ETV Bharat / state

ಡಿಜಿಟಲ್ ಗ್ರಂಥಾಲಯ ಆ್ಯಪ್​ಗೆ 10 ಲಕ್ಷ ಪುಸ್ತಕಗಳ ಸೇರ್ಪಡೆ: ಸಚಿವ ಸುರೇಶ್ ಕುಮಾರ್

author img

By

Published : Nov 20, 2020, 5:33 PM IST

ಪುಸ್ತಕ ಸಂಸ್ಕೃತಿ ಬೆಳೆಸಲು ಬೆಂಗಳೂರಿನಲ್ಲಿ 205 ಮತ್ತು ರಾಜ್ಯದಲ್ಲಿ 7000ಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಇದು ರಾಷ್ಟ್ರೀಯ ದಾಖಲೆಯಾಗಿದೆ. ಡಿಜಿಟಲ್ ಗ್ರಂಥಾಲಯಕ್ಕೆ ಸುಮಾರು 7 ಲಕ್ಷ ಸದಸ್ಯರು ಚಂದಾದಾರರಾಗಿದ್ದಾರೆ..

ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಭಾಗವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಲೋಕಾರ್ಪಣೆಗೊಳಿಸಿದ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್​ನಲ್ಲಿ ಪ್ರಸ್ತುತ ಒಂದು ಲಕ್ಷ ಪುಸ್ತಕಗಳು ಲಭ್ಯವಿದೆ. ಇನ್ನು, 10 ಲಕ್ಷ ಪುಸ್ತಕಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜಾಜಿನಗರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಈ ಆ್ಯಪ್​ನ್ನು 7 ಲಕ್ಷಕ್ಕೂ ಹೆಚ್ಚು ಜನ ಬಳಸುತ್ತಿದ್ದಾರೆ. ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ಪಠ್ಯಪುಸ್ತಕ, ಸಾಮಾನ್ಯಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆಗಳು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತ ಲೇಖಕರ ಪುಸ್ತಕಗಳು ಹಾಗೆಯೇ ವಿಡಿಯೋಗಳು, ಇ-ಪುಸ್ತಕಗಳು ಸೇರಿದಂತೆ 10 ಲಕ್ಷ ಪುಸ್ತಕಗಳನ್ನು ಸೇರ್ಪಡೆಗೊಳಿಸಲು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ಮೂರು ತಿಂಗಳೊಳಗೆ 10 ಲಕ್ಷ ಪುಸ್ತಕಗಳು ಲಭ್ಯವಾಗಲಿವೆ ಎಂದರು.

ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಬೆರಳೆಣಿಕೆ ಸಂಖ್ಯೆಯ ಗ್ರಂಥಾಲಯಗಳಿವೆ ಎಂಬ ಮಾಹಿತಿ ಇದೆ. ಕರ್ನಾಟಕ ಗ್ರಂಥಾಲಯ ಇಲಾಖೆ ಇಡೀ ದೇಶದಲ್ಲೇ ಮಂಚೂಣಿಯಲ್ಲಿದೆ. ದೇಶದಲ್ಲಿಯೇ ಅತಿಹೆಚ್ಚು ಹಾಗೂ ಅತ್ಯುತ್ತಮ ಗ್ರಂಥಾಲಯಗಳನ್ನು ಹೊಂದಿರುವುದು ಕರ್ನಾಟಕ ಮಾತ್ರ.

ಪುಸ್ತಕ ಸಂಸ್ಕೃತಿ ಬೆಳೆಸಲು ಬೆಂಗಳೂರಿನಲ್ಲಿ 205 ಮತ್ತು ರಾಜ್ಯದಲ್ಲಿ 7000ಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಇದು ರಾಷ್ಟ್ರೀಯ ದಾಖಲೆಯಾಗಿದೆ. ಡಿಜಿಟಲ್ ಗ್ರಂಥಾಲಯಕ್ಕೆ ಸುಮಾರು 7 ಲಕ್ಷ ಸದಸ್ಯರು ಚಂದಾದಾರರಾಗಿದ್ದಾರೆ. ರಾಜ್ಯದ ಎಲ್ಲ ಗ್ರಾಮೀಣ ಗ್ರಂಥಾಲಯಗಳಿಗೆ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದ್ದು, ಈ ಕುರಿತು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನ 100 ಗ್ರಂಥಾಲಯಗಳ ಡಿಜಿಟಲೀಕರಣ: ಬೆಂಗಳೂರಿನಲ್ಲಿ 205 ಗ್ರಂಥಾಲಯಗಳಲ್ಲಿ 100 ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಈ ಗ್ರಂಥಾಲಯಗಳನ್ನು ತಂತ್ರಜ್ಞಾನದೊಂದಿಗೆ ಡಿಜಿಟಲೀಕರಣಗೊಳಿಸಿ ಇನ್ನು ನಾಲ್ಕು ತಿಂಗಳಲ್ಲಿ ತಂತ್ರಜ್ಞಾನದ ಸೇವೆ ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗುವುದು. ಈ ಡಿಜಿಟಲೀಕರಣ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ಕೈಗೊಂಡು ನಮ್ಮ ಓದುಗರಿಗೆ ಕೈಯಲ್ಲೇ ಪುಸ್ತಕಗಳು ದೊರೆಯುವಂತೆ ಮಾಡಲಾಗುವುದು ಎಂದರು.

