ETV Bharat / state

ನೆಲಮಂಗಲ : ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು - ಹತ್ತುಕುಂಟೆಪಾಳ್ಯ ಕಾಲೋನಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ, ನೆಲಮಂಗಲದ ಹತ್ತುಕುಂಟೆಪಾಳ್ಯ ಕಾಲೋನಿಯಲ್ಲಿ ನಡೆದಿದೆ.

student death in nelamangala
ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು
author img

By

Published : May 18, 2020, 9:34 PM IST

ನೆಲಮಂಗಲ (ಬೆ.ಗ್ರಾಮಾಂತರ): ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ, ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಹತ್ತುಕುಂಟೆಪಾಳ್ಯ ಕಾಲೋನಿಯ ಪುರುಷೋತ್ತಮ ಬಿನ್ ನಾಗರಾಜು (14 ) ಹಾಗೂ ನಾಗೇಶ ಬಿನ್ ನರೇಶ್ (17), ಮೃತ ವಿದ್ಯಾರ್ಥಿಗಳಾಗಿದ್ದಾರೆ.

ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಇನ್ನು ಪುರುಷೋತ್ತಮ 10ನೇ ತರಗತಿ ಹಾಗೂ ನಾಗೇಶ್ ಐಟಿಐ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಕಾರಣ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದಾರೆ. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ (ಬೆ.ಗ್ರಾಮಾಂತರ): ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ, ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಹತ್ತುಕುಂಟೆಪಾಳ್ಯ ಕಾಲೋನಿಯ ಪುರುಷೋತ್ತಮ ಬಿನ್ ನಾಗರಾಜು (14 ) ಹಾಗೂ ನಾಗೇಶ ಬಿನ್ ನರೇಶ್ (17), ಮೃತ ವಿದ್ಯಾರ್ಥಿಗಳಾಗಿದ್ದಾರೆ.

ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಇನ್ನು ಪುರುಷೋತ್ತಮ 10ನೇ ತರಗತಿ ಹಾಗೂ ನಾಗೇಶ್ ಐಟಿಐ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಕಾರಣ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದಾರೆ. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.