ಬೆಂಗಳೂರು: 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದ ಸಮಾರೋಪ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ಕಳೆದ ನಾಲ್ಕು ದಿನಗಳಿಂದ ಇಲ್ಲಿಯೇ ಬೀಡುಬಿಟ್ಟಿದ್ದ ಅತಿಥಿಗಳು ತಮ್ಮ ತಮ್ಮ ಊರಿನತ್ತ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
ನಗರದ ಜಿಕೆವಿಕೆ ಆವರಣದಲ್ಲಿ ಜ. 3ರಿಂದ ಆರಂಭವಾಗಿರುವ 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಈಗಾಗಲೇ ಮಕ್ಕಳು, ಮಹಿಳೆಯರು, ರೈತರು ಹಾಗೂ ವಿಜ್ಞಾನ ಸಂಬಂಧಿ ಹಲವು ಕಾರ್ಯಕ್ರಮಗಳು ನೆರವೇರಿದ್ದು, ಇಂದು ಸಂಜೆ 4:30ಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾರೋಪ ಸಮಾರಂಭ ನೆರವೇರಿಸಲಿದ್ದಾರೆ.
ಈ ಕಾರ್ಯಕ್ರಮ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮುದಾಯ ಕೇಂದ್ರದಲ್ಲಿ ನಡೆಯಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇನ್ನೊಂದೆಡೆ ಮುಖ್ಯ ವೇದಿಕೆ ಕೂಡ ತೆರವುಗೊಳಿಸಲಾಗಿದೆ.