ETV Bharat / state

ದೇವನಹಳ್ಳಿ ಬಳಿ ಕಾರು ಪಲ್ಟಿ: ನಾಲ್ವರ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

author img

By

Published : Jun 26, 2019, 7:06 PM IST

Updated : Jun 26, 2019, 9:26 PM IST

ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಇನ್ನೋವಾ ಕಾರು ರಸ್ತೆ ಪಕ್ಕದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ರಾಷ್ಟ್ರಿಯ ಹೆದ್ದಾರಿ 7 ರ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.

ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮೃತರನ್ನು ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ (32) , ಪಲ್ಸರ್ ಬೈಕ್ ಸವಾರ ಗುಡಿಬಂಡೆ ಠಾಣೆಯ ರೈಟರ್ ಶಶಿಕುಮಾರ್ (35) ಹಾಗೂ ಒಂದು ವರ್ಷದ ಮಗು ಅಂತ ಗುರುತಿಸಲಾಗಿದೆ. ಕಾರ್​ನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಯಲ್ಲಿ ಬೀಗರ ಊಟಕ್ಕಾಗಿ ಬಂದಿದ್ದರು. ಊಟ ಮುಗಿಸಿಕೊಂಡು ವಾಪಸ್ಸು ತೆರಳುವ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಈ ದುರ್ಘಟನೆಗೆ ಬೈಕ್ ಸವಾರನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಏರ್ಪೋಟ್​ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಐಎಎಲ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ಇನ್ನೋವಾ ಕಾರು ರಸ್ತೆ ಪಕ್ಕದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ರಾಷ್ಟ್ರಿಯ ಹೆದ್ದಾರಿ 7 ರ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.

ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮೃತರನ್ನು ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ (32) , ಪಲ್ಸರ್ ಬೈಕ್ ಸವಾರ ಗುಡಿಬಂಡೆ ಠಾಣೆಯ ರೈಟರ್ ಶಶಿಕುಮಾರ್ (35) ಹಾಗೂ ಒಂದು ವರ್ಷದ ಮಗು ಅಂತ ಗುರುತಿಸಲಾಗಿದೆ. ಕಾರ್​ನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಯಲ್ಲಿ ಬೀಗರ ಊಟಕ್ಕಾಗಿ ಬಂದಿದ್ದರು. ಊಟ ಮುಗಿಸಿಕೊಂಡು ವಾಪಸ್ಸು ತೆರಳುವ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಈ ದುರ್ಘಟನೆಗೆ ಬೈಕ್ ಸವಾರನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಏರ್ಪೋಟ್​ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಐಎಎಲ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Intro:KN_BNG_02_26_accident_Ambarish_7203301
Slug: ಬೈಕ್ ತಪ್ಪಿಸಲು ಹೋಗಿ ಪಲ್ಟಿ ಹೊಡೆದ ಕಾರು: ಮೂವರ ಸಾವು

ಬೆಂಗಳೂರು: ಬೈಕ್ ತಪ್ಪಿಸಲು ಹೋಗಿ ಹೆದ್ದಾರಿಯಲ್ಲಿ ಇನ್ನೂವಾ ಕಾರು ಪಲ್ಟಿಯಾಗಿದ್ದು, ಇನ್ನೂವಾ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.. ಬೆಂಗಳೂರು ಹೈದರಾಬಾದ್ ರಾಷ್ಟ್ರಿಯಾ ಹೆದ್ದಾರಿ 7 ರಲ್ಲಿ ವೇಗವಾಗಿ ಬರುತ್ತಿದ್ದ KA 53 N 6789 ಸಂಖ್ಯೆಯೆ ಇನ್ನೂವಾ ಕಾರಿಗೆ ಅಡ್ಡ ಬಂದ KA 40 EB 3963 ಸಂಖ್ಯೆಯೆ ಪಲ್ಸರ್ ಬೈಕ್ ಅನ್ನು ತಪ್ಪಿಸಲು ಹೋಗಿ ಈ ಅವಘಡ ನಡೆದಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಏರ್ಪೋಟ್ ಸಂಚಾರಿ ಪೊಲೀಸರು ಬೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.. Body:NoConclusion:No
Last Updated : Jun 26, 2019, 9:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.