ETV Bharat / state

ಮಾಧ್ಯಮಗಳು ಸಮಾಜದ ಸಮಸ್ಯೆಗಳನ್ನಪರಿಹರಿಸಲು ಸಾಧ್ಯ.. ಶಾಸಕ ನಿಸರ್ಗ ನಾರಾಯಣಸ್ವಾಮಿ

ಮಾಧ್ಯಮಗಳಿಂದ ಸಮಾಜದ ಸಮಸ್ಯೆಗಳನ್ನ ಬಗೆಹರಿಸಲು ಸಾಧ್ಯ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಂದು ಅಭಿಪ್ರಾಯಪಟ್ಟರು. ಬೆಂ‌ಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಿಸಲು ಜಾಗ ನೀಡುವುದಾಗಿ ಭರವಸೆ ನೀಡಿದರು.

author img

By

Published : Aug 5, 2019, 7:49 PM IST

journalists-day-program-in-bangalore-rural

ಬೆಂಗಳೂರು: ಇಂದು ಮಾಧ್ಯಮಗಳು ಸಮಾಜದ ಅಭಿವೃದ್ದಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರಿಂದಲೇ ಕ್ಷೇತ್ರದ ಸಮಸ್ಯೆಗಳನ್ನು ತಿಳಿದು ಬಗೆಹರಿಸುತ್ತಿದ್ದೇನೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ದೇವನಹಳ್ಳಿಯ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ನೀಡಿ ಗಮನ ಸೆಳೆಯುವ ಪತ್ರಕರ್ತರೂ ಕೂಡ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಪತ್ರಕರ್ತರು ಸಮಾಜದ ಸಮಸ್ಯೆಗಳ ಬಗ್ಗೆ ವಸ್ತುನಿಷ್ಟವಾದ ವರದಿ ನೀಡಿದರೆ ಜನಪ್ರತಿನಿಧಿಗಳು, ಸರ್ಕಾರ ಕೂಡ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಸಹಕಾರಿಯಾಗುತ್ತದೆ ಎಂದ ಅವರು, ತಮ್ಮ ಕ್ಷೇತ್ರದಲ್ಲಿ ಪತ್ರಿಕಾ ವರದಿಗಳಿಂದ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮ..

ಪತ್ರಕರ್ತರು ಜನರ ಮಧ್ಯೆ ಇರುವುದರಿಂದ ಅವರಿಗೆ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಅರಿವು ಇರುತ್ತದೆ. ಇಂತಹ ಸಮಸ್ಯೆಗಳ ಕುರಿತು ಪತ್ರಕರ್ತರು ಪ್ರತಿಕೆಗಳ ಮೂಲಕ ಗಟ್ಟಿ ಧ್ವನಿಯಾಗಬೇಕಿದೆ. ಈ ಜಿಲ್ಲೆಯ ಪತ್ರಕರ್ತರು ಉತ್ತಮ ಕೆಲಸ‌ ಮಾಡುತ್ತಿದ್ದು, ಅವರ ಸಮಸ್ಯೆಗಳನ್ನು ನಮಗೆ ತಿಳಿಸಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ನಿಸರ್ಗ ನಾರಾಯಣಸ್ವಾಮಿ ಭರವಸೆ ನೀಡಿದರು.

ಬೆಂ. ಗ್ರಾಮಾಂತರ ಜಿಲ್ಲಾ ಪತ್ರಕರ್ತರಿಗೆ ಪತ್ರಿಕಾ ಭವನ!

