ETV Bharat / state

ವೇಣುಗೋಪಾಲಸ್ವಾಮಿ ಆಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ - venu-gopalaswami-temple

ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷವೂ ಕೃಷ್ಣ ಜನ್ಮಾಷ್ಟಮಿಯ ಬದಲಾಗಿ ರೋಹಿಣಿ ನಕ್ಷತ್ರದ ದಿನದಂದು ಜನ್ಮಾಷ್ಟಮಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಭಾರಿಯೂ ಅದ್ದೂರಿಯಾಗಿ ಯಾದವ ಸಮಾಜದವರು ಹಬ್ಬವನ್ನು ಆಚರಿಸಿದ್ದಾರೆ.

ದೇವನಹಳ್ಳಿಯಲ್ಲಿ ರೋಹಿಣಿ ನಕ್ಷತ್ರದ ದಿನದಂದು ಕೃಷ್ಣ ಜನ್ಮಾಷ್ಟಮಿಯ ಸಡಗರ
author img

By

Published : Aug 26, 2019, 2:06 PM IST

ಬೆಂಗಳೂರು: ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನ ಸಂಭ್ರಮದಿಂದ ನೆರವೇರಿತು. ಕೃಷ್ಣನ ಜನ್ಮ ದಿನದ ನಿಮಿತ್ತ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತಾದಿಗಳು ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ದೇವಸ್ಥಾನದ ಮುಂದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಬಳಿಕ ದೇವರ ಪುಷ್ಪ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗೊಂಬೆ ಬಳಗ, ಕೀಲು ಕುದುರೆ, ನಾದ ಸ್ವರ, ಡೊಳ್ಳು ಕುಣಿತ, ತಮಟೆ ವಾದನ ಹಾಗೂ ಜನಪದ ಕಲಾವಿದರು ಮೆರವಣಿಗೆಗೆ ಮೆರುಗು ನೀಡಿದರು.

ದೇವನಹಳ್ಳಿಯಲ್ಲಿ ರೋಹಿಣಿ ನಕ್ಷತ್ರದ ದಿನದಂದು ಕೃಷ್ಣ ಜನ್ಮಾಷ್ಟಮಿಯ ಸಡಗರ

ಎಲ್ಲ ಕಡೆ ಕೃಷ್ಣನ ಜನ್ಮ ದಿನದಂದು ಜನ್ಮಾಷ್ಟಮಿ ಆಚರಿಸಿದ್ರೆ, ದೇವನಹಳ್ಳಿಯಲ್ಲಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ರೋಹಿಣಿ ನಕ್ಷತ್ರದ ದಿನ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತದೆ. ಎಲ್ಲ ಯಾದವ ಸಮೂದಾಯದವರು ಸೇರಿ ಈ ಅದ್ದೂರಿಯಾಗಿ ಜನ್ಮಷ್ಟಾಮಿಯನ್ನು ಆಚರಿಸಿದರು. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.

ಪುರಸಭೆ ಸದಸ್ಯರಾದ ಬಾಂಬೆ ನಾರಾಯಣಸ್ವಾಮಿ ಮತ್ತು ಯಾದವ ಸಂಘದ ಅಧ್ಯಕ್ಷ ಆರ್. ಆರ್. ರಘು, ಉಪಾಧ್ಯಕ್ಷ ಮುನಿರಾಜು ಮತ್ತು ಪದಾಧಿಕಾರಿಗಳು ಹಾಗೂ ಕುಲಬಾಂಧವರು ಸೇರಿ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿ ಹಬ್ಬ ಆಚರಿಸಿದರು.

ಬೆಂಗಳೂರು: ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನ ಸಂಭ್ರಮದಿಂದ ನೆರವೇರಿತು. ಕೃಷ್ಣನ ಜನ್ಮ ದಿನದ ನಿಮಿತ್ತ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತಾದಿಗಳು ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ದೇವಸ್ಥಾನದ ಮುಂದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಬಳಿಕ ದೇವರ ಪುಷ್ಪ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗೊಂಬೆ ಬಳಗ, ಕೀಲು ಕುದುರೆ, ನಾದ ಸ್ವರ, ಡೊಳ್ಳು ಕುಣಿತ, ತಮಟೆ ವಾದನ ಹಾಗೂ ಜನಪದ ಕಲಾವಿದರು ಮೆರವಣಿಗೆಗೆ ಮೆರುಗು ನೀಡಿದರು.

