ಬೆಂಗಳೂರು: ಕ್ಯಾನ್ಫಿನ್ಹೋಮ್ಸ್ ಲಿಮಿಟೆಡ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಒಂದು ಕೋಟಿ ರೂ.ಗಳ ಚೆಕ್ ಅನ್ನು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾನ್ಫಿನ್ಹೋಮ್ಸ್ನ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಕೌಸ್ಗೆ, ಉಪ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಭಂಡಿವಾಡ ಹಾಗೂ ಉಪ ಮಹಾಪ್ರಬಂಧಕ ಅಜಯ್ ಕುಮಾರ್ ಶೆಟ್ಟರ್ ಉಪಸ್ಥಿತರಿದ್ದರು.