ಇದೇ ವೇಳೆ ಬೆಂ‌. ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ಮಾತನಾಡಿ, ಜಿಲ್ಲೆಯಲ್ಲಿ ಪತ್ರಿಕಾ ಮಾಧ್ಯಮದವರು ಎರಡು ಬೇಡಿಕೆ ಇಟ್ಟಿದ್ದಾರೆ. ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಾಗ ಮತ್ತು ಖ್ಯಾತ ಖಾಯಕ ಸಿ.‌ಅಶ್ವಥ್ ಹುಟ್ಟಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ‌ ಅವರ ಸ್ಮಾರಕ ನಿರ್ಮಾಣ ಮಾಡುವುದು. ಈ ಎರಡೂ ಬೇಡಿಕೆಗಳು ನಮ್ಮ ಗಮನಕ್ಕೆ ಬಂದಿದ್ದು, ಈಡೇರಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಯಾವ ಸುದ್ದಿ ಸತ್ಯ. ಯಾವುದು ಸುಳ್ಳು ಎಲ್ಲವನ್ನೂ ತಿಳಿದು ನಿಜವಾದ ಸುದ್ದಿ ನೀಡಬೇಕಿದೆ. ದಯವಿಟ್ಟು ಯಾರೂ ಬ್ಲಾಕ್‌ಮೇಲ್‌ ಮಾಡುವಂತ ಕೆಲಸ ಮಾಡಬೇಡಿ. ಮಾಧ್ಯಮ ನೈತಿಕತೆಗೆ ಬೆಲೆ‌ಕೊಡಬೇಕು. ಸುಪ್ರೀಂಕೋರ್ಟ್‌ನಲ್ಲಿ ಅನ್ಯಾಯವಾಗಿದೆ ಎಂದು ನ್ಯಾಯಮೂರ್ತಿಗಳು ನ್ಯಾಯ ಕೇಳಿಕೊಂಡು ಮಾಧ್ಯಮಗಳ‌ ಮುಂದೆ ಬಂದಿದ್ರು. ಮಾಧ್ಯಮಕ್ಕೆ ಎಷ್ಟು ದೊಡ್ಡ ಶಕ್ತಿ ಇದೆ ಎಂದು ಇದರಿಂದಲೇ ತಿಳಿಯುತ್ತದೆ ಎಂದರು.

ಬೆಂಗಳೂರು: ಇಂದು ಮಾಧ್ಯಮಗಳು ಸಮಾಜದ ಅಭಿವೃದ್ದಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರಿಂದಲೇ ಕ್ಷೇತ್ರದ ಸಮಸ್ಯೆಗಳನ್ನು ತಿಳಿದು ಬಗೆಹರಿಸುತ್ತಿದ್ದೇನೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ದೇವನಹಳ್ಳಿಯ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ನೀಡಿ ಗಮನ ಸೆಳೆಯುವ ಪತ್ರಕರ್ತರೂ ಕೂಡ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಪತ್ರಕರ್ತರು ಸಮಾಜದ ಸಮಸ್ಯೆಗಳ ಬಗ್ಗೆ ವಸ್ತುನಿಷ್ಟವಾದ ವರದಿ ನೀಡಿದರೆ ಜನಪ್ರತಿನಿಧಿಗಳು, ಸರ್ಕಾರ ಕೂಡ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಸಹಕಾರಿಯಾಗುತ್ತದೆ ಎಂದ ಅವರು, ತಮ್ಮ ಕ್ಷೇತ್ರದಲ್ಲಿ ಪತ್ರಿಕಾ ವರದಿಗಳಿಂದ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮ..

ಪತ್ರಕರ್ತರು ಜನರ ಮಧ್ಯೆ ಇರುವುದರಿಂದ ಅವರಿಗೆ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಅರಿವು ಇರುತ್ತದೆ. ಇಂತಹ ಸಮಸ್ಯೆಗಳ ಕುರಿತು ಪತ್ರಕರ್ತರು ಪ್ರತಿಕೆಗಳ ಮೂಲಕ ಗಟ್ಟಿ ಧ್ವನಿಯಾಗಬೇಕಿದೆ. ಈ ಜಿಲ್ಲೆಯ ಪತ್ರಕರ್ತರು ಉತ್ತಮ ಕೆಲಸ‌ ಮಾಡುತ್ತಿದ್ದು, ಅವರ ಸಮಸ್ಯೆಗಳನ್ನು ನಮಗೆ ತಿಳಿಸಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ನಿಸರ್ಗ ನಾರಾಯಣಸ್ವಾಮಿ ಭರವಸೆ ನೀಡಿದರು.

ಬೆಂ. ಗ್ರಾಮಾಂತರ ಜಿಲ್ಲಾ ಪತ್ರಕರ್ತರಿಗೆ ಪತ್ರಿಕಾ ಭವನ!