ದೇವನಹಳ್ಳಿಯಲ್ಲಿ ರೋಹಿಣಿ ನಕ್ಷತ್ರದ ದಿನದಂದು ಕೃಷ್ಣ ಜನ್ಮಾಷ್ಟಮಿಯ ಸಡಗರ

ಎಲ್ಲ ಕಡೆ ಕೃಷ್ಣನ ಜನ್ಮ ದಿನದಂದು ಜನ್ಮಾಷ್ಟಮಿ ಆಚರಿಸಿದ್ರೆ, ದೇವನಹಳ್ಳಿಯಲ್ಲಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ರೋಹಿಣಿ ನಕ್ಷತ್ರದ ದಿನ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತದೆ. ಎಲ್ಲ ಯಾದವ ಸಮೂದಾಯದವರು ಸೇರಿ ಈ ಅದ್ದೂರಿಯಾಗಿ ಜನ್ಮಷ್ಟಾಮಿಯನ್ನು ಆಚರಿಸಿದರು. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.

ಪುರಸಭೆ ಸದಸ್ಯರಾದ ಬಾಂಬೆ ನಾರಾಯಣಸ್ವಾಮಿ ಮತ್ತು ಯಾದವ ಸಂಘದ ಅಧ್ಯಕ್ಷ ಆರ್. ಆರ್. ರಘು, ಉಪಾಧ್ಯಕ್ಷ ಮುನಿರಾಜು ಮತ್ತು ಪದಾಧಿಕಾರಿಗಳು ಹಾಗೂ ಕುಲಬಾಂಧವರು ಸೇರಿ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿ ಹಬ್ಬ ಆಚರಿಸಿದರು.

Intro:KN_BNG_01_26_Krishna janmstami_Ambarish_7203301
Slug: ವೇಣು ಗೋಪಾಲಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಕೃಷ್ಣಜನ್ಮಷ್ಟಮಿ

ಅದ್ದೂರಿಯಾಗಿ ನಡೆದ ಕೃಷ್ಣನ ಹುಟ್ಟಿದ ಹಬ್ಬ

ಬೆಂಗಳೂರು: ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬ ವಿಜೃಂಭಣೆಯಿಂದ ನೆರವೇರಿತು.. ಕೃಷ್ಣನ ಜನ್ಮ ದಿನದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.. ಸಾವಿರಾರು ಭಕ್ತಾದಿಗಳು ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಗವಹಿಸಿದ್ರು..

ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ದೇವಸ್ಥಾನದ ಮುಂದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬಳಿಕ ದೇವರ ಪುಷ್ಪ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗೊಂಬೆ ಬಳಗ, ಕೀಲು ಕುದುರೆ, ನಾದ ಸ್ವರ, ಡೊಳ್ಳು ಕುಣಿತ, ತಮಟೆ ವಾದನ ಹಾಗೂ ಜನಪದ ಕಲಾವಿದರು ಮೆರವಣಿಗೆಗೆ ಮೆರುಗು ನೀಡಿದರು.

ಎಲ್ಲಾ ಕಡೆ ಕೃಷ್ಣನ ಜನ್ಮ ದಿನದಂದು ಜನ್ಮಾಷ್ಟಮಿ ಆಚರಿಸಿದ್ರೆ, ದೇವನಹಳ್ಳಿಯಲ್ಲಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ರೋಹಿಣಿ ನಕ್ಷತ್ರದ ದಿನ ಕೃಷ್ಣಾ ಜನ್ಮಾಷ್ಟಮಿ ಆಚರಿಸಲಾಗುತ್ತದೆ.. ಎಲ್ಲಾ ಯಾದವ ಸಮೂದಾಯದವರು ಸೇರಿ ಈ ಅದ್ದೂರಿಯಾಗಿ ಜನ್ಮಷ್ಟಾಮಿಯನ್ನು ಆಚರಿಸಿದ್ರು.. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ರು..

ಪುರಸಭೆ ಸದಸ್ಯರಾದ ಬಾಂಬೆ ನಾರಾಯಣಸ್ವಾಮಿ ಮತ್ತು ಯಾದವ ಸಂಘದ ಅಧ್ಯಕ್ಷ ಆರ್. ಆರ್.ಆರ್ ರಘು, ಉಪಾಧ್ಯಕ್ಷ ಮುನಿರಾಜು ಮತ್ತು ಪದಾಧಿಕಾರಿಗಳು ಹಾಗೂ ಕುಲಬಾಂಧವರು ಬಹಳ ವಿಜೃಂಭಣೆಯಿಂದ ಕೃಷ್ಣಜನ್ಮಂಷ್ಟಮಿ ಹಬ್ಬವನ್ನು ಆಚರಿಸಿದ್ರು..







Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.