ಯಾವ ಸ್ಥಾನದ ನಿರೀಕ್ಷೆ ಇದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವ ನಿರೀಕ್ಷೆಯೂ ಇಲ್ಲ. ಯಾವ ಸ್ಥಾನ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು. ಸಚಿವ ಸಂಪುಟದಲ್ಲಿ ಕೆ ಹೆಚ್​​ ಮುನಿಯಪ್ಪ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮೊದಲನೇ ಬಾರಿಗೆ ದೇವನಹಳ್ಳಿಗೆ ಸಚಿವ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿರುವುದೇಕೆ? ಮಳೆ ಬಂದರೆ ಜನರು ಸಾಯಲೇಬೇಕೆ? : ಹೆಚ್​ಡಿಕೆ ಕಿಡಿ

ನೂತನ ಶಾಸಕರ ಪ್ರಮಾಣವಚನ: ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರ ಸಮ್ಮುಖದಲ್ಲಿ ಎಲ್ಲ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೂತನ ಸದಸ್ಯರಿಗೆ ಸಂವಿಧಾನ, ವಿಧಾನಸಭೆಯ ನಿಯಮಾವಳಿಗಳ ಪುಸ್ತಕ ಇರುವ ಬ್ಯಾಗ್​ಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ: ಹಾವೇರಿಯ ಕಾಂಗ್ರೆಸ್​ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ

ನಾಳೆಯಿಂದ ಮೂರು ದಿನಗಳ ವಿಧಾನಸಭೆ ಅಧಿವೇಶನ ಕರೆಯುವ ಕುರಿತು ಅಧಿಕೃತ ಆದೇಶ ಈಗಾಗಲೇ ಹೊರಡಿಸಲಾಗಿದೆ. ಮೇ 24 ರಂದು ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ. ಎರಡು ದಿನ ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಕಲಾಪ ನಡೆಯಲಿದೆ. ಶಾಸಕರ ಪ್ರಮಾಣವಚನ ಕಲಾಪದ ಬಗ್ಗೆ 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲ ಸದಸ್ಯರಿಗೂ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯ.. ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.