ಶತಮಾನೋತ್ಸವ ಸ್ಮಾರಕ ಗ್ರಂಥಾಲಯ ಭವನ ನಿರ್ಮಾಣ: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್​ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಅಣ್ಣಾ ಸ್ಮಾರಕ ಗ್ರಂಥಾಲಯ ಭವನದಂತೆ ಬೆಂಗಳೂರಿನಲ್ಲಿ ಸುಸಜ್ಜಿತವಾದ ಶತಮಾನೋತ್ಸವ ಗ್ರಂಥಾಲಯ ಭವನವನ್ನು ನಿರ್ಮಿಸಲಾಗುವುದು.

ಇತರೆ ರಾಜ್ಯಗಳಲ್ಲಿರುವ ಗ್ರಂಥಾಲಯ ವ್ಯವಸ್ಥೆಯನ್ನು ಅವಲೋಕಿಸಿ ಎಲ್ಲ ವರ್ಗದ ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಮಾದರಿ ಶತಮಾನೋತ್ಸವ ಗ್ರಂಥಾಲಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಜನಸಾಮಾನ್ಯರಲ್ಲಿ ಗ್ರಂಥಾಲಯಗಳ ಕುರಿತು ಅರಿವು ಮೂಡಿಸುವುದರೊಂದಿಗೆ ಈ ಸಪ್ತಾಹದಲ್ಲಿ ಇದಕ್ಕಾಗಿ ಹಲವಾರು ರೀತಿಯಲ್ಲಿ ಶ್ರಮಿಸಿದ ಗ್ರಂಥಾಲಯ ಇಲಾಖೆಯ ವಿವಿಧ ಸ್ತರದ 28 ಮಂದಿ ಸಾಧಕರನ್ನು ಸಚಿವರು ಸನ್ಮಾನಿಸಿ ಗೌರವಿಸಿದರು.

ಬೆಂಗಳೂರು: ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಭಾಗವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಲೋಕಾರ್ಪಣೆಗೊಳಿಸಿದ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್​ನಲ್ಲಿ ಪ್ರಸ್ತುತ ಒಂದು ಲಕ್ಷ ಪುಸ್ತಕಗಳು ಲಭ್ಯವಿದೆ. ಇನ್ನು, 10 ಲಕ್ಷ ಪುಸ್ತಕಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜಾಜಿನಗರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಈ ಆ್ಯಪ್​ನ್ನು 7 ಲಕ್ಷಕ್ಕೂ ಹೆಚ್ಚು ಜನ ಬಳಸುತ್ತಿದ್ದಾರೆ. ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ಪಠ್ಯಪುಸ್ತಕ, ಸಾಮಾನ್ಯಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆಗಳು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತ ಲೇಖಕರ ಪುಸ್ತಕಗಳು ಹಾಗೆಯೇ ವಿಡಿಯೋಗಳು, ಇ-ಪುಸ್ತಕಗಳು ಸೇರಿದಂತೆ 10 ಲಕ್ಷ ಪುಸ್ತಕಗಳನ್ನು ಸೇರ್ಪಡೆಗೊಳಿಸಲು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ಮೂರು ತಿಂಗಳೊಳಗೆ 10 ಲಕ್ಷ ಪುಸ್ತಕಗಳು ಲಭ್ಯವಾಗಲಿವೆ ಎಂದರು.

ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಬೆರಳೆಣಿಕೆ ಸಂಖ್ಯೆಯ ಗ್ರಂಥಾಲಯಗಳಿವೆ ಎಂಬ ಮಾಹಿತಿ ಇದೆ. ಕರ್ನಾಟಕ ಗ್ರಂಥಾಲಯ ಇಲಾಖೆ ಇಡೀ ದೇಶದಲ್ಲೇ ಮಂಚೂಣಿಯಲ್ಲಿದೆ. ದೇಶದಲ್ಲಿಯೇ ಅತಿಹೆಚ್ಚು ಹಾಗೂ ಅತ್ಯುತ್ತಮ ಗ್ರಂಥಾಲಯಗಳನ್ನು ಹೊಂದಿರುವುದು ಕರ್ನಾಟಕ ಮಾತ್ರ.

ಪುಸ್ತಕ ಸಂಸ್ಕೃತಿ ಬೆಳೆಸಲು ಬೆಂಗಳೂರಿನಲ್ಲಿ 205 ಮತ್ತು ರಾಜ್ಯದಲ್ಲಿ 7000ಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಇದು ರಾಷ್ಟ್ರೀಯ ದಾಖಲೆಯಾಗಿದೆ. ಡಿಜಿಟಲ್ ಗ್ರಂಥಾಲಯಕ್ಕೆ ಸುಮಾರು 7 ಲಕ್ಷ ಸದಸ್ಯರು ಚಂದಾದಾರರಾಗಿದ್ದಾರೆ. ರಾಜ್ಯದ ಎಲ್ಲ ಗ್ರಾಮೀಣ ಗ್ರಂಥಾಲಯಗಳಿಗೆ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದ್ದು, ಈ ಕುರಿತು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನ 100 ಗ್ರಂಥಾಲಯಗಳ ಡಿಜಿಟಲೀಕರಣ: ಬೆಂಗಳೂರಿನಲ್ಲಿ 205 ಗ್ರಂಥಾಲಯಗಳಲ್ಲಿ 100 ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಈ ಗ್ರಂಥಾಲಯಗಳನ್ನು ತಂತ್ರಜ್ಞಾನದೊಂದಿಗೆ ಡಿಜಿಟಲೀಕರಣಗೊಳಿಸಿ ಇನ್ನು ನಾಲ್ಕು ತಿಂಗಳಲ್ಲಿ ತಂತ್ರಜ್ಞಾನದ ಸೇವೆ ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗುವುದು. ಈ ಡಿಜಿಟಲೀಕರಣ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ಕೈಗೊಂಡು ನಮ್ಮ ಓದುಗರಿಗೆ ಕೈಯಲ್ಲೇ ಪುಸ್ತಕಗಳು ದೊರೆಯುವಂತೆ ಮಾಡಲಾಗುವುದು ಎಂದರು.

ಶತಮಾನೋತ್ಸವ ಸ್ಮಾರಕ ಗ್ರಂಥಾಲಯ ಭವನ ನಿರ್ಮಾಣ: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್​ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಅಣ್ಣಾ ಸ್ಮಾರಕ ಗ್ರಂಥಾಲಯ ಭವನದಂತೆ ಬೆಂಗಳೂರಿನಲ್ಲಿ ಸುಸಜ್ಜಿತವಾದ ಶತಮಾನೋತ್ಸವ ಗ್ರಂಥಾಲಯ ಭವನವನ್ನು ನಿರ್ಮಿಸಲಾಗುವುದು.

ಇತರೆ ರಾಜ್ಯಗಳಲ್ಲಿರುವ ಗ್ರಂಥಾಲಯ ವ್ಯವಸ್ಥೆಯನ್ನು ಅವಲೋಕಿಸಿ ಎಲ್ಲ ವರ್ಗದ ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಮಾದರಿ ಶತಮಾನೋತ್ಸವ ಗ್ರಂಥಾಲಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಜನಸಾಮಾನ್ಯರಲ್ಲಿ ಗ್ರಂಥಾಲಯಗಳ ಕುರಿತು ಅರಿವು ಮೂಡಿಸುವುದರೊಂದಿಗೆ ಈ ಸಪ್ತಾಹದಲ್ಲಿ ಇದಕ್ಕಾಗಿ ಹಲವಾರು ರೀತಿಯಲ್ಲಿ ಶ್ರಮಿಸಿದ ಗ್ರಂಥಾಲಯ ಇಲಾಖೆಯ ವಿವಿಧ ಸ್ತರದ 28 ಮಂದಿ ಸಾಧಕರನ್ನು ಸಚಿವರು ಸನ್ಮಾನಿಸಿ ಗೌರವಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.