ಇದೇ ವೇಳೆ ಬೆಂ‌. ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ಮಾತನಾಡಿ, ಜಿಲ್ಲೆಯಲ್ಲಿ ಪತ್ರಿಕಾ ಮಾಧ್ಯಮದವರು ಎರಡು ಬೇಡಿಕೆ ಇಟ್ಟಿದ್ದಾರೆ. ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಾಗ ಮತ್ತು ಖ್ಯಾತ ಖಾಯಕ ಸಿ.‌ಅಶ್ವಥ್ ಹುಟ್ಟಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ‌ ಅವರ ಸ್ಮಾರಕ ನಿರ್ಮಾಣ ಮಾಡುವುದು. ಈ ಎರಡೂ ಬೇಡಿಕೆಗಳು ನಮ್ಮ ಗಮನಕ್ಕೆ ಬಂದಿದ್ದು, ಈಡೇರಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಯಾವ ಸುದ್ದಿ ಸತ್ಯ. ಯಾವುದು ಸುಳ್ಳು ಎಲ್ಲವನ್ನೂ ತಿಳಿದು ನಿಜವಾದ ಸುದ್ದಿ ನೀಡಬೇಕಿದೆ. ದಯವಿಟ್ಟು ಯಾರೂ ಬ್ಲಾಕ್‌ಮೇಲ್‌ ಮಾಡುವಂತ ಕೆಲಸ ಮಾಡಬೇಡಿ. ಮಾಧ್ಯಮ ನೈತಿಕತೆಗೆ ಬೆಲೆ‌ಕೊಡಬೇಕು. ಸುಪ್ರೀಂಕೋರ್ಟ್‌ನಲ್ಲಿ ಅನ್ಯಾಯವಾಗಿದೆ ಎಂದು ನ್ಯಾಯಮೂರ್ತಿಗಳು ನ್ಯಾಯ ಕೇಳಿಕೊಂಡು ಮಾಧ್ಯಮಗಳ‌ ಮುಂದೆ ಬಂದಿದ್ರು. ಮಾಧ್ಯಮಕ್ಕೆ ಎಷ್ಟು ದೊಡ್ಡ ಶಕ್ತಿ ಇದೆ ಎಂದು ಇದರಿಂದಲೇ ತಿಳಿಯುತ್ತದೆ ಎಂದರು.

Intro:KN_BNG_01_05_ journalist day_Ambarish_7203301
Slug: ಮಾಧ್ಯಮಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ: ನಿಸರ್ಗ ನಾರಾಯಣಸ್ವಾಮಿ

ಬೆಂಗಳೂರು: ಇಂದು ಮಾಧ್ಯಮಗಳು ಸಮಾಜದ ಅಭಿವೃದ್ದಿಗೆ ತಮ್ಮ ನ್ನು ತಾವು ತೊಡಗಿಸಿಕೊಂಡಿದ್ದು, ಅವರಿಂದಲೇ ಕ್ಷೇತ್ರದ ಸಮಸ್ಯೆಗಳನ್ನು ತಿಳಿದು ಬಗೆಹರಿಸುತ್ತಿದ್ದೇನೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದ್ರು..

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಕರ್ತರ ಸಂಘದ ಮೂಲಕ ದೇವನಹಳ್ಳಿಯಲ್ಲಿರುವ ಬೆಂ. ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ನೀಡಿ ಗಮನ ಸೆಳೆಯುವ ಪತ್ರಕರ್ತರೂ ಕೂಡ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಪತ್ರಕರ್ತರು ಸಮಾಜದ ಸಮಸ್ಯೆಗಳ ಬಗ್ಗೆ ವಸ್ತುನಿಷ್ಟವಾದ ವರದಿ ನೀಡಿದರೆ ಜನಪ್ರತಿನಿಧಿಗಳು, ಸರಕಾರ ಕೂಡ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಸಹಕಾರಿಯಾಗುತ್ತದೆ ಎಂದ ಅವರು ಕ್ಷೇತ್ರದಲ್ಲಿ ಪತ್ರಿಕಾ ವರದಿಗಳಿಂದ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು..

ಪತ್ರಕರ್ತರು ಜನರ ಮಧ್ಯೆ ಇರುವುದರಿಂದ ಅವರಿಗೆ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಅರಿವು ಇರುತ್ತದೆ. ಇಂತಹ ಸಮಸ್ಯೆಗಳ ಕುರಿತು ಪತ್ರಕರ್ತರು ಪ್ರತಿಕೆಗಳ ಮೂಲಕ ಗಟ್ಟಿ ಧ್ವನಿಯಾಗಬೇಕಿದೆ. ಈ ಜಿಲ್ಲೆಯ ಪತ್ರಕರ್ತರು ಉತ್ತಮ ಕೆಲಸ‌ ಮಾಡುತ್ತಿದ್ದು, ಅವರ ಸಮಸ್ಯೆಗಳನ್ನು ನಮಗೆ ತಿಳಿಸಿದ್ದಾರೆ..‌ಅದನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ನಿಸರ್ಗ ನಾರಾಯಣಸ್ವಾಮಿ ಹೇಳಿದ್ರು..

ಬೆಂ. ಗ್ರಾಮಾಂತರ ಜಿಲ್ಲಾ ಪತ್ರಕರ್ತರಿಗೆ ಪತ್ರಿಕಾ ಭವನ..!
ಸಿ.ಅಶ್ವಥ್ ಸ್ಮಾರಕ ನಿರ್ಮಾಣಕ್ಕೆ ಡಿಸಿಯಿಂದ ಭರವಸೆ

ಇನ್ನು ಇದೇ ವೇಳೆ ಬೆಂ‌. ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರೀಗೌಡರು ಮಾತನಾಡಿ, ಜಿಲ್ಲೆಯಲ್ಲಿ ಪತ್ರಿಕಾ ಮಾಧ್ಯಮದವರು ಎರಡು ಬೇಡಿಕೆಯನ್ನು ಇಟ್ಟಿದ್ದಾರೆ.. ಮೊದಲನೇಯದಾಗಿ ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಿಸಲು ಜಾಗ ನೀಡುವುದು.. ಎರಡನೇಯದು ಹಾಡಿನ ಮೂಲಕ ಖ್ಯಾತಿ ಪಡೆದ ಸಿ.‌ಅಶ್ವಥ್ ಹುಟ್ಟಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ‌ ಅವರ ಸ್ಮಾರಕ ನಿರ್ಮಾಣ ಮಾಡುವುದು. ಈ ಎರಡು ಬೇಡಿಕೆಗಳು ನಮ್ಮ ಗಮನಕ್ಕೆ ಬಂದಿದ್ದು, ಈಡೇರಿಸುವುದಾಗಿ ಭರವಸೆ ನೀಡಿದ್ರು.. ಇದರ ಜೊತೆಯಲ್ಲಿ ತಾವು ಕೆರೆ ಹೂಳೆತ್ತುವ ಕಾರ್ಯಕ್ಕೆ ಜನರೇ ಹಣ ಸಂಗ್ರಹ ಮಾಡಿದ್ದು, ಜನರು‌ ಸರ್ಕಾರದ ಕೆಲಸಕ್ಕೆ ಬೆಂಬಲ ನೀಡಿದ್ರೆ, ಎಲ್ಲಾ ಸುಲಭವಾಗಿ ಕೆಲಸ ಕಾರ್ಯಗಳು ಕಂಪ್ಲೀಟ್ ಆಗ್ತವೆ ಎಂದರು..

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಯಾವ ಸುದ್ದಿ ಸತ್ಯ. ಯಾವುದು ಸುಳ್ಳು ಎಲ್ಲವನ್ನೂ ತಿಳಿದು ನಿಜವಾದ ಸುದ್ದಿಯನ್ನು ನೀಡಬೇಕಿದೆ..‌ದಯವಿಟ್ಟು ಯಾರೂ ಬ್ಲಾಕ್‌ಮೇಲ್‌ ಮಾಡುವಂತ ಕೆಲಸ ಮಾಡಬೇಡಿ.. ಮಾಧ್ಯಮ ನೈತಿಕತೆಗೆ ಬೆಲೆ‌ಕೊಡಬೇಕು..‌ಸುಪ್ರೀಂ ಕೋರ್ಟ್ ನಲ್ಲಿ ಅನ್ಯಾಯವಾಗಿದೆ ಎಂದು ನ್ಯಾಯಮೂರ್ತಿಗಳು ನ್ಯಾಯ ಕೇಳಿಕೊಂಡು ಮಾಧ್ಯಮಗಳ‌ ಮುಂದೆ ಬಂದಿದ್ರು.. ಇದರಿಂದಲೇ ತಿಳಿಯುತ್ತದೆ ಮಾಧ್ಯಮಕ್ಕೆ ಎಷ್ಟು ದೊಡ್ಡ ಶಕ್ತಿ ಇದೆ ಎಂದು.. ಆ ನಿಟ್ಟಿನಲ್ಲಿ ನಾವೆಲ್ಲ ಕೆಲಸ ಮಾಡಬೇಕು.. ಅವರೊಬ್ಬ ಒಳ್ಳೆಯ ಪತ್ರಕರ್ತ ಅಂತ ಜನರು ಹೇಳಬೇಕು ಅದೇ ನಮಗೆ ದೊಡ್ಡ ಗೌರವ ಎಂದರು.. Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.