ETV Bharat / state

ಪೌರತ್ವ ಕಾಯ್ದೆಯನ್ನು ಅರ್ಥವಾಗುವಂತೆ ಸರಳವಾಗಿ ವಿವರಿಸಿದ ಎಸ್‌ಪಿ ರವಿ.ಡಿ.ಚೆನ್ನಣ್ಣನವರ್‌

author img

By

Published : Dec 21, 2019, 6:50 PM IST

ವದಂತಿಗಳನ್ನು ಆಧರಿಸಿ ಕಾನೂನು ಬಾಹಿರವಾಗಿ ಪ್ರತಿಭಟನೆ, ಸರ್ಕಾರದ ಆಸ್ತಿಗಳಿಗೆ ಹಾನಿಯುಂಟು ಮಾಡುವ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು ಎಂದು ನಗರದಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಚನ್ನಣ್ಣನವರ್ ಎಚ್ಚರಿಸಿದರು. ಇದೇ ವೇಳೆ ಅವರು ಪೌರತ್ವ ಕಾಯ್ದೆಯನ್ನು ಜನರಿಗೆ ಅರ್ಥವಾಗುವ ರೀತಿಯಲ್ಲಿ ಸರಳವಾಗಿ ವಿವರಿಸಿದರು.

Ravi D Channannavar
ಶಾಂತಿ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ದ ಕಠಿಣ ಕ್ರಮ: ಚನ್ನಣ್ಣನವರ್ ಖಡಕ್​ ವಾರ್ನಿಂಗ್​

ಹೊಸಕೋಟೆ: ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟುಮಾಡುವಂತಹ ಪ್ರಕರಣಗಳಲ್ಲಿ ತೊಡಗಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ರವಿ ಡಿ.ಚನ್ನಣ್ಣನವರ್ ಎಚ್ಚರಿಕೆ ನೀಡಿದರು. ಇದೇ ವೇಳೆ ಅವರು ಪೌರತ್ವ ಕಾಯ್ದೆ ಬಗ್ಗೆ ಸವಿವರವಾದ ಮಾಹಿತಿ ನೀಡಿದ್ರು.

ಶಾಂತಿ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ದ ಕಠಿಣ ಕ್ರಮ: ಚನ್ನಣ್ಣನವರ್ ಖಡಕ್​ ವಾರ್ನಿಂಗ್​

ಹೊಸಕೋಟೆ ಟೌನ್ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ಕಾನೂನನ್ನು ಪಾಲಿಸಬೇಕಾದದ್ದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ. ಪೌರತ್ವ ಕಾಯಿದೆಯನ್ನು ಸರಿಯಾಗಿ ಅರ್ಥೈಸಿಕೊಂಡಲ್ಲಿ ಯಾವುದೇ ಸಮಸ್ಯೆ ಬಾರದಂತೆ ಶಾಂತಿ ಕಾಪಾಡಿಕೊಳ್ಳಬಹುದು ಎಂದು ಕಾಯಿದೆಯ ಸಂಪೂರ್ಣ ಮಾಹಿತಿಯನ್ನು ಓದಿ ಹೇಳಿದರು.

ವದಂತಿಗಳನ್ನು ಆಧರಿಸಿ ಕಾನೂನು ಬಾಹಿರವಾಗಿ ಪ್ರತಿಭಟನೆ, ಸರ್ಕಾರದ ಆಸ್ತಿಗಳಿಗೆ ಹಾನಿಯುಂಟು ಮಾಡುವ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಈ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ನೀಡುವಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿನ ವಿಚಾರಗಳಿಂದ ಪ್ರಚೋದಿತರಾಗಿ, ಧರಣಿ ಮಾಡುವುದು, ಬಂದ್ ನಡೆಸುವುದು, ಗೊಂದಲ ನಿರ್ಮಿಸುವುದು ಕಾನೂನುಬಾಹಿರವಾಗಿದೆ. ಕಾನೂನಿನ ಬಗ್ಗೆ ವಿದ್ಯಾವಂತರೊಂದಿಗೆ ಚರ್ಚಿಸಿ ತಪ್ಪು ತಿಳಿವಳಿಕೆಯಿಂದ ಮುಕ್ತರಾಗಬೇಕು. ಪ್ರಸ್ತುತ ಜಾರಿಗೊಳಿಸಲು ಉದ್ದೇಶಿಸಿರುವ ಎನ್‌ಆರ್‌ಸಿ, ಸಿಎಎ ಕಾನೂನು ಭಾರತೀಯ ಪ್ರಜೆಗಳಿಗೆ ಅನ್ವಯಿಸುವುದಿಲ್ಲ. ಕೇವಲ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಆಫ್ಘಾನಿಸ್ಥಾನದಿಂದ ವಲಸೆ ಬಂದಿರುವರಿಗೆ ಮಾತ್ರ ಒಳಪಡಲಿದ್ದಾರೆ ಎಂದು ಕೇಂದ್ರ ಸರ್ಕಾರವೇ ಸ್ಪಷ್ಟವಾಗಿ ತಿಳಿಸಿದೆ ಎಂದರು.

ಹೊಸಕೋಟೆ: ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟುಮಾಡುವಂತಹ ಪ್ರಕರಣಗಳಲ್ಲಿ ತೊಡಗಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ರವಿ ಡಿ.ಚನ್ನಣ್ಣನವರ್ ಎಚ್ಚರಿಕೆ ನೀಡಿದರು. ಇದೇ ವೇಳೆ ಅವರು ಪೌರತ್ವ ಕಾಯ್ದೆ ಬಗ್ಗೆ ಸವಿವರವಾದ ಮಾಹಿತಿ ನೀಡಿದ್ರು.

ಶಾಂತಿ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ದ ಕಠಿಣ ಕ್ರಮ: ಚನ್ನಣ್ಣನವರ್ ಖಡಕ್​ ವಾರ್ನಿಂಗ್​

ಹೊಸಕೋಟೆ ಟೌನ್ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ಕಾನೂನನ್ನು ಪಾಲಿಸಬೇಕಾದದ್ದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ. ಪೌರತ್ವ ಕಾಯಿದೆಯನ್ನು ಸರಿಯಾಗಿ ಅರ್ಥೈಸಿಕೊಂಡಲ್ಲಿ ಯಾವುದೇ ಸಮಸ್ಯೆ ಬಾರದಂತೆ ಶಾಂತಿ ಕಾಪಾಡಿಕೊಳ್ಳಬಹುದು ಎಂದು ಕಾಯಿದೆಯ ಸಂಪೂರ್ಣ ಮಾಹಿತಿಯನ್ನು ಓದಿ ಹೇಳಿದರು.

ವದಂತಿಗಳನ್ನು ಆಧರಿಸಿ ಕಾನೂನು ಬಾಹಿರವಾಗಿ ಪ್ರತಿಭಟನೆ, ಸರ್ಕಾರದ ಆಸ್ತಿಗಳಿಗೆ ಹಾನಿಯುಂಟು ಮಾಡುವ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಈ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ನೀಡುವಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿನ ವಿಚಾರಗಳಿಂದ ಪ್ರಚೋದಿತರಾಗಿ, ಧರಣಿ ಮಾಡುವುದು, ಬಂದ್ ನಡೆಸುವುದು, ಗೊಂದಲ ನಿರ್ಮಿಸುವುದು ಕಾನೂನುಬಾಹಿರವಾಗಿದೆ. ಕಾನೂನಿನ ಬಗ್ಗೆ ವಿದ್ಯಾವಂತರೊಂದಿಗೆ ಚರ್ಚಿಸಿ ತಪ್ಪು ತಿಳಿವಳಿಕೆಯಿಂದ ಮುಕ್ತರಾಗಬೇಕು. ಪ್ರಸ್ತುತ ಜಾರಿಗೊಳಿಸಲು ಉದ್ದೇಶಿಸಿರುವ ಎನ್‌ಆರ್‌ಸಿ, ಸಿಎಎ ಕಾನೂನು ಭಾರತೀಯ ಪ್ರಜೆಗಳಿಗೆ ಅನ್ವಯಿಸುವುದಿಲ್ಲ. ಕೇವಲ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಆಫ್ಘಾನಿಸ್ಥಾನದಿಂದ ವಲಸೆ ಬಂದಿರುವರಿಗೆ ಮಾತ್ರ ಒಳಪಡಲಿದ್ದಾರೆ ಎಂದು ಕೇಂದ್ರ ಸರ್ಕಾರವೇ ಸ್ಪಷ್ಟವಾಗಿ ತಿಳಿಸಿದೆ ಎಂದರು.

Intro:ಹೊಸಕೋಟೆ:

ಶಾಂತಿ ಸುವ್ಯವಸ್ಥೆಗೆ ಭಂಗ ಮಾಡುವವರಿಗೆ ಕಠಿಣ ಕ್ರಮ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟುಮಾಡುವಂತಹ ಪ್ರಕರಣಗಳಲ್ಲಿ ತೊಡಗಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ರವಿ ಡಿ . ಚನ್ನಣ್ಣನವರ್ ಹೇಳಿದರು.ಹೊಸಕೋಟೆ
ಟೌನ್ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ರಾಷ್ಟ್ರದ ಕಾನೂನನ್ನು ಪಾಲಿಸಬೇಕಾದ್ದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಪೌರತ್ವ ಕಾಯಿದೆಯನ್ನು ಸರಿಯಾಗಿ ಅರ್ಥೈಸಿಕೊಂಡಲ್ಲಿ ಯಾವುದೇ ಸಮಸ್ಯೆ ಬಾರದಂತೆ ಶಾಂತಿ ಕಾಪಾಡಿಕೊಳ್ಳಬಹುದು
ಎಂದು ಮುಸ್ಲಿಂ ಸಮುದಾಯದವರಿಗೆ ಕಾಯಿದೆಯ ಸಂಪೂರ್ಣ ಮಾಹಿತಿಯನ್ನು ಓದಿ ಹೇಳಿ ಅರ್ಥವಾಗುವ ರೀತಿಯಲ್ಲಿ ಹೇಳಿದರು.

ವದಂತಿಗಳನ್ನು ಆಧರಿಸಿ ಕಾನೂನು ಬಾಹಿರವಾಗಿ ಪ್ರತಿಭಟನೆ,ಸರಕಾರದ ಆಸ್ತಿಗಳಿಗೆ ಹಾನಿಯುಂಟು ಮಾಡುವ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು.ಈ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ನೀಡುವಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಹಳಿದರು.



Body:ಸಾಮಾಜಿಕ ಜಾಲತಾಣಗಳಲ್ಲಿನ ವಿಚಾರಗಳಿಂದ ಪ್ರಚೋಧಿತರಾಗಿ,ಧರಣಿ ಮಾಡುವುದು,ಬಂದ್ ನಡೆಸುವುದು,ಗೊಂದಲ ನಿರ್ಮಿಸುವುದು ಕಾನೂನುಬಾಹಿರ ವಾಗಿದೆ. ಕಾನೂನಿನ ಬಗ್ಗೆ ವಿದ್ಯಾವಂತ ರೊಂದಿಗೆ ಚರ್ಚಿಸಿ ತಪ್ಪು ತಿಳಿವಳಿಕೆಯಿಂದ ಮುಕ್ತರಾಗಬೇಕು.Conclusion:ಪ್ರಸ್ತುತ
ಜಾರಿಗೊಳಿಸಲು ಉದ್ದೇಶಿಸಿರುವ ಎನ್‌ಆರ್‌ಸಿ , ಸಿಎಎ ಕಾನೂನು ಭಾರತೀಯ ಪ್ರಜೆಗಳಿಗೆ ಅನ್ವಯಿಸುವುದಿಲ್ಲ, ಕೇವಲ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಪಾನಿಸ್ತಾನದಿಂದ ವಲಸೆ ಬಂದಿರುವರಿಗೆ ಮಾತ್ರ ಒಳಪಡುವರು ಎಂದು
ಕೇಂದ್ರ ಸರಕಾರವೇ ಸ್ಪಷ್ಟವಾಗಿ ತಿಳಿಸಿದೆ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.