ETV Bharat / state

ದೇವನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಕೆ.ಹೆಚ್. ಮುನಿಯಪ್ಪ ಸ್ಪರ್ಧೆ ವದಂತಿ.. ಮಾಜಿ ಶಾಸಕ ಹೇಳಿದ್ದೇನು?

author img

By

Published : Dec 20, 2022, 6:10 PM IST

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

pillamunishamappa react
ಪಿಳ್ಳಮುನಿಶ್ಯಾಮಪ್ಪ ಪ್ರತಿಕ್ರಿಯೆ
ಪಿಳ್ಳಮುನಿಶ್ಯಾಮಪ್ಪ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ಧಿಸುವ ವದಂತಿ ಹರಿದಾಡುತ್ತಿದೆ. ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ, ಪ್ರತಿಸ್ಪರ್ಧಿಯಾಗಿ ಯಾರೇ ಕಣದಲ್ಲಿದ್ದರು ಸ್ವಾಗತಿಸುವುದಾಗಿ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಕೆ ಹೆಚ್​​ ಮುನಿಯಪ್ಪ ದೇವನಹಳ್ಳಿ ಸ್ಫರ್ಧೆ ವಿಚಾರವಾಗಿ ಮಾತನಾಡಿದ ಅವರು, ಪ್ರತಿಸ್ಪರ್ಧಿಯಾಗಿ ಯಾರೇ ಇಲ್ಲಿಗೆ ಬಂದರು ಅವರನ್ನು ಸ್ವಾಗತಿಸುವುದಾಗಿ ಹೇಳಿದರು. ಅಲ್ಲದೇ ಅವರು ಇಲ್ಲಿಗೆ ಬಂದರೂ ಕಾಂಗ್ರೆಸ್​​ ಪಕ್ಷದಿಂದ ಸ್ಫರ್ಧಿಸುತ್ತಾರೆ ಎಂದರು.

ಇನ್ನು, ಬಿಜೆಪಿಯಿಂದ ಅಧಿಕೃತವಾಗಿ ಯಾರನ್ನು ಅಭ್ಯರ್ಥಿಯನ್ನಾಗಿ ಆದೇಶ ಮಾಡುತ್ತದೋ ಅವರಿಗೆ ಟಿಕೆಟ್​ ಸಿಗಲಿದೆ. ಬಿಜೆಪಿಗೆ ಸೇರುವ ಮುನ್ನವೇ ಇದನ್ನು ತಿಳಿದು ನಾನು ಬಂದಿದ್ದು, ಈ ವಿಚಾರದಲ್ಲಿ ನಾನು ಪಾಸಿಟಿವ್​ ಆಗಿದ್ದೇನೆ ಎಂದರು. ಪಿಳ್ಳ ಮುನಿಶ್ಯಾಮಪ್ಪ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

2018 ರಲ್ಲಿ ಜೆಡಿಎಸ್​ನಿಂದ ಟಿಕೆಟ್ ಸಿಗದ ಹಿನ್ನೆಲೆ ಚುನಾವಣೆಯಿಂದ ದೂರ ಉಳಿದಿದ್ದ ಅವರು 8 ತಿಂಗಳ ಹಿಂದೆ ಬಿಜೆಪಿ ಪಕ್ಷ ಸೇರಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ಚುನಾವಣಾ ಪ್ರಚಾರ ಸಹ ಅವರು ಆರಂಭಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ನೂತನ ಪಿಂಚಣಿ ವ್ಯವಸ್ಥೆ ಕುರಿತು ಸದನದಲ್ಲಿ ಚರ್ಚಿಸಿದ ಬಳಿಕ ತೀರ್ಮಾನ : ಸಿಎಂ ಬೊಮ್ಮಾಯಿ

ಪಿಳ್ಳಮುನಿಶ್ಯಾಮಪ್ಪ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ಧಿಸುವ ವದಂತಿ ಹರಿದಾಡುತ್ತಿದೆ. ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ, ಪ್ರತಿಸ್ಪರ್ಧಿಯಾಗಿ ಯಾರೇ ಕಣದಲ್ಲಿದ್ದರು ಸ್ವಾಗತಿಸುವುದಾಗಿ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಕೆ ಹೆಚ್​​ ಮುನಿಯಪ್ಪ ದೇವನಹಳ್ಳಿ ಸ್ಫರ್ಧೆ ವಿಚಾರವಾಗಿ ಮಾತನಾಡಿದ ಅವರು, ಪ್ರತಿಸ್ಪರ್ಧಿಯಾಗಿ ಯಾರೇ ಇಲ್ಲಿಗೆ ಬಂದರು ಅವರನ್ನು ಸ್ವಾಗತಿಸುವುದಾಗಿ ಹೇಳಿದರು. ಅಲ್ಲದೇ ಅವರು ಇಲ್ಲಿಗೆ ಬಂದರೂ ಕಾಂಗ್ರೆಸ್​​ ಪಕ್ಷದಿಂದ ಸ್ಫರ್ಧಿಸುತ್ತಾರೆ ಎಂದರು.

ಇನ್ನು, ಬಿಜೆಪಿಯಿಂದ ಅಧಿಕೃತವಾಗಿ ಯಾರನ್ನು ಅಭ್ಯರ್ಥಿಯನ್ನಾಗಿ ಆದೇಶ ಮಾಡುತ್ತದೋ ಅವರಿಗೆ ಟಿಕೆಟ್​ ಸಿಗಲಿದೆ. ಬಿಜೆಪಿಗೆ ಸೇರುವ ಮುನ್ನವೇ ಇದನ್ನು ತಿಳಿದು ನಾನು ಬಂದಿದ್ದು, ಈ ವಿಚಾರದಲ್ಲಿ ನಾನು ಪಾಸಿಟಿವ್​ ಆಗಿದ್ದೇನೆ ಎಂದರು. ಪಿಳ್ಳ ಮುನಿಶ್ಯಾಮಪ್ಪ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

2018 ರಲ್ಲಿ ಜೆಡಿಎಸ್​ನಿಂದ ಟಿಕೆಟ್ ಸಿಗದ ಹಿನ್ನೆಲೆ ಚುನಾವಣೆಯಿಂದ ದೂರ ಉಳಿದಿದ್ದ ಅವರು 8 ತಿಂಗಳ ಹಿಂದೆ ಬಿಜೆಪಿ ಪಕ್ಷ ಸೇರಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ಚುನಾವಣಾ ಪ್ರಚಾರ ಸಹ ಅವರು ಆರಂಭಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ನೂತನ ಪಿಂಚಣಿ ವ್ಯವಸ್ಥೆ ಕುರಿತು ಸದನದಲ್ಲಿ ಚರ್ಚಿಸಿದ ಬಳಿಕ ತೀರ್ಮಾನ : ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.