ETV Bharat / state

ಕೇಸ್​ ಕೈಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌

author img

By

Published : Nov 24, 2022, 9:35 AM IST

Updated : Nov 24, 2022, 12:15 PM IST

ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪೊಲೀಸ್ ಕಾನ್ಸ್​ಟೇಬಲ್ ಚಂದ್ರಶೇಖರ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.

lokayukta attack on constable
ಪೊಲೀಸ್ ಠಾಣೆ ಮೇಲೆ‌ ಲೋಕಾಯುಕ್ತ ದಾಳಿ

ದೇವನಹಳ್ಳಿ: ಪ್ರಕರಣ​ ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ‌ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಠಾಣೆಯಲ್ಲಿ ದಾಖಲಾಗಿದ್ದ ದೂರಿನ ವಿಚಾರಕ್ಕೆ ಸಂಬಂಧಿಸಿದಂತೆ ಮಂಡಿಬೆಲೆ ಗ್ರಾಮ ಪಂಚಾಯತ್​ ವ್ಯಾಪ್ತಿಯ ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ್ ಎಂಬುವರಿಂದ ನಿನ್ನೆ ಸಂಜೆ 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಚಂದ್ರಶೇಖರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌

ಇದನ್ನೂ ಓದಿ: ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ತನಿಖೆ ವಿಳಂಬ ಕೈ ಕಾರ್ಯಕರ್ತರ ಆಕ್ರೋಶ..

ಮಂಜುನಾಥ್ ಮತ್ತು ಅವರ ಸಹೋದರಿಯ ನಡುವೆ ಹಣಕಾಸಿನ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಜುನಾಥ್ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದು ಸೆಲ್​ನಲ್ಲಿ ಇರಿಸಲಾಗಿದೆ. ಠಾಣೆಯಿಂದ ಬಿಡುಗಡೆ ಮಾಡಿ ಹೊರಕಳುಹಿಸಲು ಕಾನ್ಸ್​ಟೇಬಲ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪಟ್ಟಣದ ಶಿವಗಣೇಶ ಸರ್ಕಲ್​ನಲ್ಲಿರುವ ಹಾಪ್ ಕಾಮ್ಸ್ ಬಳಿ, ಮಂಜುನಾಥ್​ಅವರಿಂದ ಹಣ ಪಡೆದುಕೊಳ್ಳುವಾಗ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ತನಿಖೆ ವಿಳಂಬ ಕೈ ಕಾರ್ಯಕರ್ತರ ಆಕ್ರೋಶ..

ಕಾನ್ಸ್​ಟೇಬಲ್ ಚಂದ್ರಶೇಖರ್ ಮಾತ್ರವಲ್ಲದೇ ಸಬ್ ಇನ್ಸ್​ಪೆಕ್ಟರ್ ಈರಮ್ಮ ಮೇಲೆ ಕೂಡ ದೂರು ದಾಖಲಾಗಿದೆ. ಆದ್ರೆ, ಈರಮ್ಮ ಅವರು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ದೇವನಹಳ್ಳಿ: ಪ್ರಕರಣ​ ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ‌ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಠಾಣೆಯಲ್ಲಿ ದಾಖಲಾಗಿದ್ದ ದೂರಿನ ವಿಚಾರಕ್ಕೆ ಸಂಬಂಧಿಸಿದಂತೆ ಮಂಡಿಬೆಲೆ ಗ್ರಾಮ ಪಂಚಾಯತ್​ ವ್ಯಾಪ್ತಿಯ ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ್ ಎಂಬುವರಿಂದ ನಿನ್ನೆ ಸಂಜೆ 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಚಂದ್ರಶೇಖರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌

ಇದನ್ನೂ ಓದಿ: ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ತನಿಖೆ ವಿಳಂಬ ಕೈ ಕಾರ್ಯಕರ್ತರ ಆಕ್ರೋಶ..

ಮಂಜುನಾಥ್ ಮತ್ತು ಅವರ ಸಹೋದರಿಯ ನಡುವೆ ಹಣಕಾಸಿನ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಜುನಾಥ್ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದು ಸೆಲ್​ನಲ್ಲಿ ಇರಿಸಲಾಗಿದೆ. ಠಾಣೆಯಿಂದ ಬಿಡುಗಡೆ ಮಾಡಿ ಹೊರಕಳುಹಿಸಲು ಕಾನ್ಸ್​ಟೇಬಲ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪಟ್ಟಣದ ಶಿವಗಣೇಶ ಸರ್ಕಲ್​ನಲ್ಲಿರುವ ಹಾಪ್ ಕಾಮ್ಸ್ ಬಳಿ, ಮಂಜುನಾಥ್​ಅವರಿಂದ ಹಣ ಪಡೆದುಕೊಳ್ಳುವಾಗ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ತನಿಖೆ ವಿಳಂಬ ಕೈ ಕಾರ್ಯಕರ್ತರ ಆಕ್ರೋಶ..

ಕಾನ್ಸ್​ಟೇಬಲ್ ಚಂದ್ರಶೇಖರ್ ಮಾತ್ರವಲ್ಲದೇ ಸಬ್ ಇನ್ಸ್​ಪೆಕ್ಟರ್ ಈರಮ್ಮ ಮೇಲೆ ಕೂಡ ದೂರು ದಾಖಲಾಗಿದೆ. ಆದ್ರೆ, ಈರಮ್ಮ ಅವರು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Last Updated : Nov 24, 2022, 12:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.