ನೆಲಮಂಗಲ (ಬೆಂಗಳೂರು ಗ್ರಾಮಾಂತರ): ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಿಂದ ತುಮಕೂರು-ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬೆಂಗಳೂರು ಹೊರವಲಯದ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 4ರ ತಾಳೆಕೆರೆ ಬಳಿ ಎರಡು ಲಾರಿ ಹಾಗೂ ಒಂದು ಕಾರಿನ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಸರಣಿ ಅಪಘಾತದಿಂದ ಬೆಳಗ್ಗೆ ಕೆಲಸಕ್ಕೆ ತೆರಳಬೇಕಿದ್ದ ಸವಾರರು, ಗಂಟೆಗಟ್ಟಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಕಿರಿಕಿರಿ ಅನುಭವಿಸುವಂತಾಯಿತು.
ಎರಡೂ ಬದಿಯಲ್ಲಿ ಸುಮಾರು 5 ರಿಂದ 6 ಕಿ.ಮೀ ಟ್ರಾಫಿಕ್ ಜಾಮ್ ಆದ ಕಾರಣ ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಪೊಲೀಸರು ಹರಸಾಹಸ ಪಟ್ಟರು. ಬಳಿಕ ಕ್ರೇನ್ಗಳ ಮೂಲಕ ವಾಹನಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಓದಿ: ಅನಾಥ ಮಕ್ಕಳು, ವೃದ್ಧರೊಂದಿಗೆ ಪುನೀತ್ ರಾಜಕುಮಾರ ಜನ್ಮದಿನ ಆಚರಿಸಿದ ಅಪ್ಪು ಫ್ಯಾನ್ಸ್