ETV Bharat / state

ಮರಾಠ ಅಭಿವೃದ್ಧಿ ನಿಗಮ ಸ್ವಾಗತಾರ್ಹ ಹಿಂದುಳಿದ ಜನಾಂಗಗಳ ಅಭಿವೃದ್ಧಿಗೆ ಸಹಕಾರಿ: ವಕೀಲ ಮಾವಿನಕುಂಟೆ ರವಿ - ದೊಡ್ಡಬಳ್ಳಾಪುರ ಸುದ್ದಿ

ಕನ್ನಡ ಪರ ಸಂಘಟನೆಗಳು ಎಂಇಎಸ್ ನಂತಹ ಕಿಡಿಗೇಡಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಕರೆ ಕೊಟ್ಟಿರುವ ರಾಜ್ಯ ಬಂದ್​ನ್ನು ವಾಪಸ್​ ಪಡೆಯಬೇಕು ಎಂದು ಮಾವಿನಕುಂಟೆ ರವಿ ಮನವಿ ಮಾಡಿದರು.

Advocate Mavinakunte Ravi
ವಕೀಲ ಮಾವಿನಕುಂಟೆ ರವಿ
author img

By

Published : Nov 19, 2020, 9:11 PM IST

ದೊಡ್ಡಬಳ್ಳಾಪುರ: ಸರ್ಕಾರದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಾರ್ಹವಾಗಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಕೀಲರಾದ ಮಾವಿನಕುಂಟೆ ರವಿ ಹೇಳಿದರು.

ಮರಾಠ ಅಭಿವೃದ್ಧಿ ನಿಗಮ ಸ್ವಾಗತಾರ್ಹ ಹಿಂದುಳಿದ ಜನಾಂಗಗಳ ಅಭಿವೃದ್ಧಿಗೆ ಸಹಕಾರಿ: ವಕೀಲ ಮಾವಿನಕುಂಟೆ ರವಿ

ನಗರದ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತು ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮೂದಾಯವು ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದ ಜನಾಂಗವಾಗಿದ್ದು, ನಾವು 3B ಪಟ್ಟಿಯಲ್ಲಿ ಬರುತ್ತೇವೆ. ಹಾಗಾಗಿ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ನಾವು ತಲೆ ತಲಾಂತರದಿಂದ ಈ ಮಣ್ಣಿನಲ್ಲಿ ಹುಟ್ಟಿ ಬೆಳೆದಿದ್ದೇವೆ, ನಮ್ಮ ಜನಾಂಗವೂ ಸಹ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದು, ಬೆಳಗಾವಿ ಎಂದೆಂದಿಗೂ ಕರ್ನಾಟಕದ ಭಾಗವಾಗಿದೆ. ಕನ್ನಡಿಗರನ್ನು ಕೆಣಕುವ ಪುಂಡರನ್ನು ಸರ್ಕಾರ ಹತೋಟಿಯಲ್ಲಿ ಇಡಬೇಕು ಎಂದು ಹೇಳಿದ ಅವರು, ಕನ್ನಡ ಪರ ಸಂಘಟನೆಗಳು ಎಂಇಎಸ್ ನಂತಹ ಕಿಡಿಗೇಡಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಕರೆ ಕೊಟ್ಟಿರುವ ರಾಜ್ಯ ಬಂದ್​ನ್ನು ವಾಪಸ್​ ಪಡೆಯಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ: ಸರ್ಕಾರದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಾರ್ಹವಾಗಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಕೀಲರಾದ ಮಾವಿನಕುಂಟೆ ರವಿ ಹೇಳಿದರು.

ಮರಾಠ ಅಭಿವೃದ್ಧಿ ನಿಗಮ ಸ್ವಾಗತಾರ್ಹ ಹಿಂದುಳಿದ ಜನಾಂಗಗಳ ಅಭಿವೃದ್ಧಿಗೆ ಸಹಕಾರಿ: ವಕೀಲ ಮಾವಿನಕುಂಟೆ ರವಿ

ನಗರದ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತು ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮೂದಾಯವು ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದ ಜನಾಂಗವಾಗಿದ್ದು, ನಾವು 3B ಪಟ್ಟಿಯಲ್ಲಿ ಬರುತ್ತೇವೆ. ಹಾಗಾಗಿ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ನಾವು ತಲೆ ತಲಾಂತರದಿಂದ ಈ ಮಣ್ಣಿನಲ್ಲಿ ಹುಟ್ಟಿ ಬೆಳೆದಿದ್ದೇವೆ, ನಮ್ಮ ಜನಾಂಗವೂ ಸಹ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದು, ಬೆಳಗಾವಿ ಎಂದೆಂದಿಗೂ ಕರ್ನಾಟಕದ ಭಾಗವಾಗಿದೆ. ಕನ್ನಡಿಗರನ್ನು ಕೆಣಕುವ ಪುಂಡರನ್ನು ಸರ್ಕಾರ ಹತೋಟಿಯಲ್ಲಿ ಇಡಬೇಕು ಎಂದು ಹೇಳಿದ ಅವರು, ಕನ್ನಡ ಪರ ಸಂಘಟನೆಗಳು ಎಂಇಎಸ್ ನಂತಹ ಕಿಡಿಗೇಡಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಕರೆ ಕೊಟ್ಟಿರುವ ರಾಜ್ಯ ಬಂದ್​ನ್ನು ವಾಪಸ್​ ಪಡೆಯಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.