ದೇವನಹಳ್ಳಿ: ಅಧಿಕಾರ ಸಿಕ್ಕಾಗ ಮಾತ್ರವಲ್ಲ, ಕಳೆದುಕೊಂಡಾಗಲೂ ಜನ ನನ್ನೊಂದಿಗೆ ಇದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ನಂತರ ಬೆಂಗಳೂರಿಗೆ ಆಗಮಿಸಿದ ಗೌಡರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಸದಾನಂದಗೌಡರನ್ನು ಸ್ವಾಗತಿಸಲು ಪಕ್ಷದ ಮುಖಂಡರಾದ ಸಂಸದ ಪಿ.ಸಿ.ಮೋಹನ್, ಎಂಎಲ್ಸಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಆಗಮಿಸಿದ್ದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಸಂತೋಷದಿಂದ ಇದ್ದೇನೆ ಎಂದು ಹೇಳಿದರು.
ಅಧಿಕಾರ ಸಿಕ್ಕಾಗ ಮಾತ್ರವಲ್ಲ ಕಳೆದುಕೊಂಡಾಗಲು ಜನ ನನ್ನೊಂದಿಗೆ ಇದ್ದಾರೆ. ಜನರ ಪ್ರೀತಿಗೆ ನಾನು ಚಿರಋಣಿ, ರಾಜ್ಯ ರಾಜಕಾರಣದ ಬಗ್ಗೆ ಈಗಲೇ ನಾನು ಏನು ಹೇಳಲಾಗುವುದಿಲ್ಲ. ಪಕ್ಷ ನೀಡುವ ಜವಾಬ್ದಾರಿ ಮತ್ತು ಸೂಚನೆ ಮೇರೆಗೆ ಕೆಲಸ ಮಾಡ್ತೀನಿ ಎಂದರು.