ETV Bharat / state

ದೊಡ್ಡಬಳ್ಳಾಪುರ: ದೇವಸ್ಥಾನಗಳ ಹುಂಡಿಗೆ ಕನ್ನ; ನಾಣ್ಯಗಳನ್ನು ಬಿಟ್ಟು ಹೋದ ಕಳ್ಳರು

author img

By ETV Bharat Karnataka Team

Published : Aug 22, 2023, 9:52 PM IST

Updated : Aug 22, 2023, 11:10 PM IST

ಮಾರಮ್ಮ ಮತ್ತು ಆಂಜನೇಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಹುಂಡಿ ಹಣ ಮತ್ತು ಚಿನ್ನದ ತಾಳಿ ಕದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

Etv Bharat
Etv Bharat

ದೊಡ್ಡಬಳ್ಳಾಪುರ: ದೇವಸ್ಥಾನಗಳ ಹುಂಡಿಗೆ ಕನ್ನ; ನಾಣ್ಯಗಳನ್ನು ಬಿಟ್ಟು ಹೋದ ಕಳ್ಳರು

ದೊಡ್ಡಬಳ್ಳಾಪುರ ( ಬೆಂಗಳೂರು ಗ್ರಾ.) : ದುಷ್ಕರ್ಮಿಗಳು ಎರಡು ದೇವಸ್ಥಾನಗಳ ಹುಂಡಿ ಹಣ ಮತ್ತು ದೇವರ ಚಿನ್ನದ ತಾಳಿಯನ್ನು ಕದ್ದೊಯ್ದಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ಮಾರಮ್ಮ ಹಾಗೂ ಆಂಜನೇಯ ದೇವಸ್ಥಾನದಲ್ಲಿ ಕಳವು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಹುಂಡಿಯಲ್ಲಿದ್ದ ಸುಮಾರು 50 ಸಾವಿರ ರೂ ಹಣವನ್ನು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ. ಆದರೆ 3,600 ರೂ ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಕಳೆದ ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಕಳ್ಳರು ಮಾರಮ್ಮ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿದ್ದಾರೆ. ದೇವರ ಕೊರಳಿನಲ್ಲಿದ್ದ 8 ಚಿನ್ನದ ತಾಳಿಗಳು, ಬೆಳ್ಳಿ ಆಭರಣಗಳು ಹಾಗೂ ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಮರುದಿನ ಸಂಜೆ ದೇವಸ್ಥಾನದ ಪೂಜಾರಿ ದೇವಸ್ಥಾನ ಸ್ವಚ್ಛಗೊಳಿಸಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 5 ವರ್ಷಗಳಿಂದ ಹುಂಡಿ ಹಣ ತೆಗೆದಿರಲಿಲ್ಲ, ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾರಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ ನಂತರ ಹಿಂಭಾಗದಲ್ಲಿರುವ ಆಂಜನೇಯ ದೇವಸ್ಥಾನದ ಹುಂಡಿಗೂ ಕನ್ನ ಹಾಕಿದ್ದಾರೆ. ಬಳಿಕ ಹುಂಡಿಯನ್ನು ಗ್ರಾಮದ ಹೊರಗಿನ ನೀಲಗಿರಿ ತೋಪಿನಲ್ಲಿ ಎಸೆದು ಕಾಲ್ಕಿತ್ತಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ದೇವಸ್ಥಾನದ ಅರ್ಚಕ ರಘು, ದೇವಸ್ಥಾನವನ್ನು ಸ್ವಚ್ಚಗೊಳಿಸಲು ಆಗಮಿಸಿದಾಗ ಬೀಗ ತೆರೆದಿತ್ತು. ಬೀಗವನ್ನು ಪಕ್ಕದಲ್ಲಿದ್ದ ಲೈಟ್​ ಕಂಬದ ಬಳಿ ಬಿಸಾಡಿದ್ದರು. ದೇವಸ್ಥಾನದೊಳಗೆ ಬಂದು ನೋಡಿದಾಗ ದೇವರ ತಾಳಿ, ಆಭರಣಗಳು ಮತ್ತು ಹುಂಡಿ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ನಾವು ದೇವಸ್ಥಾನದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸ್​ ಠಾಣೆಗೆ ದೂರು ನೀಡಿದ್ದೇವೆ ಎಂದು ಹೇಳಿದರು. ದೇವರ 8 ಮಾಂಗಲ್ಯ ಸರ ಕಳವಾಗಿದೆ. ಹುಂಡಿಯಲ್ಲಿದ್ದ ಹಣ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಿದರು.

ಕಳ್ಳರ ಚಲನವಲನ ಇಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರು: ಮಕ್ಕಳ ಸ್ಟೋರಿ ಬುಕ್​ನಲ್ಲಿ ಕೊಕೇನ್ ಕಳ್ಳಸಾಗಣೆ; ₹15 ಕೋಟಿ ಮೌಲ್ಯದ ಮಾಲು ಜಪ್ತಿ

ದೊಡ್ಡಬಳ್ಳಾಪುರ: ದೇವಸ್ಥಾನಗಳ ಹುಂಡಿಗೆ ಕನ್ನ; ನಾಣ್ಯಗಳನ್ನು ಬಿಟ್ಟು ಹೋದ ಕಳ್ಳರು

ದೊಡ್ಡಬಳ್ಳಾಪುರ ( ಬೆಂಗಳೂರು ಗ್ರಾ.) : ದುಷ್ಕರ್ಮಿಗಳು ಎರಡು ದೇವಸ್ಥಾನಗಳ ಹುಂಡಿ ಹಣ ಮತ್ತು ದೇವರ ಚಿನ್ನದ ತಾಳಿಯನ್ನು ಕದ್ದೊಯ್ದಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ಮಾರಮ್ಮ ಹಾಗೂ ಆಂಜನೇಯ ದೇವಸ್ಥಾನದಲ್ಲಿ ಕಳವು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಹುಂಡಿಯಲ್ಲಿದ್ದ ಸುಮಾರು 50 ಸಾವಿರ ರೂ ಹಣವನ್ನು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ. ಆದರೆ 3,600 ರೂ ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಕಳೆದ ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಕಳ್ಳರು ಮಾರಮ್ಮ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿದ್ದಾರೆ. ದೇವರ ಕೊರಳಿನಲ್ಲಿದ್ದ 8 ಚಿನ್ನದ ತಾಳಿಗಳು, ಬೆಳ್ಳಿ ಆಭರಣಗಳು ಹಾಗೂ ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಮರುದಿನ ಸಂಜೆ ದೇವಸ್ಥಾನದ ಪೂಜಾರಿ ದೇವಸ್ಥಾನ ಸ್ವಚ್ಛಗೊಳಿಸಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 5 ವರ್ಷಗಳಿಂದ ಹುಂಡಿ ಹಣ ತೆಗೆದಿರಲಿಲ್ಲ, ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾರಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ ನಂತರ ಹಿಂಭಾಗದಲ್ಲಿರುವ ಆಂಜನೇಯ ದೇವಸ್ಥಾನದ ಹುಂಡಿಗೂ ಕನ್ನ ಹಾಕಿದ್ದಾರೆ. ಬಳಿಕ ಹುಂಡಿಯನ್ನು ಗ್ರಾಮದ ಹೊರಗಿನ ನೀಲಗಿರಿ ತೋಪಿನಲ್ಲಿ ಎಸೆದು ಕಾಲ್ಕಿತ್ತಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ದೇವಸ್ಥಾನದ ಅರ್ಚಕ ರಘು, ದೇವಸ್ಥಾನವನ್ನು ಸ್ವಚ್ಚಗೊಳಿಸಲು ಆಗಮಿಸಿದಾಗ ಬೀಗ ತೆರೆದಿತ್ತು. ಬೀಗವನ್ನು ಪಕ್ಕದಲ್ಲಿದ್ದ ಲೈಟ್​ ಕಂಬದ ಬಳಿ ಬಿಸಾಡಿದ್ದರು. ದೇವಸ್ಥಾನದೊಳಗೆ ಬಂದು ನೋಡಿದಾಗ ದೇವರ ತಾಳಿ, ಆಭರಣಗಳು ಮತ್ತು ಹುಂಡಿ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ನಾವು ದೇವಸ್ಥಾನದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸ್​ ಠಾಣೆಗೆ ದೂರು ನೀಡಿದ್ದೇವೆ ಎಂದು ಹೇಳಿದರು. ದೇವರ 8 ಮಾಂಗಲ್ಯ ಸರ ಕಳವಾಗಿದೆ. ಹುಂಡಿಯಲ್ಲಿದ್ದ ಹಣ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಿದರು.

ಕಳ್ಳರ ಚಲನವಲನ ಇಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರು: ಮಕ್ಕಳ ಸ್ಟೋರಿ ಬುಕ್​ನಲ್ಲಿ ಕೊಕೇನ್ ಕಳ್ಳಸಾಗಣೆ; ₹15 ಕೋಟಿ ಮೌಲ್ಯದ ಮಾಲು ಜಪ್ತಿ

Last Updated : Aug 22, 2023, 11:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.