ಆನೇಕಲ್: ಬಲಿಷ್ಠ ದೇಶಕ್ಕಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಅಗತ್ಯವಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.
ಇಂದು ಬೆಳಗ್ಗೆ ನಗರದ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಬಿಡುಗಡೆಗೊಳಿಸಿರುವ ಪ್ರಣಾಳಿಕೆ ದೇಶದ್ರೋಹದಿಂದ ಕೂಡಿದೆ. ನಕ್ಸಲರಿಗೆ ಪ್ರಾತಿನಿಧ್ಯ ನೀಡಲು ದೇಶದ್ರೋಹದ ಕಾಯ್ದೆಯನ್ನೇ ತೆಗೆಯಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ಕಾರ್ಯಕರ್ತರು ಮೋದಿಯನ್ನು ಮತ್ತೆ ಪ್ರಧಾನಿಯಾಗಿಸಲು ಪಣ ತೊಡಬೇಕು ಎಂದು ತೇಜಸ್ವಿ ಸೂರ್ಯ ಕರೆ ನೀಡಿದರು.