ETV Bharat / state

ಎಸ್​ಟಿ ಮೀಸಲಾತಿ ಹೋರಾಟ ಸಮಿತಿ ಸಮಾರೋಪ ಸಮಾರಂಭ: ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಈಶ್ವರಪ್ಪ

author img

By

Published : Jan 28, 2021, 11:47 AM IST

ಕುರುಬರ ಎಸ್​ಟಿ ಮೀಸಲಾತಿ ಹೋರಾಟ ಸಮಿತಿಯ ಸಮಾರೋಪ ಸಮಾರಂಭ ಮಾದವಾರದ ಬಿಇಒಸಿಯಲ್ಲಿ ನಡೆಯಲಿದೆ. ಸಮಾರಂಭದ ಬೃಹತ್ ವೇದಿಕೆಗೆ ಸಚಿವ ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

lay foundation by Eshwarappa
ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಈಶ್ವರಪ್ಪ

ನೆಲಮಂಗಲ: ಕುರುಬರ ಎಸ್​ಟಿ ಮೀಸಲಾತಿ ಹೋರಾಟ ಸಮಿತಿಯ ಸಮಾರೋಪ ಸಮಾರಂಭ ಫೆಬ್ರವರಿ 7ರಂದು ಮಾದವಾರದ ಬಿಇಒಸಿಯಲ್ಲಿ ನಡೆಯಲಿದ್ದು, ಸಮಾರಂಭದ ಬೃಹತ್ ವೇದಿಕೆಗೆ ಸಚಿವ ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ಕುರುಬರ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಆಗ್ರಹಿಸಿ ಕುರುಬರ ಎಸ್​ಟಿ ಹೋರಾಟ ಸಮಿತಿ ಕನಕದಾಸರ ಕರ್ಮಭೂಮಿ ಕಾಗಿನೆಲೆಯಿಂದ ಪ್ರಾರಂಭವಾಗಿರುವ ಪಾದಯಾತ್ರೆ ಫೆಬ್ರವರಿ 7 ರಂದು ಮುಕ್ತಾಯವಾಗಲಿದೆ. ಅಂದು ತುಮಕೂರು ರಸ್ತೆಯ ನೈಸ್ ಜಂಕ್ಷನ್ ಬಳಿಯ ಮಾದವಾರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಬೃಹತ್ ವೇದಿಕೆಯ ನಿರ್ಮಾಣ ಕಾರ್ಯಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ನೆಲಮಂಗಲ: ಕುರುಬರ ಎಸ್​ಟಿ ಮೀಸಲಾತಿ ಹೋರಾಟ ಸಮಿತಿಯ ಸಮಾರೋಪ ಸಮಾರಂಭ ಫೆಬ್ರವರಿ 7ರಂದು ಮಾದವಾರದ ಬಿಇಒಸಿಯಲ್ಲಿ ನಡೆಯಲಿದ್ದು, ಸಮಾರಂಭದ ಬೃಹತ್ ವೇದಿಕೆಗೆ ಸಚಿವ ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ಕುರುಬರ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಆಗ್ರಹಿಸಿ ಕುರುಬರ ಎಸ್​ಟಿ ಹೋರಾಟ ಸಮಿತಿ ಕನಕದಾಸರ ಕರ್ಮಭೂಮಿ ಕಾಗಿನೆಲೆಯಿಂದ ಪ್ರಾರಂಭವಾಗಿರುವ ಪಾದಯಾತ್ರೆ ಫೆಬ್ರವರಿ 7 ರಂದು ಮುಕ್ತಾಯವಾಗಲಿದೆ. ಅಂದು ತುಮಕೂರು ರಸ್ತೆಯ ನೈಸ್ ಜಂಕ್ಷನ್ ಬಳಿಯ ಮಾದವಾರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಬೃಹತ್ ವೇದಿಕೆಯ ನಿರ್ಮಾಣ ಕಾರ್ಯಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.