ಆನೇಕಲ್ : ತಾಲೂಕಿನಲ್ಲಿ ಕೊಲೆ ಪ್ರಕರಣಗಳು ಮರುಕಳಿಸುತ್ತಿದ್ದು, ಇಂದು ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬೆಸ್ತಮಾನಹಳ್ಳಿ ನಿವಾಸಿ 23 ವರ್ಷದ ವಿನುತ್ ಅಲಿಯಾಸ್ ಬಟಾಣಿ ಬೈಕ್ನಲ್ಲಿ ಕೆಲಸಕ್ಕೆ ತೆರಳುವ ಸಂದರ್ಭ ಬರ್ಬರವಾಗಿ ಕೊಲೆಯಾಗಿದ್ದಾನೆ. ಆನೇಕಲ್-ಅತ್ತಿಬೆಲೆ ರಸ್ತೆಯ ಡಿಹೆಚ್ಎಲ್ ಬಳಿ ಕೊಲೆ ನಡೆದಿದ್ದು, ರಸ್ತೆ ಮಧ್ಯೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಲಕ್ಷ್ಮಿ ಗಣೇಶ್ ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ.