ETV Bharat / state

26 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿ: ಕಳ್ಳ​ ಸಹೋದರರು ಅಂದರ್​​​ - ದೊಡ್ಡಬಳ್ಳಾಪುರ ಪೊಲೀಸರು

26 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೋರ ಸಹೋದರರಿಬ್ಬರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Doddaballapura Police
Doddaballapura Police
author img

By

Published : Dec 28, 2020, 9:42 PM IST

ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ಗ್ರಾಮೀಣ ಪ್ರದೇಶದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್​ ಮಾಡಿ ಅವರ ಸರ ಕಿತ್ತು ಪರಾರಿಯಾಗ್ತಿದ್ದ ಕಳ್ಳ ಸಹೋದರರಿಬ್ಬರನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೊಲಕ್ಕೆ ಹೋಗುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡುತ್ತಿದ್ದ ಈ ಅಣ್ಣ-ತಮ್ಮಂದಿರು ಹೇರ್​ ಕಟಿಂಗ್​ ಕೆಲಸ ಮಾಡ್ತಿದ್ರು. ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್​ ಸಿ. ಮತ್ತು ವಿನೋದ್ ಇಬ್ಬರು ಮಾಡೋ ಕೆಲಸ ಬಿಟ್ಟು ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು.

ಕಳ್ಳ ಸಹೋದರರನ್ನು ಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರು

ತಾಲೂಕಿನ ಬಂಡಯ್ಯನಪಾಳ್ಯ ಗ್ರಾಮದ ನಿವಾಸಿ ಮುತ್ತಮ್ಮ ತಮ್ಮ ಜಮೀನಿಗೆ ಹಸುಗಳನ್ನು ಹೊಡೆದುಕೊಂಡು ಹೋಗ್ತಿದ್ದ ಸಂದರ್ಭ ಪಲ್ಸರ್ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಕೆಗೆ ಮಾರಕಾಸ್ತ್ರದಿಂದ ಹೊಡೆದು ಕೊರಳಲ್ಲಿದ್ದ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತು ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಿಕೊಂಡು ಹಲ್ಲೆ ನಡೆಸಿ ಕಳ್ಳತನ ಮಾಡುತ್ತಿದ್ದುದರಿಂದ ಗ್ರಾಮೀಣ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರಿನ ಗ್ರಾಮಗಳಲ್ಲಿ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲೂ ಭಯ ಪಡುತ್ತಿದ್ದರು.

ಇನ್ನು ಬಂಧಿತರು 26 ಸರ ಕಳ್ಳತನ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅಲ್ಲದೆ ಎರಟು ಪಲ್ಸರ್​ ಬೈಕ್​ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. 26 ಪ್ರಕರಣಗಳಿಗೆ ಸಂಬಂಧಿಸಿದಂತೆ 25 ಲಕ್ಷ ಮೌಲ್ಯದ 510 ಗ್ರಾಂ ತೂಕದ 23 ಚಿನ್ನದ ಸರಗಳು, ಕೃತ್ಯಕ್ಕೆ ಬಳಸಿದ್ದ ಪಲ್ಸರ್​ ಬೈಕ್​, ಚಾಕು ಸ್ಪಾನರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ಗ್ರಾಮೀಣ ಪ್ರದೇಶದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್​ ಮಾಡಿ ಅವರ ಸರ ಕಿತ್ತು ಪರಾರಿಯಾಗ್ತಿದ್ದ ಕಳ್ಳ ಸಹೋದರರಿಬ್ಬರನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೊಲಕ್ಕೆ ಹೋಗುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡುತ್ತಿದ್ದ ಈ ಅಣ್ಣ-ತಮ್ಮಂದಿರು ಹೇರ್​ ಕಟಿಂಗ್​ ಕೆಲಸ ಮಾಡ್ತಿದ್ರು. ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್​ ಸಿ. ಮತ್ತು ವಿನೋದ್ ಇಬ್ಬರು ಮಾಡೋ ಕೆಲಸ ಬಿಟ್ಟು ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು.

ಕಳ್ಳ ಸಹೋದರರನ್ನು ಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರು

ತಾಲೂಕಿನ ಬಂಡಯ್ಯನಪಾಳ್ಯ ಗ್ರಾಮದ ನಿವಾಸಿ ಮುತ್ತಮ್ಮ ತಮ್ಮ ಜಮೀನಿಗೆ ಹಸುಗಳನ್ನು ಹೊಡೆದುಕೊಂಡು ಹೋಗ್ತಿದ್ದ ಸಂದರ್ಭ ಪಲ್ಸರ್ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಕೆಗೆ ಮಾರಕಾಸ್ತ್ರದಿಂದ ಹೊಡೆದು ಕೊರಳಲ್ಲಿದ್ದ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತು ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಿಕೊಂಡು ಹಲ್ಲೆ ನಡೆಸಿ ಕಳ್ಳತನ ಮಾಡುತ್ತಿದ್ದುದರಿಂದ ಗ್ರಾಮೀಣ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರಿನ ಗ್ರಾಮಗಳಲ್ಲಿ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲೂ ಭಯ ಪಡುತ್ತಿದ್ದರು.

ಇನ್ನು ಬಂಧಿತರು 26 ಸರ ಕಳ್ಳತನ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅಲ್ಲದೆ ಎರಟು ಪಲ್ಸರ್​ ಬೈಕ್​ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. 26 ಪ್ರಕರಣಗಳಿಗೆ ಸಂಬಂಧಿಸಿದಂತೆ 25 ಲಕ್ಷ ಮೌಲ್ಯದ 510 ಗ್ರಾಂ ತೂಕದ 23 ಚಿನ್ನದ ಸರಗಳು, ಕೃತ್ಯಕ್ಕೆ ಬಳಸಿದ್ದ ಪಲ್ಸರ್​ ಬೈಕ್​, ಚಾಕು ಸ್ಪಾನರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.