ದೇವನಹಳ್ಳಿ: ಮುಖ್ಯಮಂತ್ರಿಗಳ ಕಚೇರಿಯಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ 2 ಕೋಟಿ ರೂ. ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಂಚಾಯತ್ ಅಧಿಕಾರಿಗಳು ಶಾಸಕರ ಜೊತೆ ಇದ್ದರು.
ಅಣ್ಣೇಶ್ವರ ಗ್ರಾ.ಪಂ ವ್ಯಾಪ್ತಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬರಲಿದ್ದು, ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಹಾಕಿರುವ ಜಾಹೀರಾತು ಫಲಕ ಮತ್ತು ಇತರೆ ತೆರಿಗೆ ಸೇರಿ 50 ಕೋಟಿ ಹಣ ಪಂಚಾಯತಿಗೆ ಬರಬೇಕಿದೆ. ಈ ತೆರಿಗೆ ಹಣ ಬಂದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ಪಂಚಾಯತಿ ಅಧ್ಯಕ್ಷರು ತಿಳಿಸಿದರು.