ETV Bharat / state

ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಬೈಕ್ ಸವಾರ ಸಾವು

author img

By

Published : Sep 4, 2022, 4:05 PM IST

ಬಿಬಿಎಂಪಿ ಕಸದ ಲಾರಿ ಬೈಕ್ ಸವಾರನ ಮೇಲೆ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

man-dies-after-hit-by-bbmp-garbage-lorry
ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಬೈಕ್  ಸವಾರ ಸಾವು

ದೊಡ್ಡಬಳ್ಳಾಪುರ : ಬಿಬಿಎಂಪಿ ಕಸದ ಲಾರಿಯೊಂದು ಬೈಕ್ ಸವಾರನ ಮೇಲೆ ಉರುಳಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಮಾವಿನಕುಂಟೆ ನಿವಾಸಿ ರಾಜು (32) ಎಂದು ಗುರುತಿಸಲಾಗಿದೆ.

ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಯುವಕ ಸಾವನ್ನಪ್ಪಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸೂಕ್ತ ನ್ಯಾಯ ಸಿಗುವವರೆಗೂ ಶವ ತೆರವು ಮಾಡುವುದಿಲ್ಲವೆಂದು ಗ್ರಾಮಸ್ದರು ಪ್ರತಿಭಟನೆಗೆ ಮುಂದಾಗಿದ್ದು, ಶಾಸಕ ಟಿ ವೆಂಕಟರಮಣಯ್ಯ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.

ಅವೈಜ್ಞಾನಿಕ ಕಸ ವಿಲೇವಾರಿ : ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ದೊಡ್ಡಬಳ್ಳಾಪುರ ತಾಲೂಕಿನ ಚಿಗೇರನಹಳ್ಳಿಯ MSGP ಘಟಕದಲ್ಲಿ ತಂದು ಸುರಿಯಲಾಗುತ್ತಿದೆ. ಇಲ್ಲಿ ಒಪ್ಪಂದದ ಪ್ರಕಾರ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಾಗಿ ಪ್ರಾರಂಭವಾದ MSGP ಘಟಕ ಕೇವಲ ಕಸ ಸಂಗ್ರಹಣೆ ಮಾತ್ರ ಮಾಡುತ್ತಿದೆ. ಈಗಾಗಲೇ ಸ್ಥಳದಲ್ಲಿ ಕಸದ ರಾಶಿಯೇ ತುಂಬಿದ್ದು, ಇದರಿಂದಾಗಿ ಜನರ ಆರೋಗ್ಯ ಹದಗೆಡುವಂತಾಗಿದೆ. ಹೀಗಾಗಿ MSGP ಘಟಕದ ತೆರವಿಗಾಗಿ 2015ರಿಂದ ಹೋರಾಟ ನಡೆಸಲಾಗುತ್ತಿದೆ.

ತರಬೇತಿ ಇಲ್ಲದ ಚಾಲಕ, ಗುಜಿರಿ ಲಾರಿಗಳು : ಬಿಬಿಎಂಪಿ ಕಸ ಸಂಗ್ರಹವೇ ಒಂದು ದೊಡ್ಡ ಮಾಫಿಯಾವಾಗಿ ಬೆಳೆದಿದೆ. ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಬಿಎಂಪಿಯು ಕಸದ ಲಾರಿಗಳಿಗೆ ನುರಿತ ಚಾಲಕರ ನೇಮಕ ಮಾಡುತ್ತಿಲ್ಲ ಮತ್ತು ಕಸ ಸಂಗ್ರಹಕ್ಕೆ ಗುಜಿರಿ ಲಾರಿಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಹಲವು ಅಮಾಯಕರು ಜೀವ ಕಳೆದುಕೊಳ್ಳುವಂತಾಗಿದೆ ಎಂದು ಸಾರ್ವಜಿನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾರಿಗಳ ಓಡಾಟದಿಂದ ರಸ್ತೆ ತುಂಬೆಲ್ಲ ಗುಂಡಿ : ಲಾರಿಗಳ ಓಡಾಟದಿಂದ ರಸ್ತೆಗಳು ಹಾಳಾಗಿವೆ. ರಸ್ತೆ ತುಂಬೆಲ್ಲ ಹಳ್ಳ ಗುಂಡಿಗಳು ನಿರ್ಮಾಣವಾಗಿದ್ದು, ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ. ಇಂದು ನಡೆದ ಅಪಘಾತಕ್ಕೂ ರಸ್ತೆಗುಂಡಿಗಳು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ರಾಯಚೂರು: ಮಾಲ್​ನಿಂದ ಹೊರಬರುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ

ದೊಡ್ಡಬಳ್ಳಾಪುರ : ಬಿಬಿಎಂಪಿ ಕಸದ ಲಾರಿಯೊಂದು ಬೈಕ್ ಸವಾರನ ಮೇಲೆ ಉರುಳಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಮಾವಿನಕುಂಟೆ ನಿವಾಸಿ ರಾಜು (32) ಎಂದು ಗುರುತಿಸಲಾಗಿದೆ.

ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಯುವಕ ಸಾವನ್ನಪ್ಪಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸೂಕ್ತ ನ್ಯಾಯ ಸಿಗುವವರೆಗೂ ಶವ ತೆರವು ಮಾಡುವುದಿಲ್ಲವೆಂದು ಗ್ರಾಮಸ್ದರು ಪ್ರತಿಭಟನೆಗೆ ಮುಂದಾಗಿದ್ದು, ಶಾಸಕ ಟಿ ವೆಂಕಟರಮಣಯ್ಯ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.

ಅವೈಜ್ಞಾನಿಕ ಕಸ ವಿಲೇವಾರಿ : ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ದೊಡ್ಡಬಳ್ಳಾಪುರ ತಾಲೂಕಿನ ಚಿಗೇರನಹಳ್ಳಿಯ MSGP ಘಟಕದಲ್ಲಿ ತಂದು ಸುರಿಯಲಾಗುತ್ತಿದೆ. ಇಲ್ಲಿ ಒಪ್ಪಂದದ ಪ್ರಕಾರ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಾಗಿ ಪ್ರಾರಂಭವಾದ MSGP ಘಟಕ ಕೇವಲ ಕಸ ಸಂಗ್ರಹಣೆ ಮಾತ್ರ ಮಾಡುತ್ತಿದೆ. ಈಗಾಗಲೇ ಸ್ಥಳದಲ್ಲಿ ಕಸದ ರಾಶಿಯೇ ತುಂಬಿದ್ದು, ಇದರಿಂದಾಗಿ ಜನರ ಆರೋಗ್ಯ ಹದಗೆಡುವಂತಾಗಿದೆ. ಹೀಗಾಗಿ MSGP ಘಟಕದ ತೆರವಿಗಾಗಿ 2015ರಿಂದ ಹೋರಾಟ ನಡೆಸಲಾಗುತ್ತಿದೆ.

ತರಬೇತಿ ಇಲ್ಲದ ಚಾಲಕ, ಗುಜಿರಿ ಲಾರಿಗಳು : ಬಿಬಿಎಂಪಿ ಕಸ ಸಂಗ್ರಹವೇ ಒಂದು ದೊಡ್ಡ ಮಾಫಿಯಾವಾಗಿ ಬೆಳೆದಿದೆ. ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಬಿಎಂಪಿಯು ಕಸದ ಲಾರಿಗಳಿಗೆ ನುರಿತ ಚಾಲಕರ ನೇಮಕ ಮಾಡುತ್ತಿಲ್ಲ ಮತ್ತು ಕಸ ಸಂಗ್ರಹಕ್ಕೆ ಗುಜಿರಿ ಲಾರಿಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಹಲವು ಅಮಾಯಕರು ಜೀವ ಕಳೆದುಕೊಳ್ಳುವಂತಾಗಿದೆ ಎಂದು ಸಾರ್ವಜಿನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾರಿಗಳ ಓಡಾಟದಿಂದ ರಸ್ತೆ ತುಂಬೆಲ್ಲ ಗುಂಡಿ : ಲಾರಿಗಳ ಓಡಾಟದಿಂದ ರಸ್ತೆಗಳು ಹಾಳಾಗಿವೆ. ರಸ್ತೆ ತುಂಬೆಲ್ಲ ಹಳ್ಳ ಗುಂಡಿಗಳು ನಿರ್ಮಾಣವಾಗಿದ್ದು, ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ. ಇಂದು ನಡೆದ ಅಪಘಾತಕ್ಕೂ ರಸ್ತೆಗುಂಡಿಗಳು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ರಾಯಚೂರು: ಮಾಲ್​ನಿಂದ ಹೊರಬರುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.