ETV Bharat / state

ಕಾರ್ಖಾನೆಯ ಅಕ್ರಮ ಬೋರ್​ವೆಲ್​​ ವಿರುದ್ಧ ಗ್ರಾಮಸ್ಥರ ಆಕ್ರೋಶ - ನೆಲಮಂಗಲ ತಾಲೂಕಿನ ಅವೇರಹಳ್ಳಿ

ನೆಲಮಂಗಲ ತಾಲೂಕಿನ ಅವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯವರು ಅಕ್ರಮ ಬೋರ್​​ವೆಲ್​ ಕೊರೆಸಲು ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಕೈಗಾರಿಕಾ ಪ್ರದೇಶ ಇದಾಗಿದ್ದು, ಅಲ್ಲಿನ ಅನುಮತಿ ಪಡೆಯಬೇಕು ಎಂಬುದು ಗ್ರಾಮಸ್ಥರ ದೂರು.

ಕಾರ್ಖಾನೆಯ ಅಕ್ರಮ ಬೋರ್​ವೆಲ್ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು
author img

By

Published : Jul 27, 2019, 9:34 PM IST

ನೆಲಮಂಗಲ: ತಾಲೂಕಿನ ಅವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಕಾರ್ಖಾನೆಯವರು ಅಕ್ರಮವಾಗಿ ಬೋರ್​ವೆಲ್​ ಕೊರೆಸಲು ಮುಂದಾಗಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕಾರ್ಖಾನೆಯ ಅಕ್ರಮ ಬೋರ್​ವೆಲ್ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು

ದಾಬಸ್ ಪೇಟೆ ಕೈಗಾರಿಕಾ ಪ್ರದೇಶಕ್ಕೆ ಹೇಮಾವತಿ ನದಿ ನೀರು ಕೊಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಇದೇ ಕಾರಣಕ್ಕೆ ಅವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಫಾಪನೆಗೆ ಮಾಲೀಕರು ಮುಂದಾಗಿದ್ದಾರೆ. ಆದರೆ, ಕಾರ್ಖಾನೆ ಮಾಲೀಕರು ಹೇಮಾವತಿ ನದಿ ನೀರನ್ನು ಕಾಯುವ ಬದಲಿಗೆ, ತಾವೇ ಕಾರ್ಖಾನೆಯ ಅವರಣದಲ್ಲಿ ಬೋರ್​​ವೆಲ್​​​​ ಕೊರೆಸುವುದಕ್ಕೆ ಮುಂದಾಗಿದ್ದರು.

ಬೆಂಗಳೂರಿನ ರಾಜಾಜಿನಗರ ಮೂಲದ ಎಸ್‍ಎಂಸಿ ಎಂಟರ್ ಪ್ರೈಸಸ್ ಅಂಡ್ ಬಿಲ್ಡರ್ಸ್ ಮಾಲೀಕ ಗೋಪಿನಾಥ್ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ನೆಲಮಂಗಲ: ತಾಲೂಕಿನ ಅವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಕಾರ್ಖಾನೆಯವರು ಅಕ್ರಮವಾಗಿ ಬೋರ್​ವೆಲ್​ ಕೊರೆಸಲು ಮುಂದಾಗಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕಾರ್ಖಾನೆಯ ಅಕ್ರಮ ಬೋರ್​ವೆಲ್ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು

ದಾಬಸ್ ಪೇಟೆ ಕೈಗಾರಿಕಾ ಪ್ರದೇಶಕ್ಕೆ ಹೇಮಾವತಿ ನದಿ ನೀರು ಕೊಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಇದೇ ಕಾರಣಕ್ಕೆ ಅವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಫಾಪನೆಗೆ ಮಾಲೀಕರು ಮುಂದಾಗಿದ್ದಾರೆ. ಆದರೆ, ಕಾರ್ಖಾನೆ ಮಾಲೀಕರು ಹೇಮಾವತಿ ನದಿ ನೀರನ್ನು ಕಾಯುವ ಬದಲಿಗೆ, ತಾವೇ ಕಾರ್ಖಾನೆಯ ಅವರಣದಲ್ಲಿ ಬೋರ್​​ವೆಲ್​​​​ ಕೊರೆಸುವುದಕ್ಕೆ ಮುಂದಾಗಿದ್ದರು.

ಬೆಂಗಳೂರಿನ ರಾಜಾಜಿನಗರ ಮೂಲದ ಎಸ್‍ಎಂಸಿ ಎಂಟರ್ ಪ್ರೈಸಸ್ ಅಂಡ್ ಬಿಲ್ಡರ್ಸ್ ಮಾಲೀಕ ಗೋಪಿನಾಥ್ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

Intro:ಗ್ರಾಮಸ್ಥರ ನೀರಿಗೆ ಕನ್ನ ಹಾಕುತ್ತಿರುವ ಕಾರ್ಖಾನೆಗಳು
ಅಕ್ರಮವಾಗಿ ಕೈಗಾರಿಕಾ ಪ್ರದೇಶದಲ್ಲಿ ಬೋರ್ ವೇಲ್
ಬೋರ್ ವೇಲ್ ಕೊರೆಯುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
Body:ನೆಲಮಂಗಲ : ತಾಲೂಕಿನ ಡಾಬಸ್‍ಪೇಟೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ 3 ಹಂತಗಳಲ್ಲಿ ಕೈಗಾರಿಕಾ ಅಭಿವೃದ್ದಿಯಾಗುತ್ತಿದೆ ಈಗ 4ನೇ ಹಂತವಾಗಿ ಅವೇರಹಳ್ಳಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿದೆ. ಅದರೆ ಈ ಕೈಗಾರಿಕಾ ಪ್ರದೇಶದಲ್ಲಿನ ಸ್ಫಾಪನೆಯಾಗುತ್ತಿರುವ ಕೈಗಾರಿಕೆಗಳು ಗ್ರಾಮಸ್ಥರು ನೀರಿಗೆ ಕನ್ನ ಹಾಕುತ್ತಿದ್ದಾರೆ. ಅಕ್ರಮವಾಗಿ ಬೋರ್ ವೇಲ್ ಕೊರೆಯುವುದಕ್ಕೆ ಮುಂದಾಗಿರುವ ಕಾರ್ಖಾನೆಗಳ ವಿರುದ್ಧ ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ದಾಬಸ್ ಪೇಟೆ ಕೈಗಾರಿಕಾ ಪ್ರದೇಶಕ್ಕೆ ಹೇಮಾವತಿ ನದಿ ನೀರು ಕೊಡುವು ಭರವಸೆಯನ್ನು ಸರ್ಕಾರ ನೀಡಿತ್ತು. ಇದೇ ಕಾರಕ್ಕೆ ಅವೇರಹಳ್ಳಿ ಕೈಗಾರಿಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಫಾಪನೆಗೆ ಮಾಲೀಕರು ಮುಂದಾಗಿದ್ದಾರೆ. ಅದರೆ ಕಾರ್ಖಾನೆ ಮಾಲೀಕರು ಹೇಮಾವತಿ ನದಿ ನೀರನ್ನು ಕಾಯುವ ಬದಲಿಗೆ ತಾವೇ ಕಾರ್ಖಾನೆಯ ಅವರಣದಲ್ಲಿ ಬೋರ್ ವೇಲ್ ಕೊರೆಯುವುದಕ್ಕೆ ಮುಂದಾಗಿದ್ದಾರೆ. ಬೋರ್ ವೇಲ್ ಕೊರೆಯ ಬೇಕಾದ್ರೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಅನುಮತಿಯನ್ನು ಪಡೆಯ ಬೇಕು ಅದರೆ ಇದ್ಯಾವುದನ್ನು ಪಡೆಯದ ಬೆಂಗಳೂರಿನ ರಾಜಾಜಿನಗರ ಮೂಲದ ಎಸ್‍ಎಂಸಿ ಎಂಟರ್ ಪ್ರೈಸಸ್ ಆಂಡ್ ಬಿಲ್ಡರ್ಸ್ ಮಾಲೀಕ ಗೋಪಿನಾಥ್ ಸರ್ಕಾರಿ ನಿಯಮ ಗಾಳಿಗೆ ತೂರಿ ಬೋರ್ ವೇಲ್ ಕೊರೆಯಲು ಮುಂದಾಗಿದ್ದಾ. ಇದಕ್ಕೆ ವಿರೋಧ ವ್ಯಕ್ತಪಡಸಿದ ಹೊನ್ನೇನಹಳ್ಳಿ ಗ್ರಾಮಸ್ಥರು ಬೋರ್ ವೇಲ್ ಕೊರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ತಡೆಯಲು ಬಂದ ಗ್ರಾಮಸ್ಥರಿಗೆ ಬೆದರಿಕೆ ಹಾಕುವ ಮೂಲಕ ಕಾರ್ಖಾನೆ ಮಾಲೀಕ ಗುಂಡಾವರ್ತನೆ ತೋರಿಸಿದ್ದಾನೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.
ಅಂದಹಾಗೇ, ಯಾವುದೇ ಬೋರ್ ವೇಲ್ ಕೈಗಾರಿಕಾ ಪ್ರದೇಶದಲ್ಲಿ ಕೊರೆಯ ಬೇಕಾದ್ರೆ ಪಂಚಾಯತ್ ಬೋರ್ ವೇಲ್ ನಿಂದ 300 ಮೀಟರ್ ಅಂತರ ಇರ್ಬೇಕು. ಅದರೆ ಎಸ್ ಎಂಸಿ ಎಂಟರ್ ಪ್ರೈಸಸ್ ಅಂಡ್ ಬಿಲ್ಡರ್ಸ್ ಕೊರೆಯುತ್ತಿರುವ ಬೋರ್ ವೇಲ್ ಹೊನ್ನೇನಹಳ್ಳಿಯ ಜನರಿಗೆ ನೀರು ಸರಬರಾಜು ಮಾಡುವ ಬೋರ್ ವೇಲ್ ಗೆ 200 ಮೀಟರ್ ಅಂತರದಲ್ಲಿದೆ. ಗ್ರಾಮಸ್ಥರ ನೀರಿಗೆ ಗಂಡಾತರ ತಂದಿದ್ದ ಕಾರ್ಖಾನೆ ವಿರುದ್ಧ ಗ್ರಾಮಸ್ಥರು ಅಕ್ರೋಶ ವ್ಯಕ್ತ ಪಡಿಸಿದರು. ಕೊರೆಯಲು ಬಂದಿರುವ ಬೋರ್ ವೇಲ್ ಗಳನ್ನು ಸರ್ಕಾರ ವಶಕ್ಕೆ ತಗೊಂಡು ಕಾರ್ಖಾನೆ ಮಾಲೀಕರಿಗೆ ತಕ್ಕ ಪಾಠ ಕಲಿಸಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.