ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಕಿತ್ತನಗಳ್ಳಿ ಬಳಿ ಬೈಕ್ ಸವಾರರಿಬ್ಬರ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದಲ್ಲಿ ತಾರಕೇಶ್ (29) ಎಂಬಾತ ಸಾವನ್ನಪ್ಪಿದ್ದಾನೆ. ಮತ್ತೊಂದು ಬೈಕ್ನಲ್ಲಿದ್ದವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.