ETV Bharat / state

ಮದ್ಯದಂಗಡಿಯಿಂದ ವಾಪಸ್ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ 7 ಲಕ್ಷ ಮೌಲ್ಯದ ಚಿನ್ನ ಮಾಯ

author img

By

Published : Jul 23, 2021, 6:35 PM IST

ಬೆಂಗಳೂರು ಉತ್ತರ ತಾಲೂಕಿನ ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಮದ್ಯದ ಅಂಗಡಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಸ್ಕೂಟರ್​​ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಸ್ಕೂಟಿಯಲ್ಲಿದ್ದ ಚಿನ್ನಾಭರಣ ಕದ್ದು ದುಷ್ಕರ್ಮಿಗಳು ಪರಾರಿ
Thieves theft jewellery in Nelamangala

ನೆಲಮಂಗಲ: ಬ್ಯಾಂಕ್​​ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬರುವಾಗ ವ್ಯಕ್ತಿಯೋರ್ವ ಮದ್ಯದ ಆಸೆಗೆ ವೈನ್​​​ಶಾಪ್ ಬಳಿ ಸ್ಕೂಟರ್ ನಿಲ್ಲಿಸಿ ಖರೀದಿಗಾಗಿ ಒಳಗೆ ಹೋಗಿದ್ದಾರೆ. ಈ ಸಮಯದಲ್ಲಿ ದುಷ್ಕರ್ಮಿಗಳು ಸ್ಕೂಟರ್‌ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾದರು.

ಹಣ ಕಳೆದುಕೊಂಡ ವ್ಯಕ್ತಿ

ಬೆಂಗಳೂರು ಉತ್ತರ ತಾಲೂಕಿನ ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ಮಹೇಶ್​ ಎಂಬುವವರು ಹಣದ ಸಮಸ್ಯೆಯಿಂದ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲ ಬ್ಯಾಂಕ್‌ನಲ್ಲಿ ಒತ್ತೆ ಇಟ್ಟಿದ್ದರು. ಇಂದು ಒಡವೆಗಳನ್ನು ಬ್ಯಾಂಕ್​​ನಿಂದ ಬಿಡಿಸಿಕೊಂಡು ಬರುತ್ತಿದ್ದರು.

ಇವರನ್ನೇ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ವೈನ್​​​ಶಾಪ್ ಬಳಿ ನಿಲ್ಲಿಸಿದ್ದ ವಾಹನದ ಡಿಕ್ಕಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ನಗದು, 3 ಚಿನ್ನದ ಚೈನ್, ಒಂದು ಜೊತೆ ಬಳೆ, ಕೈ ಚೈನ್​​, ಲಾಂಗ್ ಚೈನ್ ಸೇರಿದಂತೆ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗಿದ್ದಾರೆ.

ಸದ್ಯ ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಬೆನ್ನತ್ತಿದ್ದಾರೆ.

ಇದನ್ನೂ ಓದಿ: ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಪ್ರವಾಹಕ್ಕೆ ಸಿಲುಕಿದ ಮಹಿಳೆ.. ಎದೆ ಝಲ್​ ಎನ್ನುವ ದೃಶ್ಯ ವೈರಲ್..

ನೆಲಮಂಗಲ: ಬ್ಯಾಂಕ್​​ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬರುವಾಗ ವ್ಯಕ್ತಿಯೋರ್ವ ಮದ್ಯದ ಆಸೆಗೆ ವೈನ್​​​ಶಾಪ್ ಬಳಿ ಸ್ಕೂಟರ್ ನಿಲ್ಲಿಸಿ ಖರೀದಿಗಾಗಿ ಒಳಗೆ ಹೋಗಿದ್ದಾರೆ. ಈ ಸಮಯದಲ್ಲಿ ದುಷ್ಕರ್ಮಿಗಳು ಸ್ಕೂಟರ್‌ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾದರು.

ಹಣ ಕಳೆದುಕೊಂಡ ವ್ಯಕ್ತಿ

ಬೆಂಗಳೂರು ಉತ್ತರ ತಾಲೂಕಿನ ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ಮಹೇಶ್​ ಎಂಬುವವರು ಹಣದ ಸಮಸ್ಯೆಯಿಂದ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲ ಬ್ಯಾಂಕ್‌ನಲ್ಲಿ ಒತ್ತೆ ಇಟ್ಟಿದ್ದರು. ಇಂದು ಒಡವೆಗಳನ್ನು ಬ್ಯಾಂಕ್​​ನಿಂದ ಬಿಡಿಸಿಕೊಂಡು ಬರುತ್ತಿದ್ದರು.

ಇವರನ್ನೇ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ವೈನ್​​​ಶಾಪ್ ಬಳಿ ನಿಲ್ಲಿಸಿದ್ದ ವಾಹನದ ಡಿಕ್ಕಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ನಗದು, 3 ಚಿನ್ನದ ಚೈನ್, ಒಂದು ಜೊತೆ ಬಳೆ, ಕೈ ಚೈನ್​​, ಲಾಂಗ್ ಚೈನ್ ಸೇರಿದಂತೆ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗಿದ್ದಾರೆ.

ಸದ್ಯ ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಬೆನ್ನತ್ತಿದ್ದಾರೆ.

ಇದನ್ನೂ ಓದಿ: ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಪ್ರವಾಹಕ್ಕೆ ಸಿಲುಕಿದ ಮಹಿಳೆ.. ಎದೆ ಝಲ್​ ಎನ್ನುವ ದೃಶ್ಯ ವೈರಲ್..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.