ETV Bharat / state

ದೊಡ್ಡಬಳ್ಳಾಪುರ: ಮಳೆಗೆ ತುಂಬಿದ ವಿಶ್ವೇಶ್ವರಯ್ಯ ಪಿಕಪ್​​ ಡ್ಯಾಂ

ಕಳೆದ ಮೂರು ದಿನಗಳಿಂದ ದೊಡ್ಡಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ತುಂಬಿದೆ.

author img

By

Published : Jul 5, 2021, 9:29 PM IST

Visverayya pickup dam
ವಿಶ್ವೇಶ್ವರಯ್ಯ ಪಿಕಪ್​​ ಡ್ಯಾಂ

ದೊಡ್ಡಬಳ್ಳಾಪುರ: ಕಳೆದ ಮೂರು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ತುಂಬಿದೆ. ಜಲಪಾತದ ಸೌಂದರ್ಯವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಮಳೆಗೆ ತುಂಬಿದ ವಿಶ್ವೇಶ್ವರಯ್ಯ ಪಿಕಪ್​​ ಡ್ಯಾಂ

1917 ರಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಜಾಗದಲ್ಲಿ ಪಿಕಪ್ ಡ್ಯಾಂ ನಿರ್ಮಾಣ ಮಾಡಿದ್ದರು. ಆದರೆ ಸೂಕ್ತ ನಿರ್ವಹಣೆ ಇಲ್ಲದೆ ಡ್ಯಾಂ ಹಾಳಾಗಿತ್ತು. ಇತ್ತೀಚೆಗೆ 50 ಕೋಟಿ ವೆಚ್ಚದಲ್ಲಿ ಡ್ಯಾಂ ದುರಸ್ತಿ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಈ ವರ್ಷದಲ್ಲಿಯೇ ಮೊದಲ ಬಾರಿಗೆ ತುಂಬಿ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದು, ಸುತ್ತಮುತ್ತಲಿನ ಜನರು ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ದೊಡ್ಡಬಳ್ಳಾಪುರ: ಕಳೆದ ಮೂರು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ತುಂಬಿದೆ. ಜಲಪಾತದ ಸೌಂದರ್ಯವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಮಳೆಗೆ ತುಂಬಿದ ವಿಶ್ವೇಶ್ವರಯ್ಯ ಪಿಕಪ್​​ ಡ್ಯಾಂ

1917 ರಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಜಾಗದಲ್ಲಿ ಪಿಕಪ್ ಡ್ಯಾಂ ನಿರ್ಮಾಣ ಮಾಡಿದ್ದರು. ಆದರೆ ಸೂಕ್ತ ನಿರ್ವಹಣೆ ಇಲ್ಲದೆ ಡ್ಯಾಂ ಹಾಳಾಗಿತ್ತು. ಇತ್ತೀಚೆಗೆ 50 ಕೋಟಿ ವೆಚ್ಚದಲ್ಲಿ ಡ್ಯಾಂ ದುರಸ್ತಿ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಈ ವರ್ಷದಲ್ಲಿಯೇ ಮೊದಲ ಬಾರಿಗೆ ತುಂಬಿ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದು, ಸುತ್ತಮುತ್ತಲಿನ ಜನರು